ಹೊಸೂರು-ಬೆಂಗಳೂರು ರಸ್ತೆಯಲ್ಲಿ ಸಂಚಾರ ದಟ್ಟಣೆ: ಮಡಿವಾಳ ವ್ಯಾಪ್ತಿಯಲ್ಲಿ ಟ್ರಾಫಿಕ್ ಮಾರ್ಗ ಬದಲಾವಣೆ – Kannada News | Madiwala Traffic Diversion: New Rules for Hosur Road to Combat Bengaluru Congestion

ಬೆಂಗಳೂರು ಆ. 5: ಹೊಸೂರು-ಬೆಂಗಳೂರು ರಸ್ತೆಯಲ್ಲಿ ದಿನೇ ದಿನೇ ಸಂಚಾರ ದಟ್ಟಣೆ (Traffic Jam) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಂಚಾರ ಸುಗಮಗೊಳಿಸಲು ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಪ್ರಾಯೋಗಿಕವಾಗಿ ಹೊಸ ಮಾರ್ಗ ಬದಲಾವಣೆಯನ್ನು (Traffic Diversion) ಜಾರಿಗೆ ತಂದಿದ್ದಾರೆ. ಈ ನೂತನ ಸಂಚಾರ ನಿಯಮಗಳು ಪ್ರತಿದಿನ ಬೆಳಗ್ಗೆ 8:00 ರಿಂದ 10:30 ರವರೆಗೆ ಜಾರಿಯಲ್ಲಿರಲಿವೆ.

ಸರ್ಜಾಪುರ ರಸ್ತೆ ಜಂಕ್ಷನ್‌ನಿಂದ ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್ ಕಡೆಗೆ ಬರುವ ಎಲ್ಲಾ ವಾಹನಗಳಿಗೆ ಸರ್ಜಾಪುರ ರಸ್ತೆ ಜಂಕ್ಷನ್‌ನಲ್ಲೇ ಪ್ರವೇಶ ನಿಷೇಧಿಸಲಾಗಿದೆ. 100 ಅಡಿ ರಸ್ತೆಯಿಂದ ವಾಟರ್ ಟ್ಯಾಂಕ್ ಜಂಕ್ಷನ್ ಮೂಲಕ ಅಯ್ಯಪ್ಪ ಜಂಕ್ಷನ್‌ಗೆ ಬಂದು, ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್ ಕಡೆಗೆ ತೆರಳುವ ವಾಹನಗಳಿಗೆ ಅಯ್ಯಪ್ಪ ಜಂಕ್ಷನ್‌ನಲ್ಲಿ ನಿಷೇಧ ಹೇರಲಾಗಿದೆ.

ಸರ್ಜಾಪುರ ರಸ್ತೆ ಜಂಕ್ಷನ್‌ನಿಂದ ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್ ಕಡೆಗೆ ಹಾಗೂ ವಾಟರ್ ಟ್ಯಾಂಕ್ ಜಂಕ್ಷನ್ ಕಡೆಯಿಂದ ಅಯ್ಯಪ್ಪ ಜಂಕ್ಷನ್ ಮೂಲಕ ಮಡಿವಾಳ ಠಾಣೆ ಕಡೆಗೆ ಹೋಗುವ ವಾಹನಗಳು ಕೃಪಾನಿಧಿ ಜಂಕ್ಷನ್/ಸರ್ಜಾಪುರ ರಸ್ತೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು, ವಾಟರ್ ಟ್ಯಾಂಕ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದುಕೊಳ್ಳಬೇಕು. ಬಳಿಕ ಮಡಿವಾಳ ಮಾರುಕಟ್ಟೆ ರಸ್ತೆ ಮೂಲಕ ಸಾಗಿ, ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಹೊಸೂರು ಮುಖ್ಯರಸ್ತೆಯ ಮೂಲಕ ಮುಂದೆ ಸಂಚರಿಸಬಹುದು.

ಇದನ್ನೂ ಓದಿ: 120 ಕೋಟಿ ಮಠದ ಜಮೀನು ಕಬಳಿಕೆ ಕೇಸ್: ಕೊನೆಗೂ ಪೊಲೀಸರ ಮುಂದೆ ಹಾಜರಾದ ಕಿಂಗ್‌ಪಿನ್ ನರೇಶ್ ಗೌಡ

ಸಾರ್ವಜನಿಕರು ಹಾಗೂ ಸವಾರರು ಪೊಲೀಸರೊಂದಿಗೆ ಸಹಕರಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮಡಿವಾಳ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *