ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಕೂದಲೆಳೆ ಅಂತರದಲ್ಲಿ ಸಚಿವ ಸತೀಶ್​ ಜಾರಕಿಹೊಳಿ ಪಾರು – Kannada News | Haveri: minister Satish Jarkiholi Narrowly Escapes Pendal Collapse

ಹಾವೇರಿ, ಜನವರಿ 03: ಏಕಾಏಕಿ ಜೋರಾಗಿ ಬೀಸಿದ ಸುಂಟರಗಾಳಿಗೆ ಪೆಂಡಾಲ್​​ ಕುಸಿದಿದ್ದು, ಸಚಿವ ಸತೀಶ್ ಜಾರಕಿಹೊಳಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ನಡೆದಿದೆ. ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ಹಿನ್ನೆಲೆ ಪೆಂಡಾಲ್ ಹಾಕಲಾಗಿತ್ತು. ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಮುಗಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಿದ್ದರು. ಈ ವೇಳೆ ಬೀಸಿದ ಸುಂಟರಗಾಳಿಗೆ ಸತೀಶ್ ಜಾರಕಿಹೊಳಿ ಹಿಂದೆ ಇದ್ದ ಪೆಂಡಾಲ್ ಹಾರಿ ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಜಾರಕಿಹೊಳಿ ಸೇರಿದಂತೆ ಕ್ಷಣ ಕಾಲ ಎಲ್ಲರೂ ವಿಚಲಿತಗೊಂಡರು.

ವರದಿ: ಅಣ್ಣಪ್ಪ ಬಾರ್ಕಿ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *