ಇಫ್ತಾರ್​​ಕೂಟದಲ್ಲಿ ಭಾಗಿ ಆದ ದಳಪತಿ ವಿಜಯ್; ವಿವಾದದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ

ಇಫ್ತಾರ್​​ಕೂಟದಲ್ಲಿ ಭಾಗಿ ಆದ ದಳಪತಿ ವಿಜಯ್; ವಿವಾದದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ

ಕಳೆದ ವರ್ಷ ರಂಜಾನ್ ಸಂದರ್ಭದಲ್ಲಿ ದಳಪತಿ ವಿಜಯ್ ಅವರು ಇಫ್ತಾರ್ ಕೂಟದಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರ ವಿರುದ್ಧ ದೂರು ದಾಖಲಾಗಿತ್ತು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಬಾರಿಯೂ ವಿಜಯ್ ಅವರು ಇಫ್ತಾರ್ ಕೂಟದಲ್ಲಿ ಭಾಗಿ ಆಗಿದ್ದಾರೆ. ಆದರೆ, ವಿವಾದಿಂದ ದೂರ ಇರಲು ಅವರು ಕೆಲ ತಂತ್ರಗಳನ್ನು ಬಳಸಿದ್ದಾರೆ.

ಮಮಲ್ಲಪುರಂನಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿತ್ತು. ಹೋಟೆಲ್ ಒಂದರಲ್ಲಿ ಬುಧವಾರ ಸಂಜೆ ಆರು ಗಂಟೆಯಿಂದ 9 ಗಂಟೆವರೆಗೆ ಈ ಕಾರ್ಯಕ್ರಮ ನೆರವೇರಿತ್ತು. ಈ ಕೂಟದಲ್ಲಿ ಕೇವಲ ಆಮಂತ್ರಣ ನೀಡಿದವರು ಮಾತ್ರ ಭಾಗಿ ಆಗಲು ಅವಕಾಶ ಇತ್ತು. ತಮಿಳುನಾಡಿನಾದ್ಯಂತದಿಂದ 1 ಸಾವಿರ ಜನರಿಗೆ ಮಾತ್ರ ಆಮಂತ್ರಣಕೊಡಲಾಗಿತ್ತು. ಆಮಂತ್ರಣ ಇಲ್ಲದೆ ಬರುವವರಿಗೆ ಆಹ್ವಾನ ಇಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಲಾಗಿತ್ತು.

ಚುನಾವಣಾ ಸಮಯ ಮತ್ತು ಈಗ ಜಾರಿಯಲ್ಲಿರುವ ನೀತಿ ಸಂಹಿತೆಯನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗದ ಪೂರ್ವಾನುಮತಿ ಪಡೆದು ಈ ಸಭೆಯನ್ನು ಆಯೋಜಿಸಲಾಗಿದೆ ಎಂದು ಟಿವಿಕೆ ಸ್ಪಷ್ಟಪಡಿಸಿದೆ. ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ವಿಜಯ್ ಅವರ ಪ್ರಚಾರ ಸಭೆಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಹೀಗಾಗಿ, ಯಾವುದೇ ವಿವಾದ ಆದರೂ ಅದು ಅವರಿಗೆ ಹಿನ್ನಡೆ ತರುತ್ತದೆ. ಅದರಿಂದ ತಪ್ಪಿಸಿಕೊಳ್ಳು ಅವರು ಮುಂಜಾಗೃತ ಕ್ರಮ ಕೈಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಇಫ್ತಾರ್ ಕೂಟದಲ್ಲಿ ಭಾಗಿಯಾದ ದಳಪತಿ ವಿಜಯ್: ವಿಡಿಯೋ

ಕಳೆದ ವರ್ಷ ಆಯೋಜನೆ ಮಾಡಿದ ಇಫ್ತಾರ್ ಕೂಟ ವಿವಾದದಲ್ಲಿ ಅಂತ್ಯವಾಯ್ತು. ವಿಜಯ್ ಅವರು ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂತು. ಇದರಿಂದ ವಿಜಯ್ ಪಾಠಗಳನ್ನು ಕಲಿತಂತೆ ಕಾಣುತ್ತದೆ. 2025ರ ಇಫ್ತಾರ್ ಕೂಟಕ್ಕೂ ಮೊದಲು ವಿಜಯ್ ದಿನವಿಡೀ ಉಪವಾಸ ಮಾಡಿದ್ದರು. ಉಪವಾಸ ಪೂರ್ಣಗೊಳಿಸುವ ಮೊದಲು ಪ್ರಾರ್ಥನೆ ಸಲ್ಲಿಸುವುದನ್ನು ತೋರಿಸಿದ್ದಕ್ಕಾಗಿ ವ್ಯಾಪಕವಾಗಿ ಪ್ರಶಂಸಿಸಲ್ಪಟ್ಟಿದ್ದರೂ, ತಮಿಳುನಾಡು ಸುನ್ನತ್ ಜಮಾತ್ ಚೆನ್ನೈ ಪೊಲೀಸ್ ಆಯುಕ್ತರಿಗೆ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಿಸಲಾಗಿಲ್ಲ, ಪಾವಿತ್ರ್ಯವನ್ನು ಅಗೌರವಿಸಿದೆ ಎಂದು ಆರೋಪಿಸಿ ದೂರು ನೀಡಿದರು. ನಂತರ ಉತ್ತರ ಪ್ರದೇಶದ ಬರೇಲಿಯಲ್ಲಿರುವ ಸುನ್ನಿ ಮುಸ್ಲಿಂ ಸಂಸ್ಥೆಯು ವಿಜಯ್ ಅವರ ವಿರುದ್ಧ ಫತ್ವಾ ಹೊರಡಿಸಿತು. ಆ ಸಮಯದಲ್ಲಿ ವಿಜಯ್ ಯಾವುದಕ್ಕೂ ಸಾರ್ವಜನಿಕವಾಗಿ ಪ್ರತಿಕ್ರಿಯಿಸಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *