
ಬೆಂಗಳೂರು, (ಮಾರ್ಚ್ 25): ರಾಜ್ಯ ಸರ್ಕಾರದ ಅವಧಿ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ವಿಧಾನಸೌಧದಲ್ಲಿ ಶಾಸಕರ ಫೋಟೋ ಶೂಟ್ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಅನಿರೀಕ್ಷಿತ ಬೆಳವಣಿಗೆಯು ಸಿಎಂ ಬದಲಾವಣೆ, ಸ್ಪೀಕರ್ ಬದಲಾವಣೆ ಅಥವಾ ಸಂಪುಟ ಪುನರ್ರಚನೆಯ ಮುನ್ಸೂಚನೆಯೇ ಎಂಬ ಗೊಂದಲ ಮತ್ತು ಅನುಮಾನಗಳನ್ನು ಶಾಸಕರಲ್ಲಿ ಹುಟ್ಟುಹಾಕಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ವಿಜಯನಂದ ಕಾಶಪ್ಪನವರ್ ಪ್ರತಿಕ್ರಿಯಿಸಿದ್ದು, ಸಂಪುಟ ಪುನರ್ ರಚನೆಯಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.