ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ: ಚುನಾವಣಾ ಆಯೋಗದ ನಡೆ ಪ್ರಶ್ನಿಸಿದ್ದ ಅರ್ಜಿ ವಜಾ – Kannada News | Supreme Court Dismisses TMC’s Plea Against Election Commission Over West Bengal Vote Counting Staff

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ

ನವದೆಹಲಿ, ಮೇ 01: ಪಶ್ಚಿಮ ಬಂಗಾಳದ ಮತ ಎಣಿಕೆಗೆ ಕೇಂದ್ರ ಸರ್ಕಾರದ ಸಿಬ್ಬಂದಿಯನ್ನು ಮಾತ್ರ ಬಳಸಿಕೊಳ್ಳಬೇಕೆಂಬ ಚುನಾವಣಾ ಆಯೋಗದ ಆದೇಶದ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ (ಟಿಎಂಸಿ) ಸಲ್ಲಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆ ಮೂಲಕ ನ್ಯಾಯಾಲಯದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಹಿನ್ನಡೆಯಾಗಿದೆ. ಈ ಮೊದಲು ಕಲ್ಕತ್ತಾ ಹೈಕೋರ್ಟ್ ಕೂಡ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಮತ ಎಣಿಕೆಯ ಸಂದರ್ಭದಲ್ಲಿ ಪಕ್ಷಗಳ ಪ್ರತಿನಿಧಿಗಳು ಹಾಜರಿರುತ್ತಾರೆ ಮತ್ತು ಚುನಾವಣಾ ಆಯೋಗದ ಸರ್ಕ್ಯುಲರ್ ನಿಯಮಗಳಿಗೆ ವಿರುದ್ಧವಾಗಿಲ್ಲ ಎಂದು ಪೀಠ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದೆ. ಟಿಎಂಸಿ ಪರ ವಾದಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಮೀನಾಕ್ಷಿ ಅರೋರ, ಏಪ್ರಿಲ್ 13ರ ಸರ್ಕ್ಯುಲರ್ ಬಗ್ಗೆ ಏಪ್ರಿಲ್ 29ರವರೆಗೆ ಮಾಹಿತಿ ಸಿಗಲಿಲ್ಲ ಎನ್ನುವ ಮೂಲಕ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದ್ದರು. ಆದರೆ ಚುನಾವಣಾ ಆಯೋಗ ಪರ ವಾದಿಸಿದ ಹಿರಿಯ ವಕೀಲ ಡಿ.ಎಸ್. ನಾಯ್ಡು, ಮತ ಎಣಿಕೆ ಪ್ರಕ್ರಿಯೆಯ ಮೇಲಿನ ಸಂಪೂರ್ಣ ನಿಯಂತ್ರಣ ರಾಜ್ಯ ಸರ್ಕಾರದ ಅಧಿಕಾರಿಯಾಗಿರುವ ರಿಟರ್ನಿಂಗ್ ಅಧಿಕಾರಿ ಕೈಯಲ್ಲೇ ಇರುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಬಾಗ್ಚಿ ಅವರಿದ್ದ ಪೀಠ, ಕೌಂಟಿಂಗ್ ಅಧಿಕಾರಿ ಕೇಂದ್ರ ಸರ್ಕಾರದ ಪ್ರತಿನಿಧಿ ಎಂದು ಹೇಳುವುದರಿಂದ ವಿಶೇಷ ವ್ಯತ್ಯಾಸವಿಲ್ಲ. ಇಂತಹ ನಿರ್ಧಾರಗಳು ಚುನಾವಣಾ ಆಯೋಗದ ವ್ಯಾಪ್ತಿಗೆ ಸೇರುತ್ತವೆ. ಜೊತೆಗೆ, ಪಕ್ಷಗಳಿಂದ ನೇಮಕಗೊಂಡ ಕೌಂಟಿಂಗ್ ಏಜೆಂಟ್‌ಗಳು, ಮೈಕ್ರೋ ಅಬ್ಸರ್ವರ್‌ಗಳು ಸೇರಿದಂತೆ ಹಲವಾರು ಮೇಲ್ವಿಚಾರಣಾ ವ್ಯವಸ್ಥೆಗಳು ಈಗಾಗಲೇ ಇವೆ ಎಂಬುದನ್ನು ಉಲ್ಲೇಖಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:43 am, Sat, 2 May 26

Source link

Leave a Reply

Your email address will not be published. Required fields are marked *