
ಮಂಗಳೂರು, ಫೆಬ್ರವರಿ 7: ಸಿಎದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂಬ ಯತೀಂದ್ರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಮಂಗಳೂರಿನಲ್ಲಿ ಶನಿವಾರ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ಸಿಎಂ ಆಗಬೇಕು ಎಂಬ ಶಾಸಕರಿಗೆ, ಜನರಿಗೆ ಹಾಗೂ ನಿಮಗೆ ಎಲ್ಲರಿಗೂ ಇದೆ. ಆದರೆ ಅಂತಿಮವಾಗಿ ಪಕ್ಷ ಏನು ಹೇಳುತ್ತದೋ ಅದೇ ಆಗುತ್ತದೆ ಎಂದು ಹೇಳಿದ್ದಾರೆ. ಬಜೆಟ್ ಬಳಿಕ ಸಿಎಂ ಬದಲಾವಣೆ ಬಗ್ಗೆ ಕೇಳಿದಾಗ, ಕಾಲವೇ ಉತ್ತರಿಸಲಿದೆ ಎಂದು ಪ್ರತಿಕ್ರಿಯಿಸಿದರು.