
ಕೋಲ್ಕತ್ತಾ, ಏಪ್ರಿಲ್ 02:ಪಶ್ಚಿಮ ಬಂಗಾಳದಲ್ಲಿ 2026ರ ಚುನಾವಣೆಗೂ ಮುನ್ನ ರಾಜಕೀಯ ವಾತಾವರಣ ಬಿಸಿಯಾಗುತ್ತಿದೆ. ಈ ಚುನಾವಣೆಯಲ್ಲಿ ಆಡಳಿತಾರೂಢ ಟಿಎಂಸಿ ಹಾಗೂ ಪ್ರಮುಖ ವಿರೋಧಪಕ್ಷ ಬಿಜೆಪಿ ನಡುವೆ ನೇರ ಹೋರಾಟ ಕಂಡುಬರುತ್ತಿದೆ. ಶುಭೇಂದು ಅಧಿಕಾರಿಯ ನಾಮಪತ್ರ ಸಲ್ಲಿಕೆ ಇದ್ದ ಕಾರಣ ನಂದಿಗ್ರಾಮಕ್ಕೆ ಹೋಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇನ್ನು 15 ದಿನ ಇಲ್ಲೇ ಇರುತ್ತೇನೆ, ಪಶ್ಚಿಮ ಬಂಗಾಳದಲ್ಲಿಯೇ ಉಳಿದು ಚುನಾವಣಾ ಉಸ್ತುವಾರಿವಹಿಸಿಕೊಳ್ಳುವುದಾಗಿ ಘೋಷಿಸಿದರು.
ತಾನು ಇಡೀ ಬಂಗಾಳವನ್ನು ಪ್ರವಾಸ ಮಾಡಿರುವುದಾಗಿ ಹೇಳಿದ್ದು, ಎಲ್ಲ ಕಡೆಯೂ ಮಮತಾ ಬ್ಯಾನರ್ಜಿ ಸರ್ಕಾರವನ್ನು ಕೊನೆಗೊಳಿಸುವ ಬಗ್ಗೆಯೇ ಬೇಡಿಕೆಗಳು ಕೇಳಿಬಂದಿವೆ.
ಬಂಗಾಳದ ಜನರು ಟಿಎಂಸಿಯ ಗೂಂಡಾಗಿರಿಯಿಂದ ಸಂಪೂರ್ಣವಾಗಿ ಬೇಸತ್ತಿದ್ದಾರೆ, ಆಗಾಗ ಸ್ಫೋಟಗಳು, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಬಿಜೆಪಿ ಸರ್ಕಾರವು ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುತ್ತದೆ, ಅಭಿವೃದ್ಧಿಯ ಹೊಸ ಅಲೆಯನ್ನು ತರುತ್ತದೆ. ಇದರಿಂದ ಬಂಗಾಳವುತನ್ನ ಹಿಂದಿನ ಗುರುತನ್ನು ಮರಳಿ ಪಡೆಯಬಹುದು ಎಂದು ಭರವಸೆ ನೀಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ