ಹೊರೆಯಾಗುತ್ತಿದ್ದರೂ ಗ್ಯಾರಂಟಿ ಕೊಡುತ್ತಿದ್ದೇವೆ, ಕೊಡುತ್ತೇವೆ: ಡಿಕೆಶಿ, ಸಿದ್ದರಾಮಯ್ಯ ಮಾತಿನ ಮರ್ಮ ಏನು? – Kannada News | Are Karnataka’s Guarantee Schemes a Financial Burden? DK Shivakumar and Siddaramaiah Clarify Amid Budget Debate

ಬೆಂಗಳೂರು, ಫೆಬ್ರವರಿ 26: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯಕ್ಕೆ ಆರ್ಥಿಕ ಹೊರೆಯಾಗಿದೆ ಎಂಬುದನ್ನು ಕೊನೆಗೂ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡರೇ? ಇಬ್ಬರೂ ಆಡಿರುವ ಮಾತುಗಳು ಇದಕ್ಕೆ ಪುಷ್ಟಿ ನೀಡಿವೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದ್ದರೂ, ಅವು ಜನರಿಗೆ ಆರ್ಥಿಕ ಬಲವನ್ನು ನೀಡಿವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ವರ್ಷಕ್ಕೆ 52 ಸಾವಿರ ಕೋಟಿ ರೂಪಾಯಿಗಿಂತಲೂ ಹೆಚ್ಚು ಮೊತ್ತವನ್ನು ಗ್ಯಾರಂಟಿಗಳಿಗಾಗಿ ಕೊಡಲಾಗುತ್ತಿದೆ, ಅದು ಬರ್ಡನ್ ಎಂದು ಅವರು ಹೇಳಿರಬಹುದು ಅಷ್ಟೆ. ಹಾಗಂತ ನಾವು ಗ್ಯಾರಂಟಿಗಳಿಗೆ ಅನುದಾನ ನಿಲ್ಲಿಸಿಲ್ಲ. ಗ್ಯಾರಂಟಿ ಯೋಜನೆಗಳಿಗೆ 1.20 ಲಕ್ಷ ಕೋಟಿ ರೂಪಾಯಿಗಳನ್ನು ಈಗಾಗಲೇ ಮೀಸಲಿಡಲಾಗಿದೆ ಮತ್ತು ಅಭಿವೃದ್ಧಿ ಕಾರ್ಯಗಳು ಮುಂದುವರಿಯಲಿವೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *