ಗಡಿ ಜಿಲ್ಲೆ ಚಾಮರಾಜನಗರದ ರೈತರಿಗೆ ಕಾಡಾನೆ ಕಾಟ: ಬೆಳೆದ ಬೆಳೆ ಕೈಸೇರುವ ಮುನ್ನವೇ ಸರ್ವನಾಶ!

ಗಡಿ ಜಿಲ್ಲೆ ಚಾಮರಾಜನಗರದ ರೈತರಿಗೆ ಕಾಡಾನೆ ಕಾಟ: ಬೆಳೆದ ಬೆಳೆ ಕೈಸೇರುವ ಮುನ್ನವೇ ಸರ್ವನಾಶ!

ಚಾಮರಾಜನಗರ, ಮಾರ್ಚ್​​ 30: ಮಾನವ ಕಾಡು ಪ್ರಾಣಿ ಸಂಘರ್ಷಕ್ಕೆ ಕುಖ್ಯಾತು ಪಡೆದ ಜಿಲ್ಲೆಗಳ ಪೈಕಿ ಚಾಮರಾಜನಗರದಲ್ಲಿ ಕಾಡಾನೆಗಳ ಉಪಟಳ ಮತ್ತೆ ಹೆಚ್ಚಾಗಿದೆ. ತಡರಾತ್ರಿ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿಗೆ ನುಗ್ಗಿ ಒಂಟಿ ಸಲಗ ದಾಂಧಲೆ ನಡೆಸಿದ್ದರೆ, ಮಂಚಹಳ್ಳಿ ಬಳಿ ಕಾಡಾನೆ ಹಿಂಡು ರೈತರು ಕಷ್ಟಪಟ್ಟು ಬೆಳೆದಿದ್ದ ಟೊಮ್ಯಾಟೋ ಬೆಳೆಯನ್ನು ಸರ್ವನಾಶ ಮಾಡಿವೆ. ಮಂಜುನಾಥ್ ಎಂಬುವವರ ಜಮೀನಿನಲ್ಲಿ ಕಟಾವು ಮಾಡಿ ಇಟ್ಟಿದ್ದ ಕ್ವಿಂಟಾಲ್​​ಗಟ್ಟಲೆ ಟೊಮ್ಯಾಟೋವನ್ನ ತಿಂದು ತೇಗಿ ಪರಾರಿಯಾಗಿವೆ. ಹೀಗಾಗಿ ಕತ್ತಲಾದರೆ ಸಾಕು ಮನೆಯಿಂದ ಹೊರಬರಲೂ ಈ ಭಾಗದ ಜನರು ಭಯಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಬಿಳಿಗಿರಿರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಸಿಬ್ಬಂದಿಗೆ ತಿಳಿಸಿದರೂ ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ಕಾಡಾನೆ ಉಪಟಳದಿಂದ ನಮಗೆ ಮುಕ್ತಿ ಕೊಡಿಸಿ ಎಂದು ಗ್ರಾಮಸ್ಥರ ಮನವಿ ಮಾಡಿದ್ದಾರೆ.

ಮತ್ತೊಂದೆಡೆ ದಿನ ನಿತ್ಯ ಕತ್ತಲಾದ್ರೆ ಸಾಕು ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮಕ್ಕೆ ನುಗ್ಗುವ ಒಂಟಿ ಸಲಗ ಪುಂಡಾಟ ಮೆರೆಯುತ್ತದೆ. ಸಿಕ್ಕ ಸಿಕ್ಕ ಕಡೆ ದಾಂಗುಡಿ ಇಡುವುದು ಸಾಲದು ಎಂದು ಜಮೀನಿನಲ್ಲಿ ಬೆಳೆದಿದ್ದ ಜೋಳ, ಕಬ್ಬುಗಳನ್ನ ತಿಂದು ನಾಶ ಪಡಿಸುತ್ತಿದೆ. ದೂರು ನೀಡಿದರೂ ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಂದಿಸದೇ ಇರೋದು ಒಂದೆಡೆಯಾದರೆ, ಬ್ಯಾರಿಕೇಡ್​​ಗಳನ್ನ ಹಾಕಿದರೂ ಅವು ಪ್ರಯೋಜನಕ್ಕೆ ಬರುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗ ಕೃಷಿಯನ್ನೇ ನಂಬಿ ಬದುಕುತ್ತಿರುವ ಸ್ಥಳೀಯರು, ಕನಿಷ್ಠ ಜಮೀನಿಗೆ ಹೋಗೋದಾದರೂ ಹೇಗೆ? ಬೆಳೆದ ಬೆಳೆಗೆ ನೀರುಣಿಸೋದು ಸಾಧ್ಯವಾ? ಎಂದು ರೈತರು ಅರಣ್ಯ ಇಲಾಖೆಯ ಸಿಬ್ಬಂದಿ ವಿರುದ್ದ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ಎದ್ದು ದಾಳಿ ಮಾಡಿದ ಹುಲಿ! ಆಮೇಲಾಗಿದ್ದೇ ಬೇರೆ

ರೈತರಿಂದ ಹೋರಾಟದ ಎಚ್ಚರಿಕೆ

ಕಾಡಾನೆಗಳೂ ಸೇರಿ ಕಾಡು ಪ್ರಾಣಿಗಳ ಉಪಟಳ ದಿನದಿಂದ ದಿನಕ್ಕೆ ಈ ಭಾಗದಲ್ಲಿ ಹೆಚ್ಚಾಗುತ್ತಿರುವ ಕಾರಣ ತುರ್ತಾಗಿ ಸಮಸ್ಯೆ ಬಗೆಹರಿಸದೇ ಇದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನೂ ರೈತರು ನೀಡಿದ್ದಾರೆ. ಸಾಲ ಮಾಡಿ ಬೆಳೆದ ಬೆಳೆ ತಮ್ಮ ಕೈಸೇರುವ ಮುನ್ನವೇ ಕಾಡು ಪ್ರಾಣಿಗಳ ಹಾವಳಿಯಿಂದ ನಷ್ಟವಾಗುತ್ತಿರುವ ಕಾರಣ ಅರಣ್ಯ ಇಳಾಖೆ ಶೀಘ್ರ ಈ ಬಗ್ಗೆ ಕ್ರಮ ಕೈಗೊಳ್ಳಲೇ ಬೇಕು ಎಂಬ ಒತ್ತಾಯವೂ ಸ್ಥಳೀಯರಿಂದ ಕೇಳಿಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *