ನಿಯಂತ್ರಣ ತಪ್ಪಿ ಮೈ ಮೇಲೆ ಹರಿದ ರಥ; ಮಹಿಳೆಯ ಎರಡೂ ಕಾಲು ಕಟ್!

ನಿಯಂತ್ರಣ ತಪ್ಪಿ ಮೈ ಮೇಲೆ ಹರಿದ ರಥ; ಮಹಿಳೆಯ ಎರಡೂ ಕಾಲು ಕಟ್!

ಕಲಬುರಗಿ, ಮಾರ್ಚ್​ 09: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ (Kalaburagi) ಗ್ರಾಮದಲ್ಲಿ ನಡೆದ ಶರಣಬಸವೇಶ್ವರ ಜಾತ್ರೆಯ ರಥೋತ್ಸವ ವೇಳೆ ದುರ್ಘಟನೆ ಸಂಭವಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ನಿವಾಸಿಯಾದ ನಾಗಮ್ಮ ಎಂಬ ಮಹಿಳೆ ರಥದ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಅವರ ಎರಡೂ ಕಾಲುಗಳು ಕಡಿದು ಹೋಗಿವೆ ಎಂದು ತಿಳಿದುಬಂದಿದೆ.

ಮಹಿಳೆಯ ಸ್ಥಿತಿ ಗಂಭೀರ

ಅರಳಗುಂಡಗಿ ಗ್ರಾಮವು ಶರಣಬಸವೇಶ್ವರರ ಜನ್ಮಸ್ಥಳವಾಗಿರುವ ಹಿನ್ನೆಲೆಯಲ್ಲಿ ಪ್ರತಿವರ್ಷವೂ ಇಲ್ಲಿ ಜಾತ್ರೆಯನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ. ನಿನ್ನೆ (ಮಾರ್ಚ್​ 08) ಸಂಜೆ ಸುಮಾರು 6 ಗಂಟೆಗೆ ಜಾತ್ರೆಯ ಅಂಗವಾಗಿ ಶರಣಬಸವೇಶ್ವರ ರಥೋತ್ಸವ ಆರಂಭವಾಗಿತ್ತು. ಈ ವೇಳೆ ಗ್ರಾಮಸ್ಥರು ಉತ್ಸಾಹದಿಂದ ರಥವನ್ನು ಎಳೆಯಲು ಮುಂದಾಗಿದ್ದರು. ಜನಸಮೂಹ ಹೆಚ್ಚಾಗಿದ್ದ ಕಾರಣ ನಿಯಂತ್ರಣ ತಪ್ಪಿದ ರಥ ಜನರು ನಿಂತಿದ್ದ ದಿಕ್ಕಿಗೆ ಚಲಿಸಿದೆ.

ಇದನ್ನೂ ಓದಿ ಬೆಂಗಳೂರಿನ ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್! ಪೊಲೀಸರ 7 ವಿಶೇಷ ತಂಡಗಳಿಂದ ಆರೋಪಿಗಳಿಗೆ ಬಲೆ

ಈ ಸಂದರ್ಭದಲ್ಲಿ ರಥದ ಸಮೀಪದಲ್ಲಿದ್ದ ನಾಗಮ್ಮ ಎಂಬ ಮಹಿಳೆ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ರಥದ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಪರಿಣಾಮವಾಗಿ ರಥದ ಚಕ್ರವು ಅವರ ಕಾಲಿನ ಮೇಲೆ ಹರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದ ಜನರು ತಕ್ಷಣವೇ ಅವರನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ನಾಗಮ್ಮಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರು ಗಮನ ಹರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

Leave a Reply

Your email address will not be published. Required fields are marked *