Headlines

ವಾರಾಣಸಿಯಲ್ಲಿ ಬುಲ್ಡೋಜರ್ ದಾಳಿ ಖಂಡಿಸಿ ತನ್ನ ಅಂಗಡಿಗೆ ತಾನೇ ಬೆಂಕಿ ಹಚ್ಚಿದ ವ್ಯಾಪಾರಿ – Kannada News | Man Sets his own Shop Ablaze Pours Petrol On Himself Amid Bulldozer Action begins In Varanasi

ವಾರಾಣಸಿ, ಫೆಬ್ರವರಿ 9: ಉತ್ತರ ಪ್ರದೇಶದ ವಾರಾಣಸಿಯ (Varanasi) ದಾಲ್ಮಂಡಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಸರ್ಕಾರ ಬುಲ್ಡೋಜರ್ ಬಳಸಿ ಮನೆಗಳನ್ನು ಕೆಡವಲು ಪ್ರಾರಂಭಿಸಿದೆ. ಇಂದು, ಪುರಸಭೆ ಗುರುತಿಸಿದ ಶಿಥಿಲಗೊಂಡ ಮನೆಗಳಲ್ಲಿ 21 ಮನೆಗಳನ್ನು ನೆಲಸಮ ಮಾಡಲಾಗಿದೆ. ಇದು ಒಂದೇ ದಿನದಲ್ಲಿ ದಾಲ್ಮಂಡಿಯಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆಯಾಗಿದೆ. ಇದನ್ನು ಖಂಡಿಸಿ ಸ್ಥಳೀಯ ಅಂಗಡಿಯವರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಆಡಳಿತ ಅಧಿಕಾರಿಗಳಿಂದ 10 ದಿನಗಳ ಕಾಲಾವಕಾಶ ಕೋರುತ್ತಿದ್ದಾರೆ. ಆದರೂ ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ. ಹೀಗಾಗಿ, ಕಾರ್ಯಾಚರಣೆಯ ಸಮಯದಲ್ಲಿ ಅಂಗಡಿ ಮಾಲೀಕರೊಬ್ಬರು ತಮ್ಮ ಮೇಲೆ ಪೆಟ್ರೋಲ್ ಸುರಿದುಕೊಂಡು, ಮನೆಗೂ ಬೆಂಕಿ ಹಚ್ಚಿದ್ದಾರೆ. ತಮ್ಮ ಮೈಗೂ ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

ನಮ್ಮ ತಪ್ಪೇನು? ನೀವು ನಮ್ಮನ್ನು ಕೊಲ್ಲುತ್ತೀರಾ? ನೀವು ರಸ್ತೆ ಅಗಲೀಕರಣ ಮಾಡಲು ಬಯಸಿದರೆ ನೀವು ಜನರ ಜೀವನವನ್ನು ನಾಶ ಮಾಡುತ್ತೀರಾ? ಸರ್ಕಾರ ನಮ್ಮನ್ನು ನಾಶ ಮಾಡುತ್ತಿದೆ. ಅವರು ನಮ್ಮ ಜೀವನಕ್ಕೆ ಆಧಾರವಾಗಿದ್ದ ಅಂಗಡಿಯನ್ನೇ ಕಸಿದುಕೊಂಡಿದೆ. ನಮಗೆ ಸರ್ಕಾರ ಯಾವುದೇ ಸೂಚನೆ ನೀಡಿಲ್ಲ ಎಂದು ಆ ವ್ಯಾಪಾರಿ ಅಳುತ್ತಾ ಕಿರುಚಾಡಿದ್ದಾರೆ. ಜನರೆಲ್ಲ ಅವರನ್ನು ಕೆಳಗಿಳಿಯಲು ಎಷ್ಟೇ ಬೇಡಿಕೊಂಡರೂ ಅವರು ಕೆಳಗೆ ಇಳಿಯಲಿಲ್ಲ.

ಇದನ್ನೂ ಓದಿ: ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ

ಗಲಾಟೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು 4 ಪೊಲೀಸ್ ಠಾಣೆಗಳ ಪಡೆಗಳನ್ನು ನಿಯೋಜಿಸಿದೆ. ಅಲ್ಲಿ ಮಹಿಳಾ ಸಿಬ್ಬಂದಿ ಸೇರಿದಂತೆ 500 ಪೊಲೀಸ್ ಸಿಬ್ಬಂದಿ ಇದ್ದಾರೆ. ಪರಿಸ್ಥಿತಿಯನ್ನು ಡ್ರೋನ್‌ಗಳ ಮೂಲಕವೂ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಇದಕ್ಕೂ ಮೊದಲು, ಜನವರಿ 21ರಂದು 8 ಮನೆಗಳನ್ನು ಒಟ್ಟಿಗೆ ಕೆಡವಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *