ಧಾರವಾಡ, (ಫೆಬ್ರವರಿ 17): ಯುವತಿಯೋರ್ವಳು ಮೂರ್ಮೂರು ಹೆಸರಿಟ್ಟುಕೊಂಡು ಯುವಕರನ್ನು ವಂಚಿಸಿದ್ದಾಳೆ ಎನ್ನುವ ಆರೋಪ (Accusation) ಕೇಳಿ ಬಂದಿದೆ. ಶ್ರೀಮಂತ ಹುಡುಗರಿಗೆ ಗಾಳ ಹಾಕ್ತಿದ್ದ ಐಶ್ವರ್ಯ ಎನ್ನುವ ಯುವತಿ, ಪ್ರೀತಿ (Love) ನಾಟಕವಾಡಿ ಯುವಕರಿಂದ ಹಣ ಪಡೆದು ವಂಚಿಸಿದ್ದಾಳಂತೆ. ಅದರಂತೆ ಐಶ್ವರ್ಯ, ಯುವಕನನ್ನು ಮದ್ವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದಾಳೆ. ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದ ಯುವತಿ, ಆರ್ಥಿಕವಾಗಿ ಸಹಾಯ ಮಾಡುವ ಯುವಕರನ್ನೇ ಟಾರ್ಗೆಟ್ ಮಾಡುತ್ತಿದ್ದಳಂತೆ. ಸಂಜು ದೊಡಮನಿ ಹಾಗೂ ಗುರು ವಕ್ಕುಂದ ಸೇರಿದಂತೆ ಮೂವರು ಯುವಕರಿಗೆ ಮದುವೆಯ ಭರವಸೆ ನೀಡಿ ಹಣ ಪಡೆದುಕೊಂಡಿದ್ದಾಳೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನು ರೊಚ್ಚಿಗೆದ್ದ ಸ್ಥಳೀಯರು ರಸ್ತೆಯಲ್ಲೇ ಐಶ್ವರ್ಯಗೆ ಧರ್ಮದೇಟು ಕೊಟ್ಟಿದ್ದಾರೆ. ಈ ಘಟನೆ ಧಾರವಾಡ (Dharwad) ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
