ಚಿಂತ್ಪುರಿ, ಏಪ್ರಿಲ್ 30: ಹಿಮಾಚಲ ಪ್ರದೇಶದ ಉನಾದಲ್ಲಿ ಕಾರು ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಮಾತಾ ಚಿಂತ್ಪೂರ್ಣಿ ದೇವಸ್ಥಾನಕ್ಕೆ ತೀರ್ಥಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಇಬ್ಬರು ಅಪಘಾತದಲ್ಲಿ (Road Accident) ಸಾವನ್ನಪ್ಪಿದ್ದಾರೆ. ಕಾರು ಕಣಿವೆಗೆ ಬಿದ್ದ ನಂತರ ಬೆಂಕಿ ಹೊತ್ತಿಕೊಂಡಿದೆ. ಕಾರನ್ನು ಅತಿ ವೇಗದಲ್ಲಿ ಚಲಾಯಿಸುತ್ತಿದ್ದಾಗ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದೆ ಎಂದು ಪೊಲೀಸ್ ತಿಳಿಸಿದ್ದಾರೆ.
ಭರ್ವೈನ್-ಹೋಶಿಯಾರ್ಪುರ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಮಾತಾ ಚಿಂತ್ಪೂರ್ಣಿ ದೇವಸ್ಥಾನಕ್ಕೆ ತೀರ್ಥಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಕಾರಿನೊಳಗೆ ಇಬ್ಬರು ಇದ್ದರು. ಆ ಕಾರು ಲುಧಿಯಾನದ ನೋಂದಣಿ ಸಂಖ್ಯೆಯ ಪ್ಲೇಟ್ ಅನ್ನು ಹೊಂದಿತ್ತು. ಕಾರು ಆಳವಾದ ಕಂದಕಕ್ಕೆ ಬಿದ್ದ ತಕ್ಷಣ, ಅದು ಬೆಂಕಿಗೆ ಆಹುತಿಯಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ