Headlines

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

ದೇವನಹಳ್ಳಿ, ಜೂನ್ 2: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕಣ್ಣೂರಹಳ್ಳಿ ರಸ್ತೆಯಲ್ಲಿ ಅಚ್ಚರಿಯ ಹಾಗೂ ಆತಂಕದ ಘಟನೆಯೊಂದು ನಡೆದಿದೆ. ಇಲ್ಲಿ ಒಂದೇ ಸ್ಥಳದಲ್ಲಿ ಬರೋಬ್ಬರಿ 23 ನಾಗರಹಾವಿನ ಮರಿಗಳು ಒಟ್ಟಿಗೆ ಪತ್ತೆಯಾಗಿವೆ. ಒಂದೇ ಕಡೆ ಇಷ್ಟೊಂದು ಸಂಖ್ಯೆಯ ಹಾವಿನ ಮರಿಗಳನ್ನು ಕಂಡ ಸ್ಥಳೀಯರು ಕೆಲ ಕಾಲ ತೀವ್ರ ಆತಂಕಕ್ಕೆ ಒಳಗಾಗಿ ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಜಾಗೃತರಾದ ಸಾರ್ವಜನಿಕರು ಸ್ಥಳೀಯ ಉರಗ ತಜ್ಞರಾದ ಸಿ.ಎಸ್. ನಾಗಭೂಷಣ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಉರಗ ತಜ್ಞರು ಹಾವಿನ ಮರಿಗಳನ್ನು ಅತ್ಯಂತ ರಕ್ಷಣೆ ಮಾಡಿದ್ದು, ಹತ್ತಿರದ ಅರಣ್ಯ ಪ್ರದೇಶಕ್ಕೆ ಬಿಡಲು ನಿರ್ಧರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *