
ಈ ದಿನ ದಕ್ಷಿಣಾಮೂರ್ತಿ ಸ್ತೋತ್ರವನ್ನು ಪಠಿಸಿ. ಜ್ಞಾನ ಮತ್ತು ವೃತ್ತಿ ಏಳಿಗೆಗಾಗಿ ಗುರು ದಕ್ಷಿಣಾಮೂರ್ತಿಯನ್ನು ಪ್ರಾರ್ಥನೆಯಿಂದ ಅನುಕೂಲ ಆಗುತ್ತದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):
ಯಾವುದೇ ಪ್ರಯತ್ನದಲ್ಲಿ ಗೆಲುವು ಕಾಣಲಿದ್ದೀರಿ. ಅಚಾನಕ್ ಸಿಗುವಂತಹ ಹಳೆಯ ಸ್ನೇಹಿತರು ಹೇಳುವ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿ. ಅವರೇನಾದರೂ ವ್ಯಾಪಾರ ಅಥವಾ ವೃತ್ತಿಗೆ ಸಂಬಂಧಿಸಿದ ಯಾವುದಾದರೂ ಅವಕಾಶಗಳ ಬಗ್ಗೆ ತಿಳಿಸಿದಲ್ಲಿ ಆ ಬಗ್ಗೆ ಕೂಡಲೇ ಸ್ಪಂದಿಸಿ. ಯಾವುದೇ ಕಾರಣಕ್ಕೂ ಆಮೇಲೆ ಮಾಡಿದರಾಯಿತು, ನೋಡಿದರಾಯಿತು ಎಂಬ ಧೋರಣೆಯನ್ನು ತೋರಿಸಬೇಡಿ.
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):
ನೀವು ಈ ದಿನ ಇತರರ ಹಣಕಾಸಿನ ವ್ಯವಹಾರಗಳನ್ನು ನೋಡಿಕೊಳ್ಳುತ್ತೀರಿ ಅಥವಾ ಅವರ ಪರವಾಗಿ ಮಾತುಕತೆಯನ್ನು ಮಾಡುತ್ತೀರಿ ಎಂದಾದಲ್ಲಿ ಯಶಸ್ಸು ಕಾಣುವ ಸಾಧ್ಯತೆಗಳು ಬಹಳ ಹೆಚ್ಚಿದೆ. ನಿಮ್ಮ ಪ್ರಭಾ ವಲಯ ವಿಸ್ತರಣೆ ಆಗಲಿದೆ. ಮಕ್ಕಳ ಸಲುವಾಗಿ ವಾಹನಗಳನ್ನು ಖರೀದಿ ಮಾಡುವಂಥ ಯೋಗ ಇದೆ. ಇನ್ನು ಅವರ ಸಲುವಾಗಿ ಪ್ರವಾಸಗಳ ಯೋಜನೆಯನ್ನು ರೂಪಿಸಲಿದ್ದೀರಿ.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):
ನಿಮ್ಮಲ್ಲಿ ಕೆಲವರು ಬಸ್, ರೈಲು, ವಿಮಾನದಲ್ಲಿ ಸೀಟ್ ಇಂಥದ್ದನ್ನು ಬುಕ್ ಮಾಡಬಹುದು ಅಥವಾ ಪ್ಯಾಕೇಜ್ ಪ್ರವಾಸಗಳನ್ನು ಸಹ ಬುಕ್ ಮಾಡುವಂಥ ಸಾಧ್ಯತೆಗಳು ಈ ದಿನ ಇದೆ. ಸಂಗಾತಿಯ ಕಡೆ ಸಂಬಂಧಿಕರು ಸಹಾಯ ಕೇಳಿಕೊಂಡು ಬರಬಹುದು. ನಿಮ್ಮಲ್ಲಿ ಕೆಲವರು ಈಗ ಮಾಡುತ್ತಿರುವ ಉದ್ಯೋಗ, ವೃತ್ತಿ ಅಥವಾ ವ್ಯಾಪಾರದ ಜತೆಗೆ ಇನ್ನೊಂದು ವ್ಯವಹಾರ ಮಾಡುವ ಬಗ್ಗೆ ಆಲೋಚನೆ ಮಾಡಲಿದ್ದೀರಿ.
ಲೇಖನ- ಸ್ವಾತಿ ಎನ್.ಕೆ.