ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ

ಬೆಂಗಳೂರು, ಮೇ 27: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ದಟ್ಟವಾಗುತ್ತಿದ್ದಂತೆ, ಅವರ ಬೆಂಬಲಿಗರು ಮತ್ತು ಅಹಿಂದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ನಿರ್ಧಾರದ ವಿರುದ್ಧ ನಿಗಿ ನಿಗಿ ಎನ್ನುತ್ತಿರುವ ಅಭಿಮಾನಿಗಳು ಸಿದ್ದರಾಮಯ್ಯನವರ ನಿವಾಸದ ಮುಂದೆ ಜಮಾಯಿಸಿ ಪ್ರತಿಭಟಿಸಿದರು. ‘ಯಾವನು ಹೈಕಮಾಂಡ್’ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೆ ಕಾಂಗ್ರೆಸ್ ಪಕ್ಷ ಸರ್ವನಾಶವಾಗುತ್ತದೆ ಎಂದು ಬೆಂಬಲಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೆ ಸಿದ್ದರಾಮಯ್ಯ ಜೆಡಿಎಸ್ ತೊರೆದ ನಂತರ ಆ ಪಕ್ಷಕ್ಕೆ ಹಿನ್ನಡೆಯಾಗಿತ್ತು ಎಂದು ಉದಾಹರಿಸಿದ ಅಭಿಮಾನಿಗಳು, ಇದೇ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೂ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ. ಸಿದ್ದರಾಮಯ್ಯ ಒಬ್ಬ ಜನಪ್ರಿಯ ನಾಯಕರು ಮತ್ತು ಅಹಿಂದ ವರ್ಗದ ಬಲ ಎಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವುದೇ ಸಿದ್ದರಾಮಯ್ಯರಿಂದ, ಒಂದು ವೇಳೆ ಸಿಎಂ ಸ್ಥಾನದಿಂದ ಅವರನ್ನ ಕೆಳಗಿಳಿಸಿದರೆ, 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತೆ ಎಂದಿದ್ದಾರೆ. ಇನ್ನು ಆಕ್ರೋಶ ವ್ಯಕ್ತಪಡಿಸುತ್ತಿದ್ದ ಅಭಿಮಾನಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *