ಸ್ಪೀಕರ್ ಕೊಠಡಿಗೆ ನುಗ್ಗಿ ಕಾಂಗ್ರೆಸ್ ಸಂಸದರಿಂದ ಪ್ರಧಾನಿಗೆ ಬೆದರಿಕೆ; ಹೊಸ ವಿಡಿಯೋ ವೈರಲ್ – Kannada News | Minister Kiren Rijiju releases new video alleging Congress MPs abused Speaker threatened PM

ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಪುಸ್ತಕದ ಆಯ್ದ ಭಾಗಗಳನ್ನು ಓದುವುದನ್ನು ತಡೆದ ಸ್ಪೀಕರ್ ಓಂ ಬಿರ್ಲಾ ಅವರ ನಿರ್ಧಾರದ ವಿರುದ್ಧ ಪ್ರತಿಪಕ್ಷಗಳು ಪ್ರತಿಭಟಿಸಿದ ನಂತರ ಕೇಂದ್ರ ಸಂಸತ್ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiren Rijiju) ಇಂದು ಲೋಕಸಭೆಯಲ್ಲಿ ನಡೆದ ಘರ್ಷಣೆಯ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

20ರಿಂದ 25 ಕಾಂಗ್ರೆಸ್ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಗೆ ಬಲವಂತವಾಗಿ ಪ್ರವೇಶಿಸಿ, ನಿಂದನೀಯ ಭಾಷೆ ಬಳಸಿ, ಪ್ರಧಾನಿ ನರೇಂದ್ರ ಮೋದಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವೀಡಿಯೊ ಬಿಡುಗಡೆ ಮಾಡಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಸಚಿವ ಕಿರಣ್ ರಿಜಿಜು ಒಂದುವೇಳೆ ಆ ದಿನ ಬಿಜೆಪಿ ಮತ್ತು ಎನ್‌ಡಿಎ ಸಂಸದರು ಸಂಯಮವನ್ನು ಕಳೆದುಕೊಂಡಿದ್ದರೆ ಪರಿಸ್ಥಿತಿ ತೀವ್ರವಾಗುತ್ತಿತ್ತು ಎಂದು ಹೇಳಿದ್ದಾರೆ. ಇದಾದ ಬಳಿಕ ಅವರು ಎಕ್ಸ್​ನಲ್ಲಿ ಕಾಂಗ್ರೆಸ್ ಸಂಸದರು ಸ್ಪೀಕರ್ ಕೊಠಡಿಯೊಳಗಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಹಿರಂಗವಾಗಿ ಕ್ಷಮೆ ಕೇಳಿ; ರ‍್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ ಕೂಗಿದ ಕಾಂಗ್ರೆಸ್ ವಿರುದ್ಧ ಕಿರಣ್ ರಿಜಿಜು ಆಕ್ರೋಶ

ನಾನು ಬಿಜೆಪಿ ಮತ್ತು ಎನ್‌ಡಿಎ ಸಂಸದರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರೆ ಅದು ಅವ್ಯವಸ್ಥೆಯನ್ನು ಸೃಷ್ಟಿಸುತ್ತಿತ್ತು. ನಮಗೆ ಅಂತಹ ವಿಷಯಗಳು ಬೇಡ. ಸುಮಾರು 20-25 ಸಂಸದರು ಸ್ಪೀಕರ್ ಕೊಠಡಿಗೆ ಬಲವಂತವಾಗಿ ಪ್ರವೇಶಿಸಿದರು. ಆಗ ಏನಾಯಿತು ಮತ್ತು ಅವರು ಯಾವ ರೀತಿಯ ಅನುಚಿತ ವರ್ತನೆ ಮಾಡುತ್ತಿದ್ದಾರೆ ಎಂದು ನೋಡಲು ನಾನು ಓಡಿಹೋದೆ. ಆಗ ಕಾಂಗ್ರೆಸ್ ಸಂಸದರು ಸ್ಪೀಕರ್​ಗೆ ನಿಂದಿಸುತ್ತಿದ್ದರು. ಪ್ರಿಯಾಂಕಾ ಗಾಂಧಿ ಕೂಡ ಅಲ್ಲಿದ್ದರು. ಕಾಂಗ್ರೆಸ್ ಸಂಸದರು ಸ್ಪೀಕರ್, ಪ್ರಧಾನಿಯನ್ನು ಅವರ ಮುಂದೆಯೇ ನಿಂದಿಸಿದರು ಎಂದು ರಿಜಿಜು ಆರೋಪಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು

ಕಾಂಗ್ರೆಸ್ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಆ ವೇಳೆ ನಿಂದನೀಯ ಭಾಷೆಯನ್ನು ಬಳಸಲಿಲ್ಲ. ಆದರೆ ಇತರ ಕಾಂಗ್ರೆಸ್ ಸಂಸದರು ಹಾಗೆ ಮಾಡಿದ್ದಾರೆ. ಆಗ ಅವರಿಬ್ಬರೂ ಅಲ್ಲಿದ್ದರು. ‘ದೇಶದ ಪ್ರಧಾನಿಗೆ ನಾವು ಏನು ಮಾಡುತ್ತೇವೆ ಎಂದು ನೋಡಿ. ಸಂಸತ್ತಿನಲ್ಲಿ ನಾವು ಅವರೊಂದಿಗೆ ಏನು ಮಾಡುತ್ತೇವೆ ಎಂದು ನೋಡಿ’ ಎಂದು ಹೇಳುತ್ತಿದ್ದರು. ಅದೆಲ್ಲವನ್ನೂ ವಿಡಿಯೋದಲ್ಲಿ ದಾಖಲಿಸಲಾಗಿದೆ. ಆ ಘಟನೆ ನಡೆದಾಗ ನಾನೂ ಅಲ್ಲಿದ್ದೆ. ಸ್ಪೀಕರ್ ತುಂಬಾ ಮೃದು ಸ್ವಭಾವದ ವ್ಯಕ್ತಿ. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *