ಹಾರ್ದಿಕ್​ಗಾಗಿ ಸ್ಫೋಟಕ ಆರಂಭಿಕನನ್ನೇ ಬಿಟ್ಟುಕೊಡಲು ಮುಂದಾದ ರಾಜಸ್ಥಾನ್ ರಾಯಲ್ಸ್ – Kannada News | Mumbai Indians Plans: Hardik Pandya Exit, Yashasvi Jaiswal Entry for IPL Future and Leadership

ಮುಂಬೈ ಇಂಡಿಯನ್ಸ್ (Mumbai Indians) ತಂಡದಿಂದ ಗುಜರಾತ್ ಟೈಟಾನ್ಸ್ ತಂಡಕ್ಕೆ ತೆರಳಿ ಅಲ್ಲಿ ಸತತ ಎರಡು ಆವೃತ್ತಿಗಳಲ್ಲಿ ತಂಡವನ್ನು ಫೈನಲ್​ಗೇರಿಸಿ, ಒಮ್ಮೆ ಚಾಂಪಿಯನ್‌ ಮಾಡುವಲ್ಲಿ ಯಶಸ್ವಿಯಾಗಿದ್ದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯರನ್ನು (Hardik Pandya) ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮತ್ತೆ ತನ್ನ ತೆಕ್ಕೆಗೆ ಹಾಕಿಕೊಂಡಿತು. ಆದರೆ ಹಾರ್ದಿಕ್ ಬಂದ ಬಳಿಕ ತಂಡದ ಪ್ರದರ್ಶನ ಮತ್ತಷ್ಟು ಪಾತಾಳಕ್ಕೆ ಕುಸಿಯಿತು. 2026 ರ ಪಿಎಲ್ ಸೀಸನ್‌ನಲ್ಲಿಯೂ ಹಾರ್ದಿಕ್ ನಾಯಕತ್ವದಲ್ಲಿ ತಂಡದ ಪ್ರದರ್ಶನ ನಿರಾಶಾದಾಯಕವಾಗಿತ್ತು. ತಂಡವು ಆಡಿದ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 9 ನೇ ಸ್ಥಾನ ಗಳಿಸಿ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿತ್ತು. ಹೀಗಾಗಿ ಮುಂಬರುವ ಆವೃತ್ತಿಗೂ ಮುನ್ನ ತಂಡದಲ್ಲಿ ಬದಲಾವಣೆಗಳನ್ನು ಮಾಡಲು ಮುಂದಾಗಿರುವ ಮುಂಬೈ ಪ್ರಾಂಚೈಸಿ ಹಾರ್ದಿಕ್​ರನ್ನು ತಂಡದಿಂದ ಬಿಟ್ಟುಕೊಟ್ಟು ಬೇರೊಬ್ಬ ಸ್ಟಾರ್ ಆಟಗಾರನನ್ನು ತಂಡಕ್ಕೆ ಸೇರಿಸಿಕೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ.

ರಾಜಸ್ಥಾನ್, ಮುಂಬೈ ನಡುವೆ ಟ್ರೇಡಿಂಗ್

ರೆವ್‌ಸ್ಪೋರ್ಟ್ಸ್ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರನ್ನು ಟ್ರೇಡಿಂಗ್ ಮಾಡಿಕೊಳ್ಳಲು ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ವರದಿಯಾಗಿದೆ. ಅಲ್ಲದೆ ಈ ಒಪ್ಪಂದ ಅಂತಿಮ ಹಂತಕ್ಕೂ ಬಂದಿದೆ ಎಂಬ ಮಾತುಗಳಿವೆ. ಇಲ್ಲಿ ಇನ್ನೊಂದು ಗಮನಿಸಬೇಕಾದ ಸಂಗತಿಯೆಂದರೆ ಟ್ರೇಡ್ ವಿಂಡೋ ಮೂಲಕ ಈ ಉಭಯ ಫ್ರಾಂಚೈಸಿಗಳು ಇಬ್ಬರು ಆಟಗಾರರನ್ನು ವಿನಿಮಯ ಮಾಡಿಕೊಳ್ಳಲು ನೋಡುತ್ತಿವೆ ಎಂದು ವರದಿಯಾಗಿದೆ. ಅಂದರೆ ಮುಂಬೈ ತಂಡದಲ್ಲಿರುವ ಹಾರ್ದಿಕ್ ಪಾಂಡ್ಯರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಕಳುಹಿಸಿ, ರಾಜಸ್ಥಾನ್ ರಾಯಲ್ಸ್ ತಂಡದಲಿರುವ ಯಶಸ್ವಿ ಜೈಸ್ವಾಲ್ ಅವರನ್ನು ಮುಂಬೈ ತಂಡಕ್ಕೆ ಸೇರಿಸಿಕೊಳ್ಳಲು ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ರೋಹಿತ್ ಸ್ಥಾನಕ್ಕೆ ಜೈಸ್ವಾಲ್

ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಈ ನಿರ್ಧಾರದ ಹಿಂದೆ ತಂಡದ ಮುಂದಿನ ಭವಿಷ್ಯ ಅಡಗಿದೆ ಎಂದರೆ ತಪ್ಪಾಗಲಾರದು. ಏಕೆಂದರೆ ಪ್ರಸ್ತುತ ಮುಂಬೈ ತಂಡದಲ್ಲಿ ಆರಂಭಿಕರಾಗಿ ಆಡುತ್ತಿರುವ ರೋಹಿತ್ ಶರ್ಮಾ ವೃತ್ತಿಜೀವನದ ಅಂಚಿನಲ್ಲಿದ್ದಾರೆ. ಹೀಗಾಗಿ ಅವರ ಬದಲಿಯಾಗಿ ಭಾರತದ ಮತ್ತೊಬ್ಬ ಪ್ರತಿಭಾವಂತ ಆಟಗಾರನ ಹುಡುಕಾಟದಲ್ಲಿ ಮುಂಬೈ ಇದೆ. ಅದರಂತೆ ದೇಶಿ ಕ್ರಿಕೆಟ್​ನಲ್ಲಿ ಮುಂಬೈ ಪರ ಆಡುವ ಯಶಸ್ವಿ ಜೈಸ್ವಾಲ್​ಗೆ ಮುಂಬೈ ಗಾಳ ಹಾಕಿದೆ. ಇದಕ್ಕೆ ಪೂರಕವಾಗಿ ಜೈಸ್ವಾಲ್ ಕೂಡ ಆರಂಭಿಕನಾಗಿ ಆಡುತ್ತಿದ್ದಾರೆ. ಹೀಗಾಗಿ ರೋಹಿತ್​ರನ್ನು ಬದಲಿಸಲು ಜೈಸ್ವಾಲ್​ರನ್ನು ತಂಡಕ್ಕೆ ಸೇರಿಸಿಕೊಳ್ಳಲು ಮುಂಬೈ ಮುಂದಾಗಿದೆ.

IPL 2026: ಮುಂಬೈ ನಾಯಕ ಹಾರ್ದಿಕ್ ಪಾಂಡ್ಯಗೆ ದಂಡದ ಜೊತೆಗೆ ಡಿಮೆರಿಟ್ ಪಾಯಿಂಟ್

ಹಾರ್ದಿಕ್ ಬದಲು ತಿಲಕ್​ಗೆ ನಾಯಕತ್ವ

ಇನ್ನು ಹಾರ್ದಿಕ್​ ಪಾಂಡ್ಯರನ್ನು ತಂಡದಿಂದ ಬಿಡುಗಡೆ ಮಾಡಲು ಪ್ರಮುಖ ಕಾರಣವೆಂದರೆ ಅವರ ನಾಯಕತ್ವದಲ್ಲಿ ಮುಂಬೈ ತಂಡದ ಪ್ರದರ್ಶನ ತೀರ ಕಳಪೆಯಾಗಿತ್ತು. ಅಲ್ಲದೆ ಆಟಗಾರನಾಗಿಯೂ ಹಾರ್ದಿಕ್ ಪ್ರದರ್ಶನ ಅಷ್ಟಕಷ್ಟೆ ಹೀಗಾಗಿ ಹಾರ್ದಿಕ್​ರನ್ನು ತಂಡದಲ್ಲಿ ಕೇವಲ ಆಟಗಾರನಾಗಿ ತಂಡದಲ್ಲಿ ಉಳಿಸಿಕೊಳ್ಳಲು ಮುಂಬೈಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನು ತಂಡದಿಂದ ಬಿಡುಗಡೆ ಮಾಡಿ ಅವರ ಸ್ಥಾನದಲ್ಲಿ ಅಂದರೆ ತಂಡದ ನಾಯಕತ್ವದ ಜವಾಬ್ದಾರಿಯನ್ನು ತಿಲಕ್ ವರ್ಮಾಗೆ ನೀಡಲು ಮುಂಬೈ ಚಿಂತಿಸಿದೆ ಎನ್ನಲಾಗುತ್ತಿದೆ. ಸದ್ಯಕ್ಕೆ ಕೇಳಿಬರುತ್ತಿರುವ ಈ ವರದಿಗಳನ್ನೆಲ್ಲ ಗಮನಿಸಿದರೆ, ಮುಂಬರುವ ಐಪಿಎಲ್​ನಲ್ಲಿ ಮುಂಬೈ ಫ್ರಾಂಚೈಸಿ ಕೆಲವು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವುದಂತೂ ಖಚಿತವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *