
ಕೋಲಾರ, ಮಾರ್ಚ್ 27: ನಗರದಲ್ಲಿ ಶ್ರೀರಾಮನವಮಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿದ್ದರು. ಎಂ.ಜಿ.ರಸ್ತೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಆಯೋಜಿಸಿದ್ದ 10ನೇ ವರ್ಷದ ರಾಮೋತ್ಸವ ಸಮಾರಂಭ ಇದಾಗಿತ್ತು. ಈ ಸಂದರ್ಭದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆಗೆ ಯತ್ನಾಳ್ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂಸದ ಮಲ್ಲೇಶ್ ಬಾಬು, ಮಾಜಿ ಸಂಸದ ಮುನಿಸ್ವಾಮಿ, ನಾಗಲಾಪುರ ಮಠದ ತೇಜೇಶಲಿಂಗ ಶಿವಚಾರ್ಯ ಸ್ವಾಮಿಜಿ, ಶ್ರೀರಾಮಸೇನೆಯ ಶ್ರೀನಿವಾಸ್ ಗುರೂಜಿ ಸೇರಿದಂತೆ ಹಲರು ಉಪಸ್ಥಿತರಿದ್ದರು. ವಿಜಯಪುರ ಶಾಸಕರನ್ನು ನೋಡಲು ಜನಸಾಗರವೇ ಕಾರ್ಯಕ್ರಮಕ್ಕೆ ಹರಿದುಬಂದಿತ್ತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.