ಶಿವಮೊಗ್ಗ, (ಫೆಬ್ರವರಿ 25): ಶಿವಮೊಗ್ಗ (Shivamogga) ಹೊರವಲಯದಲ್ಲಿರುವ ಸೂಳೆಬೈಲಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಂಕೇತ್ ಕೊಲೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಸೂಳೆಬೈಲಿನಲ್ಲಿ ಸಂಕೇತ್ ಕೊಲೆ ನಡೆದು ಇಂದಿಗೆ ಮೂರನೇ ದಿನ. ಫೆ. 23. ರ ರಾತ್ರಿ 9.30 ಆಸುಪಾಸಿನಲ್ಲಿ ಆತನ ಕೊಲೆ ನಡೆದಿತ್ತು. ಕೊಲೆ ಕೇಸ್ ನಲ್ಲಿ ಈಗಾಗಲೇ ತುಂಗಾ ನಗರ ಪೊಲೀಸರು 7 ಅಪ್ರಾಪ್ತರನ್ನು ಬಂಧಿಸಿದ್ದಾರೆ. ಈ ಕೊಲೆ ಕೇಸ್ ನಲ್ಲಿ ಅದೇ ಶಾಲೆಯ ನಾಲ್ವರು ಇರುವುದು ಆಘಾತಕಾರಿ ಬೆಳವಣಿಗೆಯಾಗಿದೆ. ಕೊಲೆ ದಿನ ನಡೆದಿದ್ದು ಏನು? ಕೊಲೆ ಮಾಡಿದ್ದು ಯಾರು? ಎನ್ನುವುದನ್ನು ಹತ್ಯೆಯಾದ ಸಂಕೇತ್ ಸಹಪಾಠಿಗಳು ಬಿಚ್ಚಿಟ್ಟಿದ್ದಾರೆ. ಇನ್ನು ಸಂಕೇತ ಜೀವ ಉಳಿಸಿಲು ಶಿಕ್ಷಕ ನಡೆಸಿದ ಹೋರಾಟ ಹೇಗಿತ್ತು ಎನ್ನುವ ಡಿಟೇಲ್ಸ್ ವಿಡಿಯೋನಲ್ಲಿದೆ.