‘ಸೈನಿಕ 2’ ಮತ್ತು ‘ಕರ್ನಾಟಬಲಂ’ ಸಿನಿಮಾಗಳು ಲಾಂಚ್ ಆಗಿವೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದ್ದಾರೆ. ಇವು ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ನಾಯಕನಾಗಿ ನಟಿಸುತ್ತಿರುವ ಚಿತ್ರಗಳು.
ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್, ಸೋಮಣ್ಣ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಅವರು ಶುಭ ಹಾರೈಸಿದರು. ‘ಇತಿಹಾಸ ಯಾರೂ ಮರೆಯೋಕೆ ಸಾಧ್ಯ ಇಲ್ಲ’ ಎಂದು ಅವರು ಹೇಳಿದರು.
‘ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅವರಿಗೆ ಒಳಿತಾಗಲಿ. ಇತಿಹಾಸವನ್ನ ನೆನಪು ಮಾಡುವ ಕೆಲಸವನ್ನು ಧ್ಯಾನ್ ಮಾಡಲಿ. ತುಂಬು ಹೃದಯದಿಂದ ನಾನು ಆಶೀರ್ವಾದ ಮಾಡುತ್ತೇನೆ’ ಎಂದು ಡಿಕೆ ಶಿವಕುಮಾರ್ ಅವರು ಶುಭ ಕೋರಿದರು.
ಡಿಕೆ ಶಿವಕುಮಾರ್ ಅವರಿಗೆ ಮೊದಲಿನಿಂದಲೂ ಚಿತ್ರರಂಗದ ನಂಟು ಇದೆ. ಆ ಬಗ್ಗೆ ಅವರು ನೆನಪಿಸಿಕೊಂಡರು. ‘ನಾನೊಬ್ಬ ವಿತರಕನಾಗಿದ್ದೆ. ಈಗಲೂ ವಿತರಕನಾಗಿ ಕೆಲಸ ಮಾಡುತ್ತಾ ಇದ್ದೇನೆ’ ಎಂದು ಡಿಕೆಶಿ ಅವರು ಹೇಳಿದರು.
‘ಥಿಯೇಟರ್ ಮಾಲೀಕರು ಭೇಟಿ ಮಾಡಿ ಕಷ್ಟ ಹೇಳಿಕೊಳ್ಳುತ್ತಿದ್ದಾರೆ. ಜಯಮಾಲಾ ಕೂಡ ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ. ಪ್ರೇಕ್ಷಕರು ಕೂಡ ಸಾಥ್ ನೀಡಬೇಕು. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲ ಇದೆ’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
