ಗದಗದಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಬಿಂದಾಸ್ ಎಂಟ್ರಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಗದಗ, ಏಪ್ರಿಲ್ 3: ಜಿಲ್ಲೆಯಲ್ಲಿ ಮುಸುಕುಧಾರಿ ಕಳ್ಳರ ಗ್ಯಾಂಗ್ ಮತ್ತೆ ಪ್ರತ್ಯಕ್ಷವಾಗಿದ್ದು, ಸರಣಿ ಕಳ್ಳತನದ ಮೂಲಕ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ. ನಗರದ ಪುಟ್ಟರಾಜ್ ನಗರ ಮತ್ತು ಕೇಶವ್ ಪಾರ್ಕ್ ಪ್ರದೇಶದಲ್ಲಿ ನಡುರಾತ್ರಿ ಮಾರಕಾಸ್ತ್ರ ಹಿಡಿದು ಸಂಚರಿಸುತ್ತಿರುವ ಐವರು ಮುಸುಕುಧಾರಿಗಳ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಡಾವಣೆಯ ನಿವಾಸಿ ವಿಜಯಲಕ್ಷ್ಮೀ ಎಂಬುವವರು ಜನ್ಮದಿನದ ಕಾರ್ಯಕ್ರಮಕ್ಕೆ ತಂದೆಯ ಮನೆಗೆ ಹೋಗಿದ್ದ ವೇಳೆ, ಕಳ್ಳರು ಮನೆಯ ಬೀಗ ಮುರಿದು ಸುಮಾರು 70 ಗ್ರಾಂ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ರಾತ್ರಿ…

Read More

ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ, ಜನ ವಿಡಿಯೋ ಮಾಡಿದ್ರು ಸಹಾಯಕ್ಕೆ ಬರ್ಲಿಲ್ಲ

ಒಂದು ಹೊತ್ತಿನ ಊಟಕ್ಕೂ ಬಡತನ, ವಿಪರೀತ ಬಿಸಿಲು ಹೊಟ್ಟೆಗೇನೂ ಇಲ್ಲದೆ ಬಿಸಿಲಲ್ಲಿ ಕುಸಿದು ಬಿದ್ದ ತಾಯಿಯನ್ನು ಉಳಿಸಿಕೊಳ್ಳಲು, ಬಾಲಕನೊಬ್ಬ ಅಲ್ಲಿಲ್ಲಿ ಬೇಡಿ ನೀರನ್ನು ತಂದು ತಾಯಿಗೆ ಕುಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಚಪ್ಪಲಿ ಇಲ್ಲದೆ ಬರಿಗಾಲಲ್ಲಿ ಬಿಸಿಲಲ್ಲಿ ಓಡಿ ಚಿಪ್ಸ್​ ಹಾಗೂ ನೀರನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹೆಚ್ಚು ವಾಹನಗಳು ಓಡಾಡುವ ರಸ್ತೆಯಲ್ಲಿ ಮಹಿಳೆಯೊಬ್ಬರು ಬಿದ್ದಿರುವುದನ್ನು ಕಾಣಬಹುದು, ಮತ್ತೊಂದು ಕಡೆಯಿಂದ ಬಾಲಕ ಕೈಯಲ್ಲಿ ಬಾಟಲಿ ಹಿಡಿದು ಓಡಿ ಬರುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಆದರೆ ಅದನ್ನು ನೋಡಿ…

Read More

Video: ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ

ಟೆಹ್ರಾನ್, ಏಪ್ರಿಲ್ 3: ಇಸ್ರೇಲ್-ಅಮೆರಿಕವು ಇರಾನ್ ಮೇಲಿನ ದಾಳಿಯನ್ನು ಮುಂದುವರೆಸಿದೆ. ಮಧ್ಯಪ್ರಾಚ್ಯದಲ್ಲಿನ ಯುದ್ಧವು ಎರಡನೇ ತಿಂಗಳಿಗೆ ಕಾಲಿಟ್ಟಿದೆ. ಇರಾನ್​ನ ಅಲ್ಬೋರ್ಜ್​ ಪ್ರಾಂತ್ಯದಲ್ಲಿ ಅಮೆಡರಿಕ-ಇಸ್ರೇಲಿ ಕ್ಷಿಪಣಿ ದಾಳಿಯಿಂದಾಗಿ ಕರಾಜ್​ನಲ್ಲಿರುವ ಬಿ1 ಸೇತುವೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಈ ದಾಳಿಯಿಂದ ಗಣನೀಯ ಹಾನಿಯಾಗಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿದೆ. ಗುರುವಾರ ಟ್ರಂಪ್ ಸುದ್ದಿಗೋಷ್ಠಿ ನಡೆಸಿ ಪ್ರಸ್ತುತ ಯುದ್ಧ ಸ್ಥಿತಿ ಬಗ್ಗೆ ಮಾತನಾಡಿದ್ದರು. ಇರಾನ್ ಮೇಲಿನ ದಾಳಿ ಮುಂದುವರೆಸುವುದಾಗಿ ಹೇಳಿದ್ದರು. ಅಷ್ಟೇ ಅಲ್ಲದೆ ಹಾರ್ಮುಜ್ ಜಲಸಂಧಿಯಿಂದ ತಮಗೇನು ಉಪಯೋಗವಿಲ್ಲ, ನಮ್ಮ ಹಡಗುಗಳೇನು ಅಲ್ಲಿಂದ…

Read More

‘ನಾನು ಆಡೋದನ್ನು ಅವರು ಸಹಿಸಲ್ಲ, ನನ್ನ ಕಂಡ್ರೆ ಹೊಟ್ಟೆಕಿಚ್ಚು’; ಸಿಟ್ಟು ಹೊರಹಾಕಿದ ರಹಾನೆ

ಅಂಜಿಕ್ಯ ರಹಾನೆ ನೇತೃತ್ವದ ಕೋಲ್ಕತ್ತ ನೈಟ್ ರೈಡರ್ಸ್ ಈ ಐಪಿಎಲ್ ಸೀಸನ್ ಅಲ್ಲಿ ಸತತ ಎರಡನೇ ಸೋಲು ಕಂಡಿದೆ. ಇದು ತಂಡಕ್ಕೆ ದೊಡ್ಡ ಹಿನ್ನಡೆ ತಂದಿದೆ. ಎರಡು ಸೋಲು ತಂಡದವರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಸಾಧ್ಯತೆ ಇರುತ್ತದೆ. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಹಾನೆ ಅವರಿಂದ ನಿರೀಕ್ಷಿತ ಮಟ್ಟದ ಆಟ ಬಂದಿಲ್ಲ. ಅವರು 10 ಬಾಲ್​​ಗಳಿಗೆ 8 ರನ್ ಹೊಡೆಯಲಷ್ಟೇ ಶಕ್ಯರಾದರು. ಈ ಕಾರಣಕ್ಕೆ ಅವರನ್ನು ಟೀಕೆ ಮಾಡಲಾಗುತ್ತಿದೆ. ಆದರೆ, ಈ ಟೀಕೆಯನ್ನು ತೆಗೆದುಕೊಳ್ಳಲು ಅವರು ಸಿದ್ಧರಿಲ್ಲ. ‘2023ರಿಂದ ಇಲ್ಲಿಯವರೆಗೆ…

Read More

ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ; 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಏಪ್ರಿಲ್ 03: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (Weather Forecast)  ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ,…

Read More

ಪತ್ನಿ ಜತೆ ಜಗಳವಾಡಿ ಆಕೆಯ ಮೂಗು, ಕೆನ್ನೆ ಕಚ್ಚಿ ಮಾಂಸವನ್ನೇ ಕಿತ್ತ ಗಂಡ, ಮುಖಕ್ಕೆ 10 ಹೊಲಿಗೆ

ಹಮೀರ್​ಪುರ, ಏಪ್ರಿಲ್ 03: ಪತ್ನಿ(Wife) ಜತೆ ಜಗಳವಾಡಿ ಕೋಪದ ಭರದಲ್ಲಿ ಆಕೆಯ ಮೂಗು, ಕೆನ್ನೆ ಕಚ್ಚಿರುವ ಘಟನೆ ಉತ್ತರ ಪ್ರದೇಶದ ಹಮೀರ್​ಪುರದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುಖಕ್ಕೆ 10 ಹೊಲಿಗೆಗಳನ್ನು ಹಾಕಲಾಗಿದೆ. ಈ ದಾಳಿಯಲ್ಲಿ ಮೂಗಿನ ಮಾಂಸವೆಲ್ಲಾ ಕಿತ್ತು ಬಂದಿದೆ, ಕೆನ್ನೆಗಳ ಮೇಲೂ ಕೂಡ ಆಳವಾದ ಗಾಯಗಳಾಗಿವೆ. ಆರಂಭದಲ್ಲಿ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆಕೆಯ ಮುಖದ ಮೇಲೆ ಹತ್ತು ಗಾಯಗಳನ್ನು ಹೊಲಿಗೆ ಹಾಕಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಝಾನ್ಸಿಯ…

Read More

‘ರಾಮಾಯಣ’ ಟೀಸರ್​ನಲ್ಲಿ ದೊಡ್ಡ ತಪ್ಪು; AI ಅಲ್ಲಿ ಮಾಡಿದ್ದು ಎಂದು ಕಂಡು ಹಿಡಿದ ಫ್ಯಾನ್ಸ್

ಬಹುನಿರೀಕ್ಷಿತ ‘ರಾಮಾಯಣ’ ಟೀಸರ್ (Ramayana Teaser) ಹನುಮ ಜಯಂತಿ ಪ್ರಯುಕ್ತ ಏಪ್ರಿಲ್ 2ರಂದು ರಿಲೀಸ್ ಆಯಿತು. ಸಿನಿಮಾದ ಬಜೆಟ್ 2 ಸಾವಿರ ಕೋಟಿ ರೂಪಾಯಿ, 4 ಸಾವಿರ ಕೋಟಿ ರೂಪಾಯಿ ಎಂದೆಲ್ಲ ಹೇಳಲಾಗಿದೆ. ಈ ಕಾರಣದಿಂದಲೇ ಸಿನಮಾದ ಟೀಸರ್ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಜನರು ಸಿನಿಮಾದಿಂದ ದೊಡ್ಡದನ್ನು ನಿರೀಕ್ಷೆ ಮಾಡುತ್ತಿದ್ದಾರೆ. ಆದರೆ, ಟೀಸರ್ ನೋಡಿದ ಬಳಿಕ ಸಾಕಷ್ಟು ಟೀಕೆ ಎದುರಾಗಿದೆ. ಟೀಸರ್​​​ನಲ್ಲಿರುವ ಎರಡು ದೊಡ್ಡ ತಪ್ಪನ್ನು ನೆಟ್ಟಿಗರು ಕಂಡು ಹಿಡಿದಿದ್ದಾರೆ. ದೊಡ್ಡ ಬಜೆಟ್ ಸಿನಿಮಾ ಮಾಡಬೇಕು…

Read More

ಉಪಚುನಾವಣೆ ಪ್ರಚಾರ ಅಬ್ಬರ: ದಾವಣಗೆರೆಯಲ್ಲಿ ಮಳೆಯಲ್ಲೇ ‘ಕೈ’ ನಾಯಕರ ಘರ್ಜನೆ; ಬಾಗಲಕೋಟೆಯಲ್ಲಿ ಚರಂತಿಮಠ ಪರ ಯತ್ನಾಳ್ ಮತಬೇಟೆ!

ದಾವಣಗೆರೆ/ಬಾಗಲಕೋಟೆ, ಏಪ್ರಿಲ್ 3: ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (Karnataka By-Election 2026) ಪ್ರಚಾರ ಅಂತಿಮ ಘಟ್ಟಕ್ಕೆ ತಲುಪಿದ್ದು, ಅಡಳಿತಾರೂಢ ಕಾಂಗ್ರೆಸ್ (Congress) ಮತ್ತು ಪ್ರತಿಪಕ್ಷ ಬಿಜೆಪಿ (BJP) ನಡುವೆ ಬಿರುಸಿನ ಪೈಪೋಟಿ ಏರ್ಪಟ್ಟಿದೆ. ದಾವಣಗೆರೆ ದಕ್ಷಿಣದ ಪ್ರಚಾರ ಕಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಬ್ಬರಿಸಿದರೆ, ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಉಚ್ಚಾಟಿತರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೇಸರಿ ಅಭ್ಯರ್ಥಿ ಪರ ಬ್ಯಾಟಿಂಗ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ದಾವಣಗೆರೆ ದಕ್ಷಿಣ: ಮಳೆಯಲ್ಲೂ ಧೃತಿಗೆಡದ…

Read More

Horoscope Today: ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 3, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಾಡ್ಯ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ರವಿ ಮೀನ ರಾಶಿಯಲ್ಲಿ…

Read More

Daily Devotional: ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಕಟ್ಟುವಾಗ ಅಡಿಪಾಯ ಯಾವ ದಿನ ಕಾಕಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯ ಪ್ರಕಾರ, ಮನೆಯ ನಿರ್ಮಾಣ ಕಾರ್ಯವನ್ನು (ಗೃಹಾರಂಭ) ಪ್ರಾರಂಭಿಸುವ ಸಮಯ ಬಹಳ ಮಹತ್ವಪೂರ್ಣವಾಗಿದೆ. ಸರಿಯಾದ ಮಾಸದಲ್ಲಿ ಗೃಹಾರಂಭ ಮಾಡಿದರೆ ಅದು ನಿರ್ವಿಘ್ನವಾಗಿ ಪೂರ್ಣಗೊಂಡು ಮನೆ ನಿವಾಸಿಗಳಿಗೆ ಶುಭ ಫಲ ನೀಡುತ್ತದೆ. ವೈಶಾಖ, ಫಾಲ್ಗುಣ, ಶ್ರಾವಣ ಮತ್ತು ಮಾಘ ಮಾಸಗಳು ಗೃಹಾರಂಭಕ್ಕೆ ಅತ್ಯಂತ ಶುಭಕರ ಎಂದು ಬಾದರಾಯಣರು ತಮ್ಮ ಗ್ರಂಥಗಳಲ್ಲಿ ಹೇಳಿದ್ದಾರೆ. ನಾರದ ಮಹರ್ಷಿಗಳು ಪುಷ್ಯ…

Read More