ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಕಾಂಗ್ರೆಸ್​​ನ ಮುಸ್ಲಿಂ ನಾಯಕರ ಸಭೆ

ಬೆಂಗಳೂರು, ಮೇ 27: ಮುಖ್ಯಮಂತ್ರಿ ಬದಲಾವಣೆ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಮುಸ್ಲಿಂ ನಾಯಕರು ತಮ್ಮ ತಮ್ಮ ಸಮುದಾಯದ ಸ್ಥಾನಮಾನ ಮತ್ತು ಭವಿಷ್ಯದ ಬಗ್ಗೆ ಚರ್ಚಿಸಿದ್ದಾರೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆಗಳ ಬಗ್ಗೆ ವದಂತಿಗಳು ಹರಡಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಸಚಿವ ಜಮೀರ್ ಅಹಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಅಲ್ಪಸಂಖ್ಯಾತ ನಾಯಕರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಜಮೀರ್ ಅಹಮದ್, ಪ್ರಸ್ತುತ ಸನ್ನಿವೇಶದಲ್ಲಿ ತಮ್ಮ ಸಮುದಾಯಕ್ಕೆ ಹೊಸ ಸಂಪುಟದಲ್ಲಿ ಯಾವ ಸ್ಥಾನಮಾನಗಳು ಲಭ್ಯವಾಗಬಹುದು, ಎಷ್ಟು ಸಚಿವ ಸ್ಥಾನಗಳನ್ನು ಕೇಳಬೇಕು ಮತ್ತು ಉಪಮುಖ್ಯಮಂತ್ರಿ ಸ್ಥಾನದ ಕುರಿತೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಭೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *