ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್ ಅಹ್ಮದ್, ಮಂತ್ರಿ ಕಥೆ ಏನು? – Kannada News | Davanagere By Election Row: Zameer ahmed khan Returns after discussed With CM Siddaramaiah

ಬೆಂಗಳೂರು, (ಏಪ್ರಿಲ್ 14): ದಾವಣಗೆರೆ (Davanagere) ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೌದು…ದಾವಣಗೆರೆ ದಕ್ಷಿಣ ಉಪಚುನಾವಣೆ ಪ್ರಚಾರದಿಂದ ದೂರ ಉಳಿದಿರುವ ಮುಸ್ಲಿಂ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ಮೇಲೆ ಶಾಕ್ ಕೊಟ್ಟಿದೆ. ಪಕ್ಷದ ವಿರುದ್ಧ ಷಡ್ಯಂತ್ರ ಮಾಡಿದ್ದಾರೆಂದು ಪರಿಷತ್ ಸದಸ್ಯ ನಸೀರ್ ಅಹಮ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಲಾಗಿದೆ. ಇದೀಗ ಸಚಿವ ಜಮೀರ್ ಅಹಮ್ಮದ್ ಖಾನ್  (Zameer ahmed khan) ಸ್ಥಾನಕ್ಕೂ ಕತ್ತು ಬಂದಿದ್ದು, ಈ ಸಂಬಂಧ ಜಮೀರ್, ಸಿಎಂ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯನವರು ಜಮೀರ್ ಅಹಮ್ಮದ್ ಖಾನ್ ಅವರನ್ನು ಇಂದು (ಏಪ್ರಿಲ್ 14) ಬೆಳಗ್ಗೆ ಕರೆಯಿಸಿಕೊಂಡು ಮಾತುಕತೆ ನಡೆಸಿದ್ದರು. ಆದ್ರೆ, ಅದು ಪೂರ್ಣವಾಗಿದ್ದರಿಂದ ಜಮೀರ್, ಮತ್ತೊಮ್ಮೆ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಕಾವೇರಿ ನಿವಾಸದಲ್ಲಿ ಸಿಎಂ ಜತೆ ಸುದೀರ್ಘ ಚರ್ಚೆ ನಡೆಸಿ ವಾಪಸ್ ಆಗಿದ್ದು, ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯಿಸಿದ ಅವಸರಲ್ಲೇ ತೆರಳಿದರು. ಹೀಗಾಗಿ ಏನೆಲ್ಲಾ ಮಾತುಕತೆ ನಡೆಸಿದ್ರು? ಹೈಕಮಾಂಡ್​ ಸೂಚನೆ ಕೊಟ್ಟಿದ್ದೇನು? ಜಮೀರ್ ಸಚಿವ ಸ್ಥಾನಕ್ಕೂ ಕುತ್ತು ಬರುತ್ತಾ ಎನ್ನುವ ಕುತೂಹಲ ಮೂಡಿಸಿದ್ದು, ಮುಂದೆ ಏನಾಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

Source link

ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ – Kannada News | PM Modi visits wildlife corridor in Saharanpur ahead of Delhi–Dehradun corridor launch

ಸಹರಾನ್​ಪುರ, ಏಪ್ರಿಲ್ 14: ದೆಹಲಿ-ಡೆಹ್ರಾಡೂನ್ ಕಾರಿಡಾರ್ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಪ್ರಮುಖ ವನ್ಯಜೀವಿ ಕಾರಿಡಾರ್ ಅನ್ನು ಪರಿಶೀಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ 12 ಕಿಲೋಮೀಟರ್ ಉದ್ದದ ವನ್ಯಜೀವಿ ಕಾರಿಡಾರ್ ಅನ್ನು ವೀಕ್ಷಿಸಿದ್ದಾರೆ. ಇದು ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇ ಯೋಜನೆಯ ಹೈಲೈಟ್ ಆಗಿದೆ. ಇದು ಏಷ್ಯಾದ ಅತಿ ಉದ್ದದ ಕಾರಿಡಾರ್‌ಗಳಲ್ಲಿ ಒಂದಾಗಿದೆ.

213 ಕಿಲೋಮೀಟರ್ ಉದ್ದದ, 6 ಪಥದ, ಪ್ರವೇಶ-ನಿಯಂತ್ರಿತ ಕಾರಿಡಾರ್ ಅನ್ನು 12,000 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳನ್ನು ವ್ಯಾಪಿಸಿರುವ ಈ ಯೋಜನೆಯು ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಮಾನವ-ಪ್ರಾಣಿ ಸಂಘರ್ಷವನ್ನು ಕಡಿಮೆ ಮಾಡುವ ಗುರಿ ಹೊಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್ – Kannada News | Kannada actor Dharma Keerthiraj talks about delivery boy job

ನಟ ಧರ್ಮ ಕೀರ್ತಿರಾಜ್ ಅವರು ಈವರೆಗೂ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಅವರು ‘ಬೆಂಗಳೂರು ಇನ್’ ಸಿನಿಮಾದಲ್ಲಿ ಡೆಲಿವರಿ ಬಾಯ್ (Delivery Boy) ಪಾತ್ರವನ್ನು ಮಾಡಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ಬಿಡುಗಡೆ ಆಗಲಿದೆ. ರಿಯಲ್ ಲೈಫ್​ನಲ್ಲಿ ಡೆಲಿವರಿ ಬಾಯ್ಸ್ ಬದುಕನ್ನು ಧರ್ಮ ಕೀರ್ತಿರಾಜ್ ಅವರು ಹತ್ತಿರದಿಂದ ಗಮನಿಸಿದ್ದಾರೆ. ಆ ಅನುಭವವನ್ನು ಇಟ್ಟುಕೊಂಡು ಅವರು ಈ ಪಾತ್ರದಲ್ಲಿ ಅಭಿನಯಿಸಿದ್ದಾರೆ. ‘ಲೇಟ್ ಆಗಿ ಬಂದರು ಎಂಬ ಕಾರಣಕ್ಕೆ ನಾನು ಎಂದಿಗೂ ಡೆಲಿವರಿ ಬಾಯ್ಸ್ ಮೇಲೆ ಕೋಪ ಮಾಡಿಕೊಂಡಿಲ್ಲ. ಎಲ್ಲ ವೃತ್ತಿಯನ್ನು ನಾವು ಗೌರವಿಸಬೇಕು. ನಾವು ಹೊಟ್ಟೆಪಾಡಿಗಾಗಿ ಸಿನಿಮಾ ಮಾಡುತ್ತೇವೆ. ಆದೇ ರೀತಿ ಅವರು ಕೂಡ ಹೊಟ್ಟೆಪಾಡಿಗಾಗಿ ಕೆಲಸ ಮಾಡುತ್ತಾರೆ. ಪ್ರೀತಿಯಿಂದ ಮಾತನಾಡಿಸಿದರೆ ಅವರಿಗೆ ಇನ್ನಷ್ಟು ಉತ್ಸಾಹ ಬರುತ್ತದೆ’ ಎಂದು ಧರ್ಮ ಕೀರ್ತಿರಾಜ್ (Dharma Keerthiraj) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು; ಆಘಾತಕಾರಿ ವಿಡಿಯೋ ಇಲ್ಲಿದೆ – Kannada News | Coimbatore 66 year old woman lost life after falling from a moving bus

ಕೊಯಮತ್ತೂರು, ಏಪ್ರಿಲ್ 14: ರಸ್ತೆಯಲ್ಲಿ ಹೋಗುವಾಗ ವಾಹನಗಳು ಡಿಕ್ಕಿಯಾಗಿ ಹೊಡೆದು ಅಪಘಾತವಾಗುವುದು (Bus Accident) ಸಾಮಾನ್ಯ. ಆದರೆ, ಬಸ್​ನೊಳಗಿದ್ದರೂ ಪ್ರಯಾಣಿಕರಿಗೆ ಸುರಕ್ಷತೆ ಇಲ್ಲದಂತಾಗಿದೆ. ಬಸ್​​ನೊಳಗೆ ಕುಳಿತು ಪ್ರಯಾಣಿಸುತ್ತಿದ್ದ 66 ವರ್ಷದ ಮಹಿಳೆ ತನ್ನ ಸ್ಟಾಪ್ ಬಂದಿತೆಂದು ಎದ್ದು ನಿಲ್ಲುವಷ್ಟರಲ್ಲಿ ಚಾಲಕ ಬ್ರೇಕ್ ಒತ್ತಿದ್ದಾನೆ. ಆಗ ಆ ಮಹಿಳೆ ಬ್ಯಾಲೆನ್ಸ್ ತಪ್ಪಿ ಬಸ್​​ನ ಮೆಟ್ಟಿಲುಗಳ ಮೇಲೆ ಬಿದ್ದು ಹೊರಗೆ ಬಿದ್ದಿದ್ದಾರೆ. ಚಲಿಸುವ ಬಸ್​​ನಿಂದ ಬಿದ್ದ ಕಾರಣದಿಂದ ಆ ಮಹಿಳೆಗೆ ತೀವ್ರವಾಗಿ ಗಾಯವಾಗಿದೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಆಕೆ ಮೃತಪಟ್ಟಿದ್ದಾರೆ. ಮಾರ್ಚ್ 29ರಂದು ಕೋವೈಪುದೂರಿನಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ 66 ವರ್ಷದ ಜಿ. ಕಾಮಚ್ಚಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಈ ಘಟನೆ ಬಸ್​​ನೊಳಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ: ಅಣ್ಣನ ಭಾವುಕ ಮಾತು – Kannada News | Belagavi: My Brother Would’ve Survived with Timely Treatment: A Sibling’s emotional words

ಬೆಳಗಾವಿ, ಏಪ್ರಿಲ್​ 14: ಬಿಮ್ಸ್​ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ರೋಗಿ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯ ಬ್ರಹ್ಮ ನಗರದಲ್ಲಿ ನಿನ್ನೆ ನಡೆದಿದೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದಿದ್ದಕ್ಕೆ ಯುವಕ ಸಾವನ್ನಪ್ಪಿರುವುದಾಗಿ ಆರೋಪ ಕೇಳಿಬಂದಿದೆ. ರಾತ್ರಿ ಡ್ಯೂಟಿಗೆ 7 ವೈದ್ಯರು ಇದ್ರೂ ಗೈರಾಗಿದ್ದಕ್ಕೆ ಮೃತಪಟ್ಟಿದ್ದಾನೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಶಿವು ಬದುಕುತ್ತಿದ್ದ ಎಂದು ಅಣ್ಣ ರಮೇಶ್ ಲಿಂಗಪುರಿ ಹೇಳಿದ್ದಾರೆ. ಈ ನಿರ್ಲಕ್ಷ್ಯಕ್ಕೆ ಕಾರಣರಾದ ವೈದ್ಯರನ್ನು ಅಮಾನತುಗೊಳಿಸಬೇಕೆಂದು ಕುಟುಂಬ ಒತ್ತಾಯಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ನಾನು ಕರ್ನಾಟಕದಲ್ಲಿ ವಿಪಕ್ಷ ನಾಯಕ: ತಮಿಳುನಾಡಿನಲ್ಲಿ ಅಶೋಕ್ ಕನ್ನಡದಲ್ಲಿ ಪ್ರಚಾರ – Kannada News | Tamilinadu Assembly Poll 2026: BJP Leader R Ashok Speaking In Kannada during election campaign at Krishnagiri

ಕೃಷ್ಣಗಿರಿ(ತಮಿಳುನಾಡು) ಏಪ್ರಿಲ್ 14): ತಮಿಳುನಾಡು ವಿಧಾನಸಭಾ ಚುನಾವಣೆ ರಂಗೇರಿದ್ದು, ಕರ್ನಾಟಕದ ನಾಯಕರು ಸಹ ತಮಿಳುನಾಡು ಚುನಾವಣೆಯಲ್ಲಿ ಪ್ರಚಾರಕ್ಕಿಳಿರಿದ್ದಾರೆ. ಹೌದು…ಕರ್ನಾಟಕ ವಿಪಕ್ಷ ನಾಯಕ ಆರ್. ಅಶೋಕ್ ಅವರು ಇಂದು (ಏಪ್ರಿಲ್ 14) ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಥಳಿ ವಿಧಾನಸಭಾ ಕ್ಷೇತ್ರದ ಡೆಂಕಣಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಜಗದೀಶ್ ಪರ ಪ್ರಚಾರ ನಡೆಸಿದರು. ಇದೇ ವೇಳೆ ಅಶೋಕ್ ಕನ್ನಡದಲ್ಲೇ ಮಾತನಾಡಿದ್ದಾರೆ. ನಾನು ಕರ್ನಾಟಕದಲ್ಲಿ ವಿಪಕ್ಷ ನಾಯಕನಾಗಿ ಕೆಲಸ ಮಾಡುತ್ತಿದ್ದೇನೆ. 2028ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬಂದೇ ಬರುತ್ತದೆ. ತಮಿಳುನಾಡಿನಲ್ಲಿ ಕೂಡಾ ಬಿಜೆಪಿ ಸರ್ಕಾರ ಬರಬೇಕು. ಥಳಿ ಕ್ಷೇತ್ರ ಕರ್ನಾಟಕದ ಗಡಿಯಲ್ಲಿ ಇದೆ. ಒಕ್ಕಲಿಗ ಗೌಡ ಜನಾಂಗದೊಂದಿಗೆ ಥಳಿ ಕ್ಷೇತ್ರದ ಬಹಳ ಸಂಬಂಧ ಇದೆ ಎಂದರು.

Source link

ನೀವು ದಲಿತ ವಿರೋಧಿ, ಹಿಂದೂಗಳ ಪರ: ಜೆಡಿಎಸ್ ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ – Kannada News | Hassan MLA A. Manju’s Speech Interrupted by DSS Leader while Ambedkar Jayanti fuction

ಹಾಸನ, ಏಪ್ರಿಲ್​ 14: ಜಿಲ್ಲೆ ಅರಕಲಗೂಡು ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೆಡಿಎಸ್​ ಶಾಸಕ ಎ.ಮಂಜು ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ. ಶಾಸಕ ಎ.ಮಂಜು ಭಾಷಣ ವೇಳೆ ದಲಿತ ವಿರೋಧಿ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಶ್ರೀಧರಗೌಡ ಬೆಂಬಲಿಗ ಹಾಗೂ ಡಿಎಸ್ಎಸ್ ಮುಖಂಡ ನಟರಾಜ್​​ ಘೋಷಣೆ ಕೂಗಿದ್ದಾರೆ. ನೀವು ದಲಿತ ವಿರೋಧಿ, ಬರೀ ಹಿಂದೂಗಳ ಪರ ಎಂದಿದ್ದಾರೆ. ನಟರಾಜ್ ಘೋಷಣೆ ಕೂಗುತ್ತಿದ್ದರಿಂದ ಸಿಟ್ಟಾದ ಶಾಸಕ ಎ.ಮಂಜು, ಸುಮ್ನೇ ಕೂತ್ಕತಿಯಾ ಇಲ್ವಾ, ಜಾಸ್ತಿ ಮಾತಾಡಿದ್ರೆ ಅಷ್ಟೇ. ನನಗೆ ನಿನ್ನ ಸರ್ಟಿಫಿಕೆಟ್ ಬೇಕಾಗಿಲ್ಲ. ಇದೆಲ್ಲ ಚೆನ್ನಾಗಿರಲ್ಲ, ಹೊರಗೆ ಕಳುಹಿಸಬೇಕಾಗುತ್ತೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ – Kannada News | Dharma Keerthiraj reacts to rumours about his marriage with Anusha Rai

ನಟ ಧರ್ಮ ಕೀರ್ತಿರಾಜ್ ಮತ್ತು ನಟಿ ಅನುಷಾ ರೈ (Anusha Rai) ಅವರು ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅಲ್ಲದೇ ಸಿನಿಮಾಗಳಲ್ಲಿ ಕೂಡ ಅವರು ಜೋಡಿಯಾಗಿ ನಟಿಸಿ ಗಮನ ಸೆಳೆದಿದ್ದಾರೆ. ‘ಬೆಂಗಳೂರು ಇನ್’ ಸಿನಿಮಾದಲ್ಲಿ ಅವರಿಬ್ಬರು ಮತ್ತೊಮ್ಮೆ ತೆರೆಹಂಚಿಕೊಂಡಿದ್ದಾರೆ. ರಿಯಲ್ ಲೈಫ್​ನಲ್ಲೂ ಅವರು ಜೋಡಿಯಾಗಲಿ ಎಂಬ ಬಯಕೆ ಅಭಿಮಾನಿಗಳಿಗೆ ಇದೆ. ಆ ಬಗ್ಗೆ ಧರ್ಮ ಕೀರ್ತಿರಾಜ್ (Dharma Keerthiraj) ಅವರು ಮಾತನಾಡಿದ್ದಾರೆ. ‘ಸ್ನೇಹಿತೆಯಾಗಿ, ಸಹ-ನಟಿಯಾಗಿ ನಾನು ಅನುಷಾ ಅವರನ್ನು ಗೌರವಿಸುತ್ತೇನೆ. ಅವರಿಗೂ ಅದೇ ಭಾವನೆ ಇದೆ. ಅವರ ಮತ್ತು ನನ್ನ ಜೀವನ ಪ್ರತ್ಯೇಕವಾಗಿದೆ. ಪರದೆ ಮೇಲೆ ಜನರು ನಮ್ಮ ಜೋಡಿಯನ್ನು ಇಷ್ಟಪಡುತ್ತಾರೆ. ಅದನ್ನು ನಾವು ಇಲ್ಲ ಅಂತ ಹೇಳಿಲ್ಲ. ಆದರೆ ವೈಯಕ್ತಿಕ ಜೀವನದ ವಿಷಯ ಬಂದಾಗ ನಮ್ಮ ಲೈಫ್ ಬೇರೆ ಬೇರೆ ಆಗಿದೆ’ ಎಂದು ಧರ್ಮ ಕೀರ್ತಿರಾಜ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯಶಸ್ವಿಯಾಗಿ 25 ದಿನ ಪೂರೈಸಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಹ್ಯಾಟ್ರಿಕ್ ಗೆಲುವು – Kannada News | Darling Krishna starrer Love Mocktail 3 movie completes 25 days successful run in theatres

ಮಾರ್ಚ್ 19ರಂದು ಕನ್ನಡದ ‘ಲವ್ ಮಾಕ್ಟೇಲ್ 3’ ಸಿನಿಮಾ ಬಿಡುಗಡೆ ಆಗಿತ್ತು. ಡಾರ್ಲಿಂಗ್ ಕೃಷ್ಣ (Darling Krishna) ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿರುವ ಈ ಸಿನಿಮಾದ ರಿಲೀಸ್ ಅಷ್ಟು ಸುಲಭವಾಗಿ ಇರಲಿಲ್ಲ. ಭಾರಿ ನಿರೀಕ್ಷೆ ಮೂಡಿಸಿದ್ದ ‘ಧುರಂಧರ್ 2’ ಚಿತ್ರದ ಎದುರು ಕನ್ನಡದ ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಪ್ರಬಲ ಪೈಪೋಟಿಯ ನಡುವೆಯೂ ಈ ಸಿನಿಮಾ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿಕೊಂಡಿದೆ. ಇದರಿಂದ ಚಿತ್ರತಂಡಕ್ಕೆ ಬಹಳ ಖುಷಿ ಆಗಿದೆ. ವಿಶೇಷವಾಗಿ ಫ್ಯಾಮಿಲಿ ಪ್ರೇಕ್ಷಕರು ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾದ ಕೈ ಹಿಡಿದಿದ್ದಾರೆ.

ಬಿಡುಗಡೆಯಾದ ಮೊದಲ ದಿನದಿಂದಲೇ ‘ಲವ್ ಮಾಕ್ಟೇಲ್ 3’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಈ ಸಿನಿಮಾದಲ್ಲಿನ ಎಮೋಷನಲ್ ಕಥೆಗೆ ಜನರು ಫಿದಾ ಆದರು. ಈ ಚಿತ್ರ ದಿನದಿಂದ ದಿನಕ್ಕೆ ಉತ್ತಮ ಪ್ರದರ್ಶನ ಕಂಡಿತ್ತು. ಇದೀಗ 25 ದಿನಗಳನ್ನು ಯಶಸ್ವಿಯಾಗಿ ದಾಟುವ ಮೂಲಕ 2026ರಲ್ಲಿ ಸೂಪರ್ ಹಿಟ್ ಆದ ಮೊದಲ ಕನ್ನಡ ಸಿನಿಮಾ ಎಂಬ ಖ್ಯಾತಿಗೆ ಪಾತ್ರವಾಗಿದೆ.

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮುಂದಕ್ಕೆ ಹೋಗುತ್ತಲೇ ಮಾರ್ಚ್ 19ರಂದು ‘ಲವ್ ಮಾಕ್ಟೇಲ್ 3’ ಸಿನಿಮಾವನ್ನು ವಿತರಣೆ ಮಾಡಲು ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ನಿರ್ಧರಿಸಿತು. ಪಕ್ಕಾ ಪ್ಲ್ಯಾನ್ ಪ್ರಕಾರ ರಾಜ್ಯಾದ್ಯಂತ ಈ ಚಿತ್ರವನ್ನು ವಿತರಣೆ ಮಾಡಿತು. ದೇಶದಾದ್ಯಂತ ‘ಧುರಂಧರ್ 2’ ಸಿನಿಮಾ ಚಿತ್ರಮಂದಿರಗಳನ್ನು ಬಾಚಿಕೊಂಡಿತು. ಅದರ ನಡುವೆಯೂ ‘ಲವ್ ಮಾಕ್ಟೇಲ್ 3’ ಸಿನಿಮಾ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿತು.

25 ದಿನಗಳ ಯಶಸ್ವಿ ಪ್ರದರ್ಶನದ ಗೆಲುವಿಗೆ ಕಾರಣರಾದ ಪ್ರೇಕ್ಷಕರಿಗೆ ಡಾರ್ಲಿಂಗ್ ಕೃಷ್ಣ ಅವರು ಧನ್ಯವಾದ ಅರ್ಪಿಸಿದ್ದಾರೆ. ‘ಲವ್ ಮಾಕ್ಟೇಲ್’ ಸರಣಿಯ ಹ್ಯಾಟ್ರಿಕ್ ಗೆಲುವನ್ನು ಅವರು ಸಂಭ್ರಮಿಸಿದ್ದಾರೆ. ‘ಕ್ರಿಸ್‌ಮಿ’ ಬ್ಯಾನರ್ ಮೂಲಕ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿ ಗೆಲುವು ಕಂಡಿದ್ದಾರೆ.

ಇದನ್ನೂ ಓದಿ: ಅಂತ್ಯಕಂಡ ‘ಲವ್ ಮಾಕ್ಟೇಲ್ 3’ ವಿವಾದ; ಕ್ಷಮೆ ಕೇಳಿ ಪ್ರಕರಣ ಸುಖಾಂತ್ಯ

ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತಾ, ಅಮೃತಾ ಅಯ್ಯಂಗಾರ್, ದಿಲೀಪ್ ರಾಜ್, ರೇಚಲ್ ಡೇವಿಡ್, ಶ್ವೇತಾ ಪ್ರಸಾದ್, ನಯೇರಾ, ಜಗದೀಶ್, ಗಿರಿರಾಜ್, ಅಭಿಲಾಶ್, ದಳಪತಿ ಮುಂತಾದವರು ನಟಿಸಿದ್ದಾರೆ. ಶ್ರೀ ಕ್ರೇಜಿ ಮೈಂಡ್ಸ್ ಅವರು ಛಾಯಾಗ್ರಹಣ ಮತ್ತು ಸಂಕಲನ ಮಾಡಿದ್ದಾರೆ. ನಕುಲ್ ಅಭ್ಯಂಕರ್ ಅವರು ಸಂಗೀತ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸುಡು ಬಿಸಿಲಿಗೆ ಬೆಂದ ಕರ್ನಾಟಕ: ಬೆಂಗಳೂರಿನಲ್ಲಿ ದಾಖಲೆ ಬರೆದ ತಾಪಮಾನ – Kannada News | Karnataka Weather Today: Mercury breaches 36 Celsius mark in Bengaluru

ಬೆಂಗಳೂರು, (ಏಪ್ರಿಲ್ 14): ಕರ್ನಾಟಕದಲ್ಲಿ (Karnataka) ಈ ಬಾರಿಯ ಬೇಸಿಗೆ ಬಿಸಿಲು ಜನರ ನೆತ್ತಿ ಸುಡುತ್ತಿದೆ. ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಕಲಬುರಗಿ ಜಿಲ್ಲೆಯಲ್ಲಿ ಅತ್ಯಧಿಕವಾಗಿ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಈ ಬೇಸಿಗೆಯ ಹಂಗಾಮಿನಲ್ಲಿ ಗರಿಷ್ಠವಾಗಿದೆ. ಗದಗ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ತಾಪಮಾನ ದಾಖಲಾಗಿದ್ದು, ಇಲ್ಲಿನ ಜನರನ್ನು ಹೈರಾಣಿಗಿಸಿದೆ. ಇನ್ನು ಈ ಬಾರಿಯ ಬಿಸಿಲು ಸಿಲಿಕಾನ್ ಸಿಟಿ ಬೆಂಗಳೂರು (bengaluru temperature)  ಜನರನ್ನು ಸಹ ಬಿಟ್ಟಿಲ್ಲ. ಹೌದು…ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಳೆದ ವರ್ಷದ ಬೇಸಿಗೆ ಬಿಸಿಲ ದಾಖಲೆಯನ್ನು ಮುರಿದಿದೆ.

ಬೆಂಗಳೂರಿನಲ್ಲಿ ದಾಖಲೆ ಬರೆದ ಬಿಸಿಲು

ಏಪ್ರಿಲ್ 13ರಂದು ಬೆಂಗಳೂರು ನಗರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಕಳೆದ ವರ್ಷದ ಮಾರ್ಚ್ ತಿಂಗಳ 35.4 ಡಿಗ್ರಿ ದಾಖಲೆಯನ್ನು ಮೀರಿಸಿತ್ತು. ಆದ್ರೆ, ಇಂದು (ಏಪ್ರಿಲ್ 14) ಬೆಂಗಳೂರಿನಲ್ಲಿ 36.8 ಡಿಗ್ರಿ ತಾಪಮಾನ ದಾಖಲಾಗಿದ್ದು, ಇದು ದಾಖಲೆಯಾಗಿದೆ. ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಹೆಚ್ಚು ತಾಪಮಾನ ದಾಖಲಾಗುತ್ತಿರುವುದರಿಂದ ಜನರಿಗೆ ಹೆಚ್ಚು ಬಿಸಿಯ ಅನುಭವವಾಗುತ್ತಿದ್ದು, ರಾತ್ರಿ ಬಿಸಿ ಗಾಳಿಯಿಂದ ಜನ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮಾಲಿನ್ಯದ ಭೀತಿ, ಕರಾವಳಿಯಲ್ಲಿ ಶುದ್ಧ ಗಾಳಿ! ಅಸ್ತಮಾ ರೋಗಿಗಳಿಗೆ ಎಚ್ಚರ

ಬೆಂಗಳೂರು ಜನರ ಆರೋಗ್ಯ ಕೆಡಿಸಿದ ಬಿಸಿಲು

ಈ ವರ್ಷ ರಾಜಧಾನಿಯಲ್ಲಿ ಬಿಸಲು ಎಫೆಕ್ಟ್ ಜನರ ಆರೋಗ್ಯದ ಮೇಲೆ ಬೀಳುತ್ತಿದೆ. ತಾಪಮಾನ ಹೆಚ್ಚಳವಾಗುತ್ತಿರುವವುದರಿಂದ ನಿತ್ರಾಣ, ನಿರ್ಜಲೀಕರಣ , ಚರ್ಮದಲ್ಲಿ ಅಲರ್ಜಿ ಹಾಗೂ ಅಜೀರ್ಣ ಸೇರಿದಂತೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿವೆ. ಇನ್ನು ಗರ್ಭಿಣಿಯರು ಮಕ್ಕಳು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಸುವಂತೆ ವೈದ್ಯರು ಮನವಿ ಮಾಡಿದ್ದಾರೆ. ಬಿಸಿಲಿನಲ್ಲಿ ಹೆಚ್ಚಾಗಿ ಓಡಾಟ ಮಾಡದ್ದಂತೆ ಹಾಗೂ ಹೊರಗಡೆ ಆಹಾರ ತಿಂಡಿ ಪದಾರ್ಥ ಸೇವನೆ ಮಾಡದ್ದಂತೆ ಸಲಹೆ ನೀಡಿದ್ದಾರೆ.

ಕಲಬುರಗಿಯಲ್ಲಿ ಏ.17ರವರೆಗೂ ಭಾರಿ ಬಿಸಿ ಗಾಳಿ

ಈಗಾಗಲೇ ಉರಿ ಬಿಸಿಲಿನಿಂದಾಗಿ ತತ್ತರಿಸಿರುವ ಕಲಬುರಗಿ ಜಿಲ್ಲೆಗೆ ಏ.17ರವರೆಗೆ ಭಾರಿ ಬಿಸಿ ಗಾಳಿಯ ಅಲೆಗಳ ಎಲ್ಲೋ ಅಲರ್ಟ್‌ ನೀಡಲಾಗಿದೆ. ಹೀಟ್‌ವೇವ್‌ನಿಂದ ಆರೋಗ್ಯ ತೊಂದರೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಮಧ್ಯಾಹ್ನ 12ರಿಂದ ಸಂಜೆ 5ರವರೆಗೂ ಹೊರಗೆ ಅಡ್ಡಾಡದಂತೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಇನ್ನೂ ಉತ್ತರ ಒಳನಾಡಿನ ಬೀದರ್, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ವಿಜಯಪುರ, ಕಲಬುರಗಿ, ಜಿಲ್ಲೆಗಳಲ್ಲಿ 42 ರಿಂದ 44 ಡಿಗ್ರಿಗೆ ಏರಿಕೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲೂ 2 ಡಿಗ್ರಿ ಏರಿಕೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಏರಿಕೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version