2700 ಅನಾಥ ವಾಹನಗಳನ್ನು ಪಟ್ಟಿ ಮಾಡಿದ್ದೇವೆ, ಟೋಯಿಂಗ್ ಬಳಿಕವೂ ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ – Kannada News | Bengaluru to Auction 2,700 Abandoned Vehicles if Owners Fail to Claim Them: Minister Krishna Byre Gowda

ಬೆಂಗಳೂರು, ಜುಲೈ 18: ಬೆಂಗಳೂರು ನಗರದ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳಲ್ಲಿನ ಅನಾಥ ವಾಹನಗಳನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಗೆ ಶನಿವಾರ ಚಾಲನೆ ನೀಡಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ಮಲ್ಲೇಶ್ವರಂನ ಎಂ.ಡಿ.ಬ್ಲಾಕ್‌ನಲ್ಲಿ ಈ ಕಾರ್ಯಾಚರಣೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಜಿಬಿಎ ಮತ್ತು ಸಂಚಾರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ 2700 ಅನಾಥ ವಾಹನಗಳನ್ನು ಪಟ್ಟಿ ಮಾಡಿದ್ದೇವೆ. ಒಂದು ವಾರದ ಮೊದಲು ಇಂತಹ ವಾಹನಗಳಿಗೆ ನೋಟಿಸ್‌ಗಳನ್ನು ಅಂಟಿಸಲಾಗಿತ್ತು. ನೋಟಿಸ್ ನೀಡಿದ ನಂತರವೂ ಮಾಲೀಕರು ಬಂದು ವಾಹನಗಳನ್ನು ಕ್ಲೈಮ್ ಮಾಡದಿದ್ದರೆ, ಅವುಗಳನ್ನು ಟೋಯಿಂಗ್ ಮಾಡಲಾಗುತ್ತದೆ ಎಂದರು.

ಟೋಯಿಂಗ್ ಮಾಡಿದ ವಾಹನಗಳನ್ನು ಜಿಬಿಎ ಜಾಗದಲ್ಲಿ 15 ದಿನಗಳ ಕಾಲ ಇರಿಸಲಾಗುವುದು. ಈ ಅವಧಿಯಲ್ಲಿಯೂ ಮಾಲೀಕರು ಬರದಿದ್ದರೆ, ಕಾನೂನು ಪ್ರಕಾರವಾಗಿ ಹರಾಜು ಪ್ರಕ್ರಿಯೆ ಮೂಲಕ ಮಾರಾಟ ಮಾಡಲಾಗುವುದು ಎಂದು ಸಚಿವರು ತಿಳಿಸಿದರು. ಸಾರ್ವಜನಿಕರು ರಸ್ತೆಗಳನ್ನು ಮತ್ತು ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡದಂತೆ ಅವರು ಮನವಿ ಮಾಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *