ಪೆಟ್ರೋಲ್, ಡೀಸೆಲ್ ಖಾಲಿ ವದಂತಿ: ಚಾಮರಾಜನಗರ, ಕೊಳ್ಳೇಗಾಲದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ವಾಹನ ಸವಾರರು

ಪೆಟ್ರೋಲ್, ಡೀಸೆಲ್ ಖಾಲಿ ವದಂತಿ: ಚಾಮರಾಜನಗರ, ಕೊಳ್ಳೇಗಾಲದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ವಾಹನ ಸವಾರರು

ಚಾಮರಾಜನಗರ, ಮಾರ್ಚ್ 21: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದ ಆತಂಕ ನಡುವೆ ಚಾಮರಾಜನಗರ ಜಿಲ್ಲೆಯಲ್ಲಿ ಪೆಟ್ರೋಲ್ ಕೊರತೆ ವದಂತಿ ಭಾರೀ ಗೊಂದಲಕ್ಕೆ ಕಾರಣವಾಗಿದೆ. ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ಪಟ್ಟಣಗಳಲ್ಲಿ ಪೆಟ್ರೋಲ್ ಸಿಗುವುದಿಲ್ಲ ಎಂಬ ವದಂತಿ ಹಬ್ಬಿದ್ದು, ವಾಹನ ಸವಾರರು ಏಕಾಏಕಿ ಪೆಟ್ರೋಲ್ ಬಂಕ್‌ಗಳತ್ತ ಮುಗಿಬಿದ್ದರು. ಇದರಿಂದ ಹಲವು ಬಂಕ್‌ಗಳಲ್ಲಿ ಉದ್ದ ಸಾಲುಗಳು ಕಂಡುಬಂದವು. ಗ್ಯಾಸ್ ಕೊರತೆಯಂತೆಯೇ ಪೆಟ್ರೋಲ್ ಹಾಗೂ ಡೀಸೆಲ್‌ಗೂ ಸಮಸ್ಯೆ ಉಂಟಾಗಬಹುದು ಎಂಬ ಭಯ ಜನರಲ್ಲಿ ಹೆಚ್ಚಾಗಿದ್ದು, ಮುಂಜಾಗ್ರತೆಯಾಗಿ ಹೆಚ್ಚಿನ ಪ್ರಮಾಣದಲ್ಲಿ ಇಂಧನ ಖರೀದಿಸಲು ಜನರು ಹರಸಾಹಸ ಪಟ್ಟರು. ಕೆಲವು ಕಡೆಗಳಲ್ಲಿ ವಾಹನಗಳ ದೀರ್ಘ ಸಾಲುಗಳು ಟ್ರಾಫಿಕ್ ಸಮಸ್ಯೆಯನ್ನೂ ಉಂಟುಮಾಡಿದವು.

ಬಂಕ್ ಸಿಬ್ಬಂದಿ, ‘ಪೆಟ್ರೋಲ್ ಹಾಗೂ ಡೀಸೆಲ್ ಸಾಕಷ್ಟು ಲಭ್ಯವಿದೆ, ಯಾವುದೇ ಕೊರತೆ ಇಲ್ಲ’ ಎಂದು ಸ್ಪಷ್ಟಪಡಿಸಿದ್ದರೂ, ಜನರು ಅದನ್ನು ನಂಬದೇ ಖರೀದಿಸಲು ಮುಂದಾದರು. ಇದರಿಂದ ಕೆಲ ಸಮಯ ತಾತ್ಕಾಲಿಕ ಗೊಂದಲದ ಪರಿಸ್ಥಿತಿ ನಿರ್ಮಾಣವಾಯಿತು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *