ಇಂಡಸ್ಟ್ರಿ ಬಡವಾಗಿದೆ, ಸರಿಯಾಗಿ ಸಿನಿಮಾಗಳು ರಿಲೀಸ್ ಆಗುತ್ತಿಲ್ಲ ಎನ್ನುವ ಬೇಸರ ಎಲ್ಲರಿಗೂ ಇದೆ. ಇತ್ತೀಚೆಗೆ ಈ ಬಗ್ಗೆ ನೀನಾಸಂ ಸತೀಶ್ ಮಾತನಾಡಿದ್ದಾರೆ. ನಿರ್ಮಾಪಕರ ಬಗ್ಗೆ ನೀಡಿದ ಹೇಳಿಕೆಗೆ ಸ್ಪಷ್ಟನೆ ನೀಡುವ ವಿಷಯವಾಗಿ ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರತಿ ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು. ಆಗ ಇಂಡಸ್ಟ್ರಿ ಉಳಿಯುತ್ತದೆ’ ಎಂದರು. ಇದರಿಂದ ಚಿತ್ರರಂಗ ಮೊದಲಿನ ಕಳೆಯನ್ನು ಪಡೆದುಕೊಳ್ಳುತ್ತದೆ ಎಂಬುದು ಅವರ ಅಭಿಪ್ರಾಯ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
