ರಾಜಸ್ಥಾನ, ಫೆಬ್ರವರಿ 23: ರಾಜಸ್ಥಾನದಲ್ಲಿ ದತ್ತಿ ಕಾರ್ಯಕ್ರಮವೊಂದು ನಡೆಯುತ್ತಿತ್ತು, ಬಿಜೆಪಿ ಮಾಜಿ ಸಂಸದ ಸುಖ್ಬೀರ್ ಸಿಂಗ್ ಎಲ್ಲರಿಗೂ ಬೆಡ್ಶೀಟ್ ವಿತರಿಸುತ್ತಿದ್ದರು. ಈ ಸಮಯದಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಿದವರಿಗೆ ಕೊಡುವುದಿಲ್ಲ ಎಂದು ಹೇಳುತ್ತಾ ಮುಸ್ಲಿಮರಿಗೆ ಹೊಸಕೆ ಕೊಡಲು ನಿರಾಕರಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ಮಾಜಿ ಸಂಸದನ ನಡೆ ಹೊಸ ವಿವಾದವನ್ನು ಹುಟ್ಟುಹಾಕಿದೆ. 2014 ಮತ್ತು 2019 ರ ಸಂಸತ್ ಚುನಾವಣೆಯಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.ಟೋಂಕ್ ಜಿಲ್ಲೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ತನ್ನ ನಿರ್ಧಾರದಿಂದ ಯಾರಿಗಾದರೂ ನೋವಾದರೆ ಅದರಿಂದ ನನಗೇನು ಆಗಬೇಕಿಲ್ಲ ಎಂದು ಹೇಳುವ ಮೂಲಕ ಅವರು ತಿರಸ್ಕಾರದ ಮನೋಭಾವವನ್ನು ತೋರಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ