Headlines

1ರಿಂದ 12ನೇ ತರಗತಿ ಮಕ್ಕಳಿಗೆ ನಿಖರ ವಸ್ತ್ರ ಸಂಹಿತೆ: ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು – Kannada News | Education Minister Madhu Bangarappa Reacts Over Karnataka Governmnet Allows Hijab And Sacred Threads In Schools

ಬೆಂಗಳೂರು (ಮೇ 13): ರಾಜ್ಯದ ಶೈಕ್ಷಣಿಕ (Karnataka Education) ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ‘ಹಿಜಾಬ್’ ವಿವಾದಕ್ಕೆ ಕರ್ನಾಟಕ ಸರ್ಕಾರವು ಈಗ ಅಧಿಕೃತವಾಗಿ ತೆರೆ ಎಳೆದಿದೆ. 2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧಕ್ಕೆ ಪೂರಕವಾಗಿದ್ದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಗ ಹಿಂಪಡೆದಿದೆ. ಈ ಕುರಿತು ಇಂದು (ಮೇ 13) ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ‘ಹಿಜಾಬ್’ (ತಲೆವಸ್ತ್ರ) ಧರಿಸಲು ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಇನ್ನು ಈ ಬಗ್ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu bangarappa) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಜನಿವಾರ ತೆಗೆಸುವ ವಿಚಾರ ಸಾಕಷ್ಟು ಜನರ ಭಾವನೆಗೆ ಧಕ್ಕೆ ಉಂಟಾಗಿತ್ತು. ಮಕ್ಕಳ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ಆದೇಶ ಆಗಿದೆ. ಅವರವರ ಸಂಪ್ರದಾಯಕ್ಕೆ ಅನುಗುಣವಾಗಿ ವಸ್ತ್ರ ತೊಡುತ್ತಾರೆ ಎಂದರು.

ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ಶಾಲಾ ಕಾಲೇಜುಗಳಲ್ಲಿ ಒಂದು ಕ್ಲಾರಿಟಿ ಇರಬೇಕು. 1ರಿಂದ 12ನೇ ತರಗತಿ ಮಕ್ಕಳಿಗೆ ನಿಖರ ವಸ್ತ್ರ ಸಂಹಿತೆ ನಿಗದಿ ಮಾಡುತ್ತಿದ್ದೇವೆ. ಶೈಕ್ಷಣಿಕ ವರ್ಷ ಆರಂಭ ಮುನ್ನ ಇದನ್ನು ಜಾರಿ ಮಾಡಬೇಕೆಂಬ ಉದ್ದೇಶವಿದೆ. ಸಾಂಪ್ರದಾಯಿಕ ರೀತಿಯಲ್ಲಿ ಹೇಗೆ ಶೈಕ್ಷಣಿಕ ಸಂಸ್ಥೆಗಳಿಗೆ ಹೋಗಬೇಕು ಅನ್ನೋದು ಈ ಆದೇಶದಲ್ಲಿ ಇದೆ. ಒತ್ತಡದ ಮೇಲೆ ಯಾವ ವಿದ್ಯಾರ್ಥಿ ಕೂಡ ಶಾಲೆಗೆ ಹೋಗಬಾರದು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇದಕ್ಕಾಗಿ ಸಂವಿಧಾನ ಮಾಡಿಲ್ಲ. ಶಾಲೆಗೆ ಹೋಗೋದಕ್ಕೆ, ಪರೀಕ್ಷೆಗೆ ಹೋಗೋದಕ್ಕೂ ಈ ಪದ್ಧತಿ ಅನ್ವಯವಾಗಲಿದೆ. ವಸ್ತ್ರ ಸಂಹಿತೆ ಅಂತ ಕರೆಯೋಕೆ ಆಗಲ್ಲ, ಸಾಂಪ್ರದಾಯಿಕ ಪದ್ಧತಿ ಎನ್ನಬಹುದು ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿಯ 2022ರ ಆದೇಶ ಹಿಂಪಡೆದ ಸರ್ಕಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ

Source link

Leave a Reply

Your email address will not be published. Required fields are marked *