
ಚಿತ್ರದುರ್ಗ, ಮೇ 17: ಚಳ್ಳಕೆರೆಯಲ್ಲಿ ನಡೆದ ದಿವಂಗತ ಶಾಸಕ ಡಿ. ಸುಧಾಕರ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಹಾಲಿ ಶಾಸಕ ಟಿ. ರಘುಮೂರ್ತಿ ಭಾವುಕರಾಗಿ ಮಾತನಾಡಿದ್ದಾರೆ. ಡಿ. ಸುಧಾಕರ್ ಅವರೊಂದಿಗಿನ ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಅವರಿಬ್ಬರ ನಡುವೆ ಸಹೋದರ ಸಂಬಂಧವಿತ್ತು ಎಂದು ರಘುಮೂರ್ತಿ ಸ್ಮರಿಸಿಕೊಂಡರು. 2008ರಲ್ಲಿ ತಾವು ಶಾಸಕರಾಗಲು ಬಂದ ದಿನಗಳಿಂದ ಸುಧಾಕರ್ ಅವರೊಂದಿಗಿನ ಸಂಪರ್ಕವನ್ನು ನೆನಪಿಸಿಕೊಂಡರು.