Headlines

11 ವರ್ಷಗಳ ಬಳಿಕ ಫೈನಲ್​ಗೇರಿದ ಕರ್ನಾಟಕ – Kannada News | Karnataka enters the Ranji Trophy final11

ಬರೋಬ್ಬರಿ 11 ವರ್ಷಗಳ ಬಳಿಕ ಕರ್ನಾಟಕ ತಂಡ ರಣಜಿ ಟೂರ್ನಿಯ ಫೈನಲ್​ಗೇರಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಉತ್ತರಾಖಂಡ್ ಮತ್ತು ಕರ್ನಾಟಕ ನಡುವಣ ಸೆಮಿಫೈನಲ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಈ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೂ ಮೊದಲ ಇನಿಂಗ್ಸ್​ನಲ್ಲಿನ 503 ರನ್​ಗಳ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ತಂಡವು ಫೈನಲ್​ಗೆ ಲಗ್ಗೆಯಿಟ್ಟಿದೆ.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಉತ್ತರಾಖಂಡ್ ತಂಡದ ನಾಯಕ ಕುನಾಲ್ ಚಂಡೆಲಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಕೆಎಲ್ ರಾಹುಲ್ (141) ಶತಕ ಬಾರಿಸಿದರೆ,  ನಾಯಕ ದೇವದತ್ ಪಡಿಕ್ಕಲ್ (232) ದ್ವಿಶತಕ ಸಿಡಿಸಿದರು.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಸ್ಮರಣ್ ರವಿಚಂದ್ರನ್ 135 ರನ್​ಗಳ ಇನಿಂಗ್ಸ್ ಆಡಿದರು. ಹಾಗೆಯೇ ಕೃತಿಕ್ ಕೃಷ್ಣ 60 ರನ್​ ಗಳಿಸಿದರೆ, ಕೆಳ ಕ್ರಮಾಂಕದಲ್ಲಿ ವಿದ್ಯಾಧರ್ ಪಾಟೀಲ್ 54 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಕರ್ನಾಟಕ ತಂಡವು 194.4 ಓವರ್​ಗಳಲ್ಲಿ ಬರೋಬ್ಬರಿ 736 ರನ್​ಗಳಿಸಿ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಉತ್ತರಾಖಂಡ್ ತಂಡವು ಕೇವಲ 233 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 503 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

ಫಾಲೋಆನ್​ ಹೇರದ ಕರ್ನಾಟಕ:

ಮೊದಲ ಇನಿಂಗ್ಸ್​ನಲ್ಲಿ 503 ರನ್​ಗಳ ಮುನ್ನಡೆ ಪಡೆದರೂ ಕರ್ನಾಟಕ ತಂಡ ಫಾಲೋ ಹೇರದೆ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದರು. ಅದರಂತೆ ದ್ವಿತೀಯ ಇನಿಂಗ್ಸ್​ನಲ್ಲಿ ಕರ್ನಾಟಕ ಪರ ಕೃತಿಕ್ ಕೃಷ್ಣ 52, ಸ್ಮರಣ್ ರವಿಚಂದ್ರನ್ 127 ಹಾಗೂ ಕೆಎಲ್ ರಾಹುಲ್ 86 ರನ್ ಬಾರಿಸಿದರು. ಈ ಮೂಲಕ ಸೆಕೆಂಡ್ ಇನಿಂಗ್ಸ್​ನಲ್ಲಿ 323 ರನ್​ಗಳಿಸಿ ಆಲೌಟ್ ಆಗಿದೆ.

827 ರನ್​ಗಳ ಗುರಿ:

ಮೊದಲ ಇನಿಂಗ್ಸ್​ನಲ್ಲಿನ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 827 ರನ್​ಗಳ ಗುರಿ ಪಡೆದ ಉತ್ತರಾಖಂಡ್ ತಂಡವು 5ನೇ ಕೊನೆಯ ದಿನದಾಟದ ಅಂತ್ಯಕ್ಕೆ ಕಲೆಹಾಕಿದ್ದು 260 ರನ್​ಗಳು ಮಾತ್ರ. ಇದರೊಂದಿಗೆ ಕರ್ನಾಟಕ-ಉತ್ತರಾಖಂಡ್ ನಡುವಣ ಸೆಮಿಫೈನಲ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ.

ಅತ್ತ ಮೊದಲ ಇನಿಂಗ್ಸ್​ನಲ್ಲಿನ  ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ತಂಡವು ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಫೆಬ್ರವರಿ 24 ರಿಂದ ಶುರುವಾಗಲಿರುವ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜುಮ್ಮು-ಕಾಶ್ಮೀರ ತಂಡಗಳು ಮುಖಾಮುಖಿಯಾಗಲಿದೆ.

ಉತ್ತರಾಖಂಡ್ ಪ್ಲೇಯಿಂಗ್ 11: ಪ್ರಶಾಂತ್ ಚೋಪ್ರಾ , ಅವನೀಶ್ ಸುಧಾ , ಭೂಪೇನ್ ಲಾಲ್ವಾನಿ , ಕುನಾಲ್ ಚಂಡೆಲಾ (ನಾಯಕ) , ಲಕ್ಷ್ಯ ರಾಜೇಶ್ ರಾಯ್‌ಚಂದಾನಿ , ಜಗದೀಶ ಸುಚಿತ್ , ಸೌರಭ್ ರಾವತ್ (ವಿಕೆಟ್ ಕೀಪರ್) , ಅಭಯ್ ನೇಗಿ , ಮಾಯಾಂಕ್ ಮಿಶ್ರಾ , ಆದಿತ್ಯ ರಾವತ್ , ಜನಮೇಜಯ್ ಜೋಶಿ.

ಇದನ್ನೂ ಓದಿ: ಈ ಒಂದು ತಪ್ಪು ಸರಿಪಡಿಸದಿದ್ದರೆ ಟೀಮ್ ಇಂಡಿಯಾಗೆ ಅಪಾಯ ಕಟ್ಟಿಟ್ಟ ಬುತ್ತಿ!

ಕರ್ನಾಟಕ ಪ್ಲೇಯಿಂಗ್ 11: ಕೆಎಲ್ ರಾಹುಲ್ , ಮಾಯಾಂಕ್ ಅಗರ್ವಾಲ್ , ದೇವದತ್ ಪಡಿಕ್ಕಲ್ (ನಾಯಕ) , ಕರುಣ್ ನಾಯರ್ , ಸ್ಮರಣ್ ರವಿಚಂದ್ರನ್ , ಶ್ರೇಯಸ್ ಗೋಪಾಲ್ , ಕೃತಿಕ್ ಕೃಷ್ಣ (ವಿಕೆಟ್ ಕೀಪರ್ ), ವಿದ್ಯಾಧರ ಪಾಟೀಲ್ , ವಿಜಯಕುಮಾರ್ ವೈಶಾಕ್ , ಶಿಖರ್ ಶೆಟ್ಟಿ , ಪ್ರಸಿದ್ಧ್ ಕೃಷ್ಣ.

Source link

Leave a Reply

Your email address will not be published. Required fields are marked *