ಹಾವೇರಿ, ಏಪ್ರಿಲ್ 18: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಹಾವೇರಿಯ ಜನಸಾಮಾನ್ಯರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ಎಲ್ಪಿಜಿ ಸಿಲಿಂಡರ್ ಸಿಗದೆ ಹೈರಾಣಾದ ವ್ಯಾಪಾರಿಯೊಬ್ಬರು ಅನಿಲ ತುಂಬಿಸಲು ಸುಮಾರು 10 ಕಿಲೋ ಮೀಟರ್ ದೂರದವರೆಗೆ ಆಟೋಗೆ ಹಗ್ಗ ಕಟ್ಟಿ ಓಮಿನಿ ಕಾರನ್ನು ಎಳೆದುಕೊಂಡು ಬಂದ ಘಟನೆ ಹಾವೇರಿ-ಹಾನಗಲ್ ರಸ್ತೆಯಲ್ಲಿ ಕಂಡುಬಂದಿದೆ. ಗುಡಿ ಕೈಗಾರಿಕೆಯಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಿಗೆ ರೊಟ್ಟಿ ಪೂರೈಕೆ ಮಾಡುವ ವ್ಯಾಪಾರಿಯೊಬ್ಬರು ತಮ್ಮ ಜೀವನೋಪಾಯಕ್ಕಾಗಿ ಎಲ್ಪಿಜಿ ಅವಲಂಬಿಸಿದ್ದಾರೆ. ಆದರೆ, ಕಳೆದ ಕೆಲವು ದಿನಗಳಿಂದ ಗ್ಯಾಸ್ ಕೊರತೆ ಎದುರಾಗಿದ್ದು, ಬಂಕ್ಗಳು ಬಂದ್ ಆಗಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.