ಕಾಂಗ್ರೆಸ್​ಗೆ ಹೊಸ ಸಂಕಷ್ಟ, ದೆಹಲಿಯ ಪ್ರಧಾನ ಕಚೇರಿಯನ್ನು ಖಾಲಿ ಮಾಡುವಂತೆ ನೋಟಿಸ್

ಕಾಂಗ್ರೆಸ್​ಗೆ ಹೊಸ ಸಂಕಷ್ಟ, ದೆಹಲಿಯ ಪ್ರಧಾನ ಕಚೇರಿಯನ್ನು ಖಾಲಿ ಮಾಡುವಂತೆ ನೋಟಿಸ್

ನವದೆಹಲಿ, ಮಾರ್ಚ್​ 25: ಕಾಂಗ್ರೆಸ್​​(Congress)ಗೆ ಹೊಸ ಸಂಕಷ್ಟ ಎದುರಾಗಿದೆ. ದೆಹಲಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯನ್ನು ಖಾಲಿ ಮಾಡುವಂತೆ ನೋಟಿಸ್ ಜಾರಿಮಾಡಲಾಗಿದೆ. ಖಾಲಿ ಮಾಡಲು ಮಾರ್ಚ್​ 28ರವರೆಗೆ ಅವಕಾಶ ನೀಡಲಾಗಿದೆ. ಪಕ್ಷವು ತನ್ನ ಕಾರ್ಯಾಚರಣೆಯನ್ನು ಈಗಾಗಲೇ ಐಟಿಒ ಬಳಿಯ ಇಂದಿರಾ ಭವನದಲ್ಲಿರುವ ತನ್ನ ಹೊಸ ಪ್ರಧಾನ ಕಚೇರಿಗೆ ಸ್ಥಳಾಂತರಿಸಿದ್ದರೂ ಸಹ,  ಪ್ರಮುಖ ನಿರ್ಧಾರಗಳನ್ನು ಅಲ್ಲಿಂದಲೇ ತೆಗೆದುಕೊಳ್ಳಲಾಗುತ್ತಿತ್ತು.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಮತ್ತು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಈ ಕ್ರಮವನ್ನು ಟೀಕಿಸಿ, ಇದನ್ನು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಕರೆದಿದ್ದಾರೆ ಮತ್ತು ಪಕ್ಷವು ಲಭ್ಯವಿರುವ ಎಲ್ಲಾ ನಿಯಮಗಳನ್ನು ಅನುಸರಿಸುತ್ತದೆ ಎಂದಿದ್ದಾರೆ.

ಸುಮಾರು 48 ವರ್ಷಗಳ ಕಾಲ ಕಾಂಗ್ರೆಸ್‌ನ ಕೇಂದ್ರ ಪ್ರಧಾನ ಕಚೇರಿಯಾಗಿ ಕಾರ್ಯನಿರ್ವಹಿಸಿತ್ತು. ಪಕ್ಷವು ಕಳೆದ ವರ್ಷ ತನ್ನ ಹೊಸ ಪ್ರಧಾನ ಕಚೇರಿಯಾದ ಇಂದಿರಾ ಭವನಕ್ಕೆ ಸ್ಥಳಾಂತರಗೊಂಡರೂ, ಪಕ್ಷದ ಚಟುವಟಿಕೆಗಳು ಹಳೆಯ ಕಚೇರಿಯಲ್ಲಿಯೇ ಮುಂದುವರೆದಿತ್ತು.

ಮತ್ತಷ್ಟು ಓದಿ: ಕಾಂಗ್ರೆಸ್ ಮುಖಂಡನ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಈ ನೋಟಿಸ್ ಬಗ್ಗೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಇದು ಪ್ರಜಾಪ್ರಭುತ್ವ ಸರ್ಕಾರವಲ್ಲ. ಇದು ದುರದೃಷ್ಟಕರ. ನಾವು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಹೇಳಿದ್ದಾರೆ.

ಬುಧವಾರ ಹೊರಡಿಸಲಾದ ನೋಟಿಸ್‌ನಲ್ಲಿ, ಎಸ್ಟೇಟ್ ಇಲಾಖೆಯು 24 ಅಕ್ಬರ್ ರಸ್ತೆಯ ಜೊತೆಗೆ, 5 ರೈಸಿನಾ ರಸ್ತೆಯಲ್ಲಿರುವ ಭಾರತೀಯ ಯುವ ಕಾಂಗ್ರೆಸ್ ಕಚೇರಿಯನ್ನು ಸಹ ಮಾರ್ಚ್ 28 ರೊಳಗೆ ಖಾಲಿ ಮಾಡಬೇಕು ಎಂದು ಸ್ಪಷ್ಟವಾಗಿ ತಿಳಿಸಿದೆ. ಈ ಬಂಗಲೆಯನ್ನು ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ಹಂಚಿಕೆ ಮಾಡಲಾಗಿದ್ದು, ಅದರ ಅಂಗಸಂಸ್ಥೆ ಘಟಕವು ಅದನ್ನು ಬಳಸುತ್ತಿದೆ ಎಂದು ವರದಿಯಾಗಿದೆ.

ಕಾಂಗ್ರೆಸ್ ನಾಯಕ ಪವನ್ ಖೇರಾ ಮಾತನಾಡಿ, ಅಕ್ಬರ್ ರಸ್ತೆ ಕಚೇರಿ ಮತ್ತು ಯುವ ಕಾಂಗ್ರೆಸ್ ಕಚೇರಿಗೆ ನೋಟಿಸ್ ಬಂದಿದೆ. ಈಗ ದೇಶದ ಆದ್ಯತೆ ಏನು ಎಂಬ ಪ್ರಶ್ನೆ ಮೂಡಿದೆ. ಎಲ್​ಪಿಜಿಯನ್ನು ಯಾವುದೇ ಅಡೆತಡೆ ಇಲ್ಲದೆ ದೇಶಕ್ಕೆ ತರುವುದು, ಕಾಳಸಂತೆಯಲ್ಲಿ ಮಾರಾಟವಾಗದಂತೆ ನೋಡಿಕೊಳ್ಳುವ ಅಗತ್ಯವಿದೆ. ಗರಂ ಮಸಾಲ, ಬಾಳೆಹಣ್ಣು, ದ್ರಾಕ್ಷಿ, ಅರಿಶಿನ, ಬಾಸ್ಮರಿ ಅಕ್ಕಿ ಎಲ್ಲವೂ ಈಗ ಸಿಲುಕಿಕೊಂಡಿದೆ. ಇದು ನಮ್ಮ ದೇಶದ ಆದ್ಯತೆಯಾಗಬೇಕು ಎಂದರು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *