ಆನೇಕಲ್, ಮಾರ್ಚ್ 2: ಬೆಂಗಳೂರಿನ ಆನೇಕಲ್ ಸಮೀಪದ ರೈಲ್ವೆ ಗೇಟ್ ಬಳಿ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಘಟನೆ ನಡೆದಿದೆ. ಆನೇಕಲ್ನಿಂದ ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಸ್ಸು ರೈಲು ಹಳಿಯ ಮೇಲೆ ಸಾಗುತ್ತಿದ್ದಂತೆಯೇ ಕೆಟ್ಟ ನಿಂತಿತು. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಕಿಲೋ ಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಅದೃಷ್ಟವಶಾತ್, ರೈಲ್ವೆ ಪಾಸಿಂಗ್ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ.