ಹಾಸನ, (ಮೇ 06) : ದಸರಾ ಸಂದರ್ಭದಲ್ಲಿ ನಾಡ ದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಮೆರೆಸುತ್ತಿದ್ದ ಹೆಮ್ಮೆಯ ಅರ್ಜುನ ಆನೆ ಸಾವನ್ನಪ್ಪಿದ್ದು, ಇದೀಗ ಅದರ ಸ್ಮಾರಕವನ್ನು (Arjuna elephant memorial) ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಇಂದು (ಮೇ 09) ಅರಣ್ಯ ಸಚಿವ ಈಶ್ವರ್ ಖಂಡ್ರೆ (Forest Minister Eshwar Khandre) ಲೋಕಾರ್ಪಣೆಗೊಳಿಸಿದರು. 2023ರ ಡಿಸೆಂಬರ್ 4 ರಂದು ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಡಿ ವೀರ ಮರಣವನ್ನಪ್ಪಿದ್ದ ಅರ್ಜುನ ಆನೆಯ ಮೃತದೇಹವನ್ನು ಅದೇ ಸ್ಥಳದಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಗಿತ್ತು. ಎರಡೂವರೆ. ವರ್ಷಗಳ ನಂತರ ಇಂದು ಅರ್ಜುನ ಆನೆಯ ಸ್ಮಾರಕ ಲೋಕಾರ್ಪಣೆ ಲೋಕಾರ್ಪಣೆಗೊಂಡಿದೆ. ಹಾಗಾದ್ರೆ, ಅರ್ಜುನ ಸ್ಮಾರ ಹೇಗಿದೆ ಎನ್ನುವುದನ್ನು ನೋಡಿ.
