Headlines

ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವುಗಳು ರಕ್ಷಣೆ, ಕೆಲವು ಹಸುಗಳು ಮೃತಪಟ್ಟಿರುವ ಶಂಕೆ – Kannada News | Mulbagal Cow Rescue: Gorakshakas Intercept Cruel Transport from Hyderabad to Bengaluru

ಕೋಲಾರ, ಫೆ.3: ಹೈದರಾಬಾದ್‌ನಿಂದ ಬೆಂಗಳೂರಿಗೆ ಅಕ್ರಮವಾಗಿ ಕಂಟೇನರ್‌ನಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 70ಕ್ಕೂ ಹೆಚ್ಚು ಗೋವುಗಳನ್ನು ಮುಳಬಾಗಿಲು ತಾಲೂಕಿನ ಹನುಮನಹಳ್ಳಿ ಟೋಲ್ ಬಳಿ ಗೋರಕ್ಷಕರು ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಹನುಮನಹಳ್ಳಿ ಟೋಲ್ ಬಳಿ ಇಂದು (ಫೆ.3) ಸಂಜೆ ಈ ಘಟನೆ ನಡೆದಿದೆ. ಹೈದರಾಬಾದ್‌ನಿಂದ ಬೆಂಗಳೂರಿನ ಕಸಾಯಿಖಾನೆಗೆ ಅತಿ ಕ್ರೂರವಾಗಿ ಕಂಟೇನರ್‌ನಲ್ಲಿ ಗೋವುಗಳನ್ನು ತುಂಬಿಕೊಂಡು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಗೋರಕ್ಷಕ ದಳ ಹಾಗೂ ಭಜರಂಗದಳದ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದರು. ಮುಚ್ಚಿದ ಕಂಟೇನರ್‌ನಲ್ಲಿ ಗಾಳಿ, ಬೆಳಕು, ಆಹಾರ ಮತ್ತು ನೀರಿಲ್ಲದೆ ಸುಮಾರು 70ಕ್ಕೂ ಹೆಚ್ಚು ದೇಸೀ ತಳಿಯ ಹಸುಗಳನ್ನು ತುಂಬಲಾಗಿತ್ತು. ದೀರ್ಘ ಪ್ರಯಾಣದ ಆಯಾಸ ಮತ್ತು ಉಸಿರುಗಟ್ಟಿಸುವ ವಾತಾವರಣದಿಂದಾಗಿ ಕಂಟೇನರ್‌ನಲ್ಲೇ ಕೆಲವು ಹಸುಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಂಟೇನರ್ ತೆರೆದಾಗ ಗೋವುಗಳ ದಯನೀಯ ಸ್ಥಿತಿ ಕಂಡು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *