ಬೆಂಗಳೂರಲ್ಲಿ ಮಾತನಾಡಲು ಬಿಡದ ಫ್ಯಾನ್ಸ್​​ಗೆ ಎಚ್ಚರಿಕೆ ನೀಡಿದ ಜೂ.ಎನ್​ಟಿಆರ್

ಬೆಂಗಳೂರಲ್ಲಿ ಮಾತನಾಡಲು ಬಿಡದ ಫ್ಯಾನ್ಸ್​​ಗೆ ಎಚ್ಚರಿಕೆ ನೀಡಿದ ಜೂ.ಎನ್​ಟಿಆರ್

ಟಾಲಿವುಡ್ ನಟ ಜೂನಿಯರ್ ಎನ್​​ಟಿಆರ್ (JR NTR) ಅವರು ಭಾನುವಾರ (ಮಾರ್ಚ್ 8) ಬೆಂಗಳೂರಿಗೆ ಆಗಮಿಸಿದ್ದರು. ಕಿಮ್ಸ್ ಆಸ್ಪತ್ರೆಯ ಹೊಸ ಘಟಕದ ಉದ್ಘಾಟನೆಗಾಗಿ ಅವರು ಇಲ್ಲಿಗೆ ಬಂದಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡುವಾಗ ಅಭಿಮಾನಿಗಳು ಇದಕ್ಕೆ ಅವಕಾಶ ಕೊಡಲಿಲ್ಲ. ಒಂದೇ ಸಮನೆ ಕೂಗುತ್ತಿದ್ದರು. ಆಗ ಜೂನಿಯರ್ ಎನ್​​ಟಿಆರ್ ಅವರು ಖಡಕ್ ಎಚ್ಚರಿಕೆ ನೀಡಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಜೂನಿಯರ್​ ಎನ್​​ಟಿಆರ್ ಕಿಮ್ಸ್ ಘಟಕ ಉದ್ಘಾಟನೆಗೆ ಬರಲು ಒಂದು ಕಾರಣವೂ ಇತ್ತು. 1983ರಲ್ಲಿ ಜೂ ಎನ್​​​ಟಿಆರ್ ಅವರ ತಾತ ಎನ್​​ಟಿಆರ್ ಅವರೇ ಕಿಮ್ಸ್​​ಗೆ ಅಡಿಗಲ್ಲು ಹಾಕಿದ್ದರು. 2009ರಲ್ಲಿ ಜೂ ಎನ್​​ಟಿಆರ್ ಭಾರಿ ರಸ್ತೆ ಅಪಘಾತಕ್ಕೆ ಒಳಾಗಾದಾಗ ಅವರು ಕಿಮ್ಸ್​​ನಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಇದೇ ಕಾರಣಕ್ಕೆ ಇಂದು ಕಿಮ್ಸ್​​ನ ಹೊಸ ಘಟಕದ ಉದ್ಘಾಟನೆಗೆ ಅವರು ಆಗಮಿಸಿದ್ದರು. ಅವರನ್ನು ಅಭಿಮಾನಿಗಳು ಖುಷಿಯಿಂದ ಸ್ವಾಗತಿಸಿದರು. ಅವರನ್ನು ನೋಡಲು ಜನ ಸಾಗರವೇ ನೆರೆದಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜೂ ಎನ್​​ಟಿಆರ್: ಬಂದಿದ್ದೇಕೆ? ಆಡಿದ ಮಾತುಗಳೇನು?

ಮಾರ್ಚ್ 8 ಮಹಿಳಾ ದಿನಾಚರಣೆ ಆಗಿತ್ತು. ಹೀಗಾಗಿ ಆ ಬಗ್ಗೆ ಅವರು ಮಾತನಾಡಿದರು. ‘ಮಹಿಳೆಯರನ್ನು ಹೇಗೆ ಗೌರವಿಸಬೇಕು ಎಂದು ಪದೇ ಪದೇ ಹೇಳುವುದು ತನಗೆ ಇಷ್ಟವಿಲ್ಲ. ಪ್ರತಿಯೊಬ್ಬ ಪುರುಷನೂ ಆ ಸಂಸ್ಕೃತಿಯೊಂದಿಗೆ ಹುಟ್ಟಬೇಕು’ ಎಂದರು. ಅಲ್ಲದೆ, ತಮ್ಮ ಮಕ್ಕಳಿಗೂ ಮಹಿಳೆಯರನ್ನು ಗೌರವಿಸುವುದನ್ನು ಹೇಳಿಕೊಡೋದಾಗಿ ಹೇಳಿದರು. ಸಿನಿಮಾ ಮಾತ್ರವಲ್ಲದೆ ಹೊರಗೆಯೂ ತುಂಬಾ ಸಾಧಾರಣವಾಗಿ ವರ್ತಿಸುವ ಎನ್​​​​ಟಿಆರ್, ಮಹಿಳೆಯರ ಸುರಕ್ಷತೆ ಮತ್ತು ಗೌರವದ ಬಗ್ಗೆ ತುಂಬಾ ಚೆನ್ನಾಗಿ ಮಾತನಾಡಿದ್ದಕ್ಕಾಗಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅವರು ತಮ್ಮ ಅಭಿಮಾನಿಗಳ ಬಗ್ಗೆಯೂ ಮಾತನಾಡಿದರು ಮತ್ತು ಮನೆಗೆ ಎಚ್ಚರಿಕೆಯಿಂದ ಹೋಗುವಂತೆ ಸಲಹೆ ನೀಡಿದರು.

 

View this post on Instagram

 

A post shared by H A R I (@harii_postings)

ಜೂನಿಯರ್ ಎನ್​​ಟಿಆರ್ ಅವರು ಮಾತು ಆರಂಭಿಸುವಾಗ ಫ್ಯಾನ್ಸ್ ಅವರ ಹೆಸರನ್ನು ಕೂಗಿದರು.. ಆಗ ಫ್ಯಾನ್ಸ್ ಜೂನಿಯರ್ ಎನ್​​ಟಿಆರ್ ಅವರಿಗೆ ಮಾತನಾಡಲು ಅವಕಾಶ ನೀಡಿಲ್ಲ. ಸುಮ್ಮನಿರಿ, ಸುಮ್ಮನಿರಿ ಎಂದು ಖಡಕ್ ಎಚ್ಚರಿಕೆ ನೀಡಿದ ಬಳಿಕ ಫ್ಯಾನ್ಸ್ ಸುಮ್ಮನಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *