
ಬಾಗಲಕೋಟೆ, ಮಾರ್ಚ್ 16: ಉಪ ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ಬಾಗಲಕೋಟೆ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ನಡುವೆ ಫೈಟ್ ಜೋರಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಲಾಭಿ ಶುರುವಾಗಿದ್ದು, ಪ್ರಬಲ ಆಕಾಂಕ್ಷಿ ವೀರಣ್ಣ ಹಳೆಗೌಡರ ಪತ್ರ ಕೂಡ ಬರೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್, ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಪ್ರಮುಖರಿಗೆ ಟಿಕೆಟ್ಗಾಗಿ ಮನವಿ ಮಾಡಿದ್ದಾರೆ. ನಾನು ಹಿಂದುಳಿದ ವರ್ಗಕ್ಕೆ ಸೇರಿದ ವ್ಯಕ್ತಿಯಾಗಿದ್ದು, ಬಾಗಲಕೋಟೆಯಲ್ಲಿ 25 ವರ್ಷಗಳಿಂದ ಒಂದು ಸಾರಿಯೂ ಈ ವರ್ಗಕ್ಕೆ ಅವಕಾಶ ಕೊಟ್ಟಿಲ್ಲ. ಎದುರಾಳಿ ಅಭ್ಯರ್ಥಿ ಕೂಡ ಕುರುಬ ಸಮುದಾಯದವರೇ ಆಗುವುದು ಬಹುತೇಕ ಫಿಕ್ಸ್ ಆಗಿದೆ. ಕುರುಬ ಸಮುದಾಯದ ಪರವಾಗಿ ಸಾಕಷ್ಟು ಹೋರಾಟಗಳನ್ನು ಮಾಡಿರುವ ನಾನು, 2017ರಲ್ಲಿ ಇದೇ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ವಾಗ್ವಾದ ಮಾಡಿ ಜೈಲಿಗೆ ಕೂಡ ಹೋಗಿ ಬಂದಿದ್ದೇನೆ. ನನ್ನಂತ ಒಬ್ಬ ಕಾರ್ಯಕರ್ತನಿಗೆ ಅವಕಾಶ ಒದಗಿಸಿ ಕೊಟ್ಟರೆ ನೂರಕ್ಕೆ ನೂರರಷ್ಟು ಒಳ್ಳೆಯದಾಗುತ್ತದೆ ಎಂದು ಆತ್ಮವಿಶ್ವಾಸವಿರೋದಾಗಿ ಟಿವಿ9ಗೆ ಅವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.