‘ಸುದೀಪ್​​ ಸರ್ ಬಗ್ಗೆ ಯೋಚಿಸೋದಾದ್ರೂ ಈ ಯಮ ಕಿಂಕರರ ದಾಟಬೇಕು’; ರಜತ್-ವಿನಯ್

‘ಸುದೀಪ್​​ ಸರ್ ಬಗ್ಗೆ ಯೋಚಿಸೋದಾದ್ರೂ ಈ ಯಮ ಕಿಂಕರರ ದಾಟಬೇಕು’; ರಜತ್-ವಿನಯ್

ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ (Satish) ಅವರು ನಟ ಸುದೀಪ್ ಮೇಲೆ ನಿರಂತರವಾಗಿ ಟೀಕೆಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಈ ಪ್ರಕರಣದಲ್ಲಿ ಸುದೀಪ್ ಪರವಾಗಿ ವಿನಯ್ ಹಾಗೂ ರಜತ್ ಮಾತನಾಡುತ್ತಿದ್ದಾರೆ. ಇವರ ವಿರುದ್ಧ ಸತೀಶ್ ದೂರು ದಾಖಲು ಮಾಡಿದ್ದಾರೆ. ಹೀಗಿರುವಾಗಲೇ ರಜತ್ ಅವರು ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​​ನಲ್ಲಿ ತಾವು ಯಾವಾಗಲೂ ಸುದೀಪ್ ಪರ ನಿಲ್ಲೋದಾಗಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಜೊತೆಗೆ ಒಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಸತೀಶ್ ಅವರು ಮೂತ್ರ ಮಾಡುವ ವಿಡಿಯೋ ಹಾಕಿದ್ದಲ್ಲದೆ, ‘ದಾದಾ ಯಾರ್ ಗೊತ್ತಾ’ ಹಾಡನ್ನು ಪೋಸ್ಟ್ ಮಾಡಿದ್ದರು. ಇದು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಆ ಬಳಿಕ ಸತೀಶ್ ಅವರನ್ನು ರಜತ್ ಪ್ರಶ್ನೆ ಮಾಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಎಚ್ಚರಿಕೆಯನ್ನು ಸಹ ನೀಡಿದ್ದರು. ಅಲ್ಲದೆ, ವಿನಯ್ ಕೂಡ ರಜತ್ ಬೆಂಬಲಕ್ಕೆ ನಿಂತು, ಸತೀಶ್​​ಗೆ ಎಚ್ಚರಿಕೆ ನೀಡಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಸತೀಶ್ ರಜತ್ ಹಾಗೂ ವಿನಯ್ ಮೇಲೆ ಕೇಸ್ ಹಾಕಿದ್ದಾರೆ.

 

View this post on Instagram

 

A post shared by Rajath kishan G (@bujjjjii)

ಈ ಬೆನ್ನಲ್ಲೇ ಪೋಸ್ಟ್ ಮಾಡಿರೋ ರಜತ್ ಅವರು, ‘ನಮ್ಮ ಬಾದ್​​ಶಾ ಕಿಚ್ಚ ಸರ್ ಬಗ್ಗೆ ಮಾತಾಡೋದು ಅಲ್ಲ, ಕೆಟ್ಟದಾಗಿ ಯೋಚನೆ ಮಾಡ್ಬೇಕು ಅಂದರೂನೂ ಈ ಯಮ ಕಿಂಕರರನ ಮೊದಲು ದಾಟಬೇಕು. ವಿ ಲವ್​ ಯೂ ಸರ್’ ಎಂದು ಸುದೀಪ್ ಜೊತೆ ಇರೋ ಫೋಟೋನ ವಿನಯ್ ಹಾಗೂ ರಜತ್ ಕೊಲ್ಯಾಬರೇಷನ್ ಅಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಕೇಸ್ ಆದ್ಮೇಲೆ ರಾಜಿಗೆ ಬಂದ ವಿನಯ್ ಗೌಡ’: ಖಡಕ್ ತಿರುಗೇಟು ಕೊಟ್ಟ ಡಾಗ್ ಸತೀಶ್

ರಜತ್ ಅವರು ಸುದೀಪ್ ಅಭಿಮಾನಿ. ಬಿಗ್ ಬಾಸ್​​​​ಗೆ ಬಂದ ಬಳಿಕ ಸುದೀಪ್ ಅವರ ಜೊತೆ ಒಳ್ಳೆಯ ನಂಟು ಬೆಳೆಯಿತು. ವಿನಯ್ ಹಾಗೂ ರಜತ್ ಮಚ್ಚಿನ ಕೇಸ್​ ಅಲ್ಲಿ ಒಳಕ್ಕೆ ಹೋದಾಗ, ಅವರನ್ನು ಬಿಡಿಸಿ ಕರೆದುಕೊಂಡು ಬಂದಿದ್ದು ಸುದೀಪ್ ಎನ್ನಲಾಗಿದೆ. ಈ ವಿಷಯವನ್ನು ರಜತ್ ಅವರು ಅನೇಕ ಬಾರಿ ಹೇಳಿದ್ದರು. ಈ ಕಾರಣದಿಂದ ಸುದೀಪ್​​​ ಬಗ್ಗೆ ಯಾರೋ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದಾಗ ಅದನ್ನು ಇವರು ವಿರೋಧಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *