ಸಾಯಿ ಪಲ್ಲವಿ ಕೈತಪ್ಪಿದ ಮಧುಬಾಲಾ ಬಯೋಪಿಕ್ ಅವಕಾಶ: ಕಾರಣ ಏನು?

ಸಾಯಿ ಪಲ್ಲವಿ ಕೈತಪ್ಪಿದ ಮಧುಬಾಲಾ ಬಯೋಪಿಕ್ ಅವಕಾಶ: ಕಾರಣ ಏನು?

ಭಾರತೀಯ ಚಿತ್ರರಂಗದ ಪ್ರತಿಭಾವಂತ ನಟಿ, ದಿವಂಗತ ಮಧುಬಾಲಾ ಅವರ ಬಯೋಪಿಕ್ (Madhubala Biopic) ಬಗ್ಗೆ ಬಿಟೌನ್‌ನಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಈ ಚಿತ್ರದಲ್ಲಿ ಮಧುಬಾಲಾ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಅನೇಕ ನಟಿಯರ ಹೆಸರು ಕೇಳಿಬರುತ್ತಿದೆ. ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ (Sai Pallavi) ಅವರನ್ನು ಈ ಪಾತ್ರಕ್ಕೆ ಆಯ್ಕೆ ಮಾಡುವ ಆಲೋಚನೆ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರಿಗೆ ಇತ್ತು ಎನ್ನಲಾಗಿದೆ.

ವರದಿಗಳ ಪ್ರಕಾರ, ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರು ಮಧುಬಾಲಾ ಪಾತ್ರಕ್ಕೆ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಲು ತೀವ್ರ ಆಸಕ್ತಿ ಹೊಂದಿದ್ದರು. ಬಾಲಿವುಡ್‌ಗೆ ಸಾಯಿ ಪಲ್ಲವಿ ಹೊಸ ಮುಖವಾಗಿರುವುದರಿಂದ, ಮಧುಬಾಲಾ ಅವರಂತಹ ಐತಿಹಾಸಿಕ ಪಾತ್ರಕ್ಕೆ ಅವರು ಹೊಸ ಕಳೆ ನೀಡಬಲ್ಲರು ಎಂದು ಬನ್ಸಾಲಿ ಭಾವಿಸಿದ್ದರು. ಆದರೆ, ಮಾತುಕತೆಗಳು ಅಂದುಕೊಂಡಂತೆ ನಡೆಯಲಿಲ್ಲ. ಮೂಲಗಳ ಪ್ರಕಾರ, ಕಾಲ್‌ಶೀಟ್ ಸಮಸ್ಯೆಯಿಂದಾಗಿ ಸಾಯಿ ಪಲ್ಲವಿ ಈ ಬಹುದೊಡ್ಡ ಅವಕಾಶದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಮಧುಬಾಲಾ ಬಯೋಪಿಕ್ ಕೈತಪ್ಪಿದರೂ, ಸಾಯಿ ಪಲ್ಲವಿ ಬಾಲಿವುಡ್‌ಗೆ ಭರ್ಜರಿಯಾಗಿಯೇ ಎಂಟ್ರಿ ಕೊಡುತ್ತಿದ್ದಾರೆ. ಆಮಿರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ‘ಏಕ್ ದಿನ್’ ಚಿತ್ರದ ಮೂಲಕ ಸಾಯಿ ಪಲ್ಲವಿ ಅವರು ಹಿಂದಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸುನಿಲ್ ಪಾಂಡೆ ನಿರ್ದೇಶನದ ಈ ರೊಮ್ಯಾಂಟಿಕ್ ಸಿನಿಮಾ ಮೇ 1ರಂದು ಬಿಡುಗಡೆ ಆಗಲಿದೆ.

ಇಷ್ಟೇ ಅಲ್ಲದೆ, ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ ಪಾರ್ಟ್ 1’ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರು ಸೀತೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಣಬೀರ್ ಕಪೂರ್ ರಾಮನಾಗಿ ನಟಿಸುತ್ತಿರುವ ಈ ಬೃಹತ್ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ (ರಾವಣ), ಸನ್ನಿ ಡಿಯೋಲ್ (ಹನುಮಂತ) ಸೇರಿದಂತೆ ಭಾರತದ ದೊಡ್ಡ ತಾರಾಬಳಗವೇ ಇದೆ.

ಇದನ್ನೂ ಓದಿ: ರಣಬೀರ್, ಸಾಯಿ ಪಲ್ಲವಿ ‘ರಾಮಾಯಣ’ ಫೋಟೋ ಫೇಕ್; ಅಸಲಿ ವಿಷಯ ಬಿಚ್ಚಿಟ್ಟ ನಟ

ಮಧುಬಾಲಾ ಪಾತ್ರದಲ್ಲಿ ಸಾಯಿ ಪಲ್ಲವಿ ಅವರನ್ನು ನೋಡಲಾಗದಿದ್ದರೂ, ಸೀತೆಯ ಪಾತ್ರದಲ್ಲಿ ಅವರ ನಟನೆಯನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಈಗಾಗಲೇ ಮೋಡಿ ಮಾಡಿರುವ ಅವರಿಗೆ ಬಾಲಿವುಡ್ ಪ್ರೇಕ್ಷಕರು ಯಾವ ರೀತಿ ಸ್ವಾಗತ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *