ಹೈದ್ರಾಬಾದ್​​ನಲ್ಲಿ ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಸೈಬರ್​ ವಂಚಕರ ಹೆಡೆಮುರಿ ಕಟ್ಟಿದ್ರು – Kannada News | Mangaluru Police Bust Hyderabad Cyber Fraud Ring: 6 Arrested for OTP Scam

ಪೊಲೀಸರು ಜಪ್ತಿ ಮಾಡಿರುವ ವಸ್ತುಗಳು

ಮಂಗಳೂರು, ಫೆಬ್ರವರಿ 27: ವಿದೇಶದಲ್ಲಿದ್ದವರ ಜೊತೆ ಕೈಜೋಡಿಸಿ ಸೈಬರ್ ಕ್ರೈಂ (Cyber Crime) ಮಾಡುತ್ತಿದ್ದ ಆರು ಜನರ ತಂಡವನ್ನು ಹೈದರಾಬಾದ್​​ನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ (Arrest). ಶೇಖ್ ಕರೀಮುಲ್ಲಾ, ಬುಡಿದಿನ್ನೆ ವಂಶಿ, ಬಡೆ ಶ್ರೀನಿವಾಸ್, ಪಂಡಿತಿ ಕ್ರಾಂತಿ ಕುಮಾರ್, ಇಬ್ರಾಹಿಂ ಪ್ರಾಯ ಹಾಗೂ ಉತ್ಸಲ ಸಂತೋಷ್ ಕೃಷ್ಣ ಬಂಧಿತರು. ದುರುಳರು ನಿನ್ನೆ ಒಂದೇ ದಿನ 2 ಕೋಟಿ ರೂ ವಹಿವಾಟು ಮಾಡಿದ್ದಾರೆ.

ಕಮಿಷನ್​​ ಆಸೆ ತೋರಿಸುವ ಖದೀಮರು

ಬ್ಯಾಂಕ್ ಖಾತೆದಾರರಿಗೆ 4 ರಿಂದ 6% ಕಮಿಷನ್ ನೀಡುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಜಾಹಿರಾತು ನೀಡುತ್ತಿದ್ದರು. ಅದನ್ನು ನಂಬಿ ಬಂದವರಿಂದ ಓಟಿಪಿ ಪಡೆದು ವಿದೇಶಕ್ಕೆ ರವಾನಿಸುತ್ತಿದ್ದರು. ಅಲ್ಲಿರುವ ಸೈಬರ್ ಕ್ರೈಂ ಖದೀಮರು ಹಣ ಎಗರಿಸುತ್ತಿದ್ದರು.

ಇದನ್ನೂ ಓದಿ: ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ!

ಸದ್ಯ ಮಂಗಳೂರಿನ ಮೊಹ್ಮದ್​ ಇಕ್ಬಾಲ್​ ದೂರಿನನ್ವಯ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು ಆರೋಪಿಗಳು ಹೆಡೆಮುರಿ ಕಟ್ಟಿದ್ದಾರೆ. ಆರೋಪಿಗಳಿಂದ 18 ಮೊಬೈಲ್, 12 ಸಿಮ್ ಕಾರ್ಡ್,​ 1 ಲ್ಯಾಪ್ ಟಾಪ್, 15 ಚೆಕ್​ಬುಕ್, 18 ಡೆಬಿಟ್ ಕಾರ್ಡ್​ ಮತ್ತು 12 ಬ್ಯಾಂಕ್ ಪಾಸ್ ಬುಕ್​​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗಡಿ ದಾಟಿ‌ ಹಂತಕರ ಬಂಧಿಸಿದ ಮಂಗಳೂರು ಪೊಲೀಸರು

ಇನ್ನು ಇತ್ತೀಚೆಗೆ ಮಂಗಳೂರು ಪೊಲೀಸರು ಗಡಿ ಮೀರಿ ನಡೆಸಿದ ಕಾರ್ಯಾಚರಣೆಯಲ್ಲಿ ಸೈಬರ್‌ ವಂಚಕರ ಮೂಲವನ್ನೇ ಭೇದಿಸಿದ್ದರು. ಆ ಮೂಲಕ ದೇಶದಲ್ಲಿ ಇದುವರೆಗೂ ಯಾರೂ ಮಾಡದ ಆಪರೇಷನ್‌ ಮೂಲಕ ಖದೀಮರ ಹೆಡೆಮುರಿ ಕಟ್ಟಿದ್ದರು. ಮಂಗಳೂರು ಸೆನ್‌ ಪೊಲೀಸರ ಕಾರ್ಯಾಚರಣೆಗೆ ನೇಪಾಳ ಪೊಲೀಸರು ಸಾಥ್‌ ನೀಡಿದ್ದರು.

ಇದನ್ನೂ ಓದಿ: ಸ್ನೇಹಿತರಿಗೆ ಪ್ರಾಣವನ್ನಾದರೂ ಕೊಡಿ, ಬ್ಯಾಂಕ್ ಡೀಟೇಲ್ಸ್ ಕೊಡ್ಬೇಡಿ! ಯಾಕೆ ಗೊತ್ತಾ?

ಮಂಗಳೂರು ಪೊಲೀಸರು 11 ಜನರನ್ನು ಬಂಧಿಸಿದ್ದರು. ಬಂಧಿತರಿಂದ ಮೊಬೈಲ್‌, ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಬಂಧಿತರ ಬಳಿಯಿದ್ದ ಒಟ್ಟು 624 ಬ್ಯಾಂಕ್‌ ಖಾತೆಗಳ ವಿವರ ಸಂಗ್ರಹಿಸಲಾಗಿತ್ತು. ವಿಚಿತ್ರ ಅಂದರೆ ಒಂದು ಖಾತೆಯಲ್ಲಿ 167 ಕೋಟಿ ರೂ ಹಣ ವರ್ಗಾವಣೆ ಆಗಿರುವುದು ಕೂಡ ಪತ್ತೆ ಆಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *