
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 23, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಂಚಮಿ, ಕೃತಿಕಾ ನಕ್ಷತ್ರ, ವಿಷ್ಕಂಭ ಯೋಗ, ಭವಕರಣೆ ಇರತಕ್ಕಂತ ಈ ದಿನದ ರಾಹುಕಾಲವು ಬೆಳಗ್ಗೆ 7:52 ರಿಂದ 9:23 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲವು ಬೆಳಗ್ಗೆ 9:24 ರಿಂದ 10:55 ರವರೆಗೆ ಇದೆ.
ಇಂದು ದೇವರ ದಾಸಿಮಯ್ಯ ಜಯಂತಿ ಹಾಗೂ ವಿಶ್ವ ಹವಾಮಾನ ದಿನ. ದಾವಣಗೆರೆಯಲ್ಲಿ ಬಕ್ಕೇಶ್ವರ ಸ್ವಾಮಿಗಳ ಜಯಂತ್ಯೋತ್ಸವ, ಎಂ. ಗೋವಿಂದಪ್ಪಯ್ಯ ಅವರ ಜನ್ಮದಿನ ಹಾಗೂ ಮುಳುಬಾಗಿಲಿನಲ್ಲಿ ತ್ರಿಪುರಸುಂದರಿ ಜಾತ್ರಾ ಮಹೋತ್ಸವ ನಡೆಯಲಿದೆ. ಸೂರ್ಯನು ಮೀನ ರಾಶಿಯಲ್ಲಿ ಮತ್ತು ಚಂದ್ರನು ವೃಷಭ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರ ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ, ಕೌಟುಂಬಿಕ ಸಂಬಂಧಗಳು, ಅದೃಷ್ಟ ಬಣ್ಣ, ಅದೃಷ್ಟ ಸಂಖ್ಯೆ, ಶುಭ ದಿಕ್ಕು ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದ್ದಾರೆ.