Headlines

ಕರ್ನಾಟಕಕ್ಕೆ ಗುಡ್ ನ್ಯೂಸ್; ಬಳ್ಳಾರಿ- ಹೊಸಪೇಟೆ ನಡುವೆ ಹೊಸ ರೈಲು ಮಾರ್ಗಕ್ಕೆ ಒಪ್ಪಿಗೆ – Kannada News | Modi Cabinet Approves Ballari Hosapete 3rd and 4th Railway line project in Karnataka know details

ಬೆಂಗಳೂರು, ಫೆಬ್ರವರಿ 14: ಉತ್ತರ ಕರ್ನಾಟಕ ಭಾಗದ ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾದ ಹಂಪಿಗೆ ಹೋಗುವ ಪ್ರಯಾಣಿಕರಿಗೆ ರೈಲು ಸಂಚಾರ ಇನ್ಮುಂದೆ ಬಹಳ ಆರಾಮದಾಯಕವಾಗಲಿದೆ. ಏಕೆಂದರೆ, ಮೋದಿ ಸರ್ಕಾರ ಬಳ್ಳಾರಿ- ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ. ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಹೊಸ ರೈಲು ಮಾರ್ಗ ಹಂಪಿ (ಯುನೆಸ್ಕೋ ವಿಶ್ವ ಪರಂಪರೆಯ ತಾಣ), ಬಳ್ಳಾರಿ ಕೋಟೆ, ದರೋಜಿ ಕರಡಿ ಧಾಮ, ತುಂಗಭದ್ರಾ ಅಣೆಕಟ್ಟು, ಕೆಂಚನಗುಡ್ಡ, ವಿಜಯ ವಿಠಲ ದೇವಾಲಯ, ಇತ್ಯಾದಿ ಪ್ರಮುಖ ಪ್ರವಾಸಿ ತಾಣಗಳ ಸಂಪರ್ಕವನ್ನು ಸುಧಾರಿಸುತ್ತದೆ. ಅಲ್ಲದೆ, ಕಬ್ಬಿಣದ ಅದಿರು ಸಮೃದ್ಧ ಬಳ್ಳಾರಿ ಪ್ರದೇಶಕ್ಕೆ ಸಂಪರ್ಕವನ್ನು ಉತ್ತಮಗೊಳಿಸುತ್ತದೆ. ವಾರ್ಷಿಕ 25 ಮಿಲಿಯನ್ ಟನ್ ಹೆಚ್ಚುವರಿ ಸರಕು ಸಾಗಣೆಗೆ ಅನುಕೂಲ ಮಾಡಿಕೊಡುತ್ತದೆ. ಈ ಯೋಜನೆಯಿಂದ ಪ್ರತಿ ವರ್ಷ 323 ಕೋಟಿ ಲಾಜಿಸ್ಟಿಕ್ಸ್ ವೆಚ್ಚ ಉಳಿತಾಯವಾಗಲಿದೆ.

ಇದನ್ನೂ ಓದಿ: ಮಹಾರಾಷ್ಟ್ರದ ನಾಂದೇಡ್​ ಮತ್ತು ಬೀದರ್ ನಡುವಿನ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲು!

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ರೈಲ್ವೆ ಸಚಿವಾಲಯದ ಸುಮಾರು 18,509 ಕೋಟಿ ರೂ. ವೆಚ್ಚದ ಮೂರು ಯೋಜನೆಗಳನ್ನು ಅನುಮೋದಿಸಿದೆ. ಈ ಯೋಜನೆಗಳಲ್ಲಿ ಕಸರಾ-ಮನ್ಮಾಡ್, ದೆಹಲಿ-ಅಂಬಾಲ ಮತ್ತು ಬಳ್ಳಾರಿ-ಹೊಸಪೇಟೆ ನಡುವಿನ ಮೂರನೇ ಮತ್ತು ನಾಲ್ಕನೇ ಮಾರ್ಗಗಳ ನಿರ್ಮಾಣವೂ ಸೇರಿದೆ.

65 ಕಿ.ಮೀ ಉದ್ದದ ಬಳ್ಳಾರಿ-ಹೊಸಪೇಟೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗ ಯೋಜನೆಯು 34 ಪ್ರಮುಖ ಸೇತುವೆಗಳು ಮತ್ತು 220 ಸಣ್ಣ ಸೇತುವೆಗಳನ್ನು ಒಳಗೊಂಡಿರುತ್ತದೆ. ಇದರ ಜೊತೆಗೆ, ಈ ಯೋಜನೆಯು 11 ರಸ್ತೆ ಓವರ್ ಬ್ರಿಡ್ಜ್‌ಗಳು (ROBಗಳು) ಮತ್ತು 14 ರಸ್ತೆ ಕೆಳ ಸೇತುವೆಗಳನ್ನು (RUBಗಳು) ಒಳಗೊಂಡಿರುತ್ತದೆ. ಈ ಯೋಜನೆಯ ಒಟ್ಟು ಹಳಿಗಳ ಉದ್ದ 149 ಕಿ.ಮೀ. ಬಳ್ಳಾರಿ-ಹೊಸಪೇಟೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗ ಯೋಜನೆಯನ್ನು 4 ವರ್ಷಗಳಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಯೋಜನೆಯು ರೈಲು ಸಾಮರ್ಥ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ಮೂಲಕ ಕರ್ನಾಟಕದ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಭಾರೀ ಪ್ರಯೋಜನ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: RailOne app : ರೈಲು ಪ್ರಯಾಣಿಕರೇ ಗಮನಿಸಿ; ಹಲವು ಆ್ಯಪ್​ಗಳ ಬದಲು ಈ ಒಂದೇ ಆ್ಯಪ್​ನಲ್ಲಿ ಸಿಗಲಿದೆ ಎಲ್ಲ ರೈಲ್ವೆ ಸೇವೆ

ದೆಹಲಿ, ಹರಿಯಾಣ, ಮಹಾರಾಷ್ಟ್ರ ಮತ್ತು ಕರ್ನಾಟಕದಾದ್ಯಂತ 12 ಜಿಲ್ಲೆಗಳನ್ನು ವ್ಯಾಪಿಸಿರುವ 3 ಪ್ರಮುಖ ಬಹು-ಪಥ ನಿರ್ಮಾಣ ರೈಲ್ವೆ ಯೋಜನೆಗಳಿಗೆ ಒಟ್ಟು 18,509 ಕೋಟಿ ರೂ. ಹೂಡಿಕೆಯ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳನ್ನು ಪ್ರಧಾನ ಮಂತ್ರಿ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಯೋಜಿಸಲಾಗಿದೆ. ಈ ಯೋಜನೆಗಳು ಅಸ್ತಿತ್ವದಲ್ಲಿರುವ ರೈಲು ಜಾಲಕ್ಕೆ ಸುಮಾರು 389 ಕಿ.ಮೀ.ಗಳನ್ನು ಸೇರಿಸುತ್ತವೆ.

ಈ ರೈಲು ಮಾರ್ಗ ವಿಸ್ತರಣೆಯು ಸುಮಾರು 3,902 ಹಳ್ಳಿಗಳಿಗೆ ರೈಲು ಸಂಪರ್ಕವನ್ನು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದು ಸುಮಾರು 97 ಲಕ್ಷ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಹಾಗೇ, ಉತ್ತಮ ಸಂಪರ್ಕವು ಒಳಗೊಂಡಿರುವ ಪ್ರದೇಶಗಳಲ್ಲಿ ಹೊಸ ಉದ್ಯೋಗ ಮತ್ತು ಸ್ವ-ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *