ಪ್ರತ್ಯೇಕ ಘಟನೆ: ರಜೆ ತಂದ ಆಪತ್ತು; ಈಜಲು ತೆರಳಿದ್ದ ಐವರು ಬಾಲಕರು ನೀರುಪಾಲು

ಪ್ರತ್ಯೇಕ ಘಟನೆ: ರಜೆ ತಂದ ಆಪತ್ತು; ಈಜಲು ತೆರಳಿದ್ದ ಐವರು ಬಾಲಕರು ನೀರುಪಾಲು

ಬೆಳಗಾವಿ, ಮಾರ್ಚ್​ 30: ಈಜಲು ತೆರಳಿದ್ದ ಇಬ್ಬರು ಬಾಲಕರು (boys) ನೀರುಪಾದ (death) ಘಟನೆ ಜಿಲ್ಲೆ ಹುಕ್ಕೇರಿ ತಾಲೂಕಿನ ಹಳೆಗುಡಗನಟ್ಟಿ ಗ್ರಾಮದ ಬಳಿಯ ಹಿಡಕಲ್​ ಡ್ಯಾಮ್​ನ ಹಿನ್ನೀರಲ್ಲಿ ನಡೆದಿದೆ. ಕೃಷ್ಣಾ ಖಾನಾಪುರಿ(14) ಮತ್ತು ಪ್ರಜ್ವಲ್ ಗೋಕಾರ್(13) ಮೃತ ಬಾಲಕರು. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

ನಡೆದಿದ್ದೇನು?

ಹಿಡಕಲ್ ಜಲಾಶಯ ಹಿನ್ನೀರಿನಲ್ಲಿ ಬಾಲಕರು ಈಜುಲು ತೆರಳಿದ್ದರು. ಈ ವೇಳೆ ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರ ಶವಗಳನ್ನ ಸ್ಥಳೀಯರು ಮತ್ತು ಪೊಲೀಸರು ಹೊರತೆಗೆದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಎತ್ತಿನ ಮೈತೊಳೆಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ದುರ್ಮರಣ

ಎತ್ತಿನ ಮೈತೊಳೆಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ದುರ್ಮರಣ ಹೊಂದಿರುವಂತಹ ಘಟನೆ ಗದಗ ತಾಲೂಕಿನ ಹಾತಲಗೇರಿ ಗ್ರಾಮದಲ್ಲಿ ನಡೆದಿದೆ. ಮುತ್ತಪ್ಪ ಮುರ್ಲಾಪುರ(20) ಮೃತ ಯುವಕ. ಗದಗ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಮಕ್ಕಳ ಪಾಲಿಗೆ ಮೃತ್ಯುಕೂಪವಾದ ಕೃಷಿಹೊಂಡ: ಈಜಲು ಹೋದ ನಾಲ್ವರು ಜಲಸಮಾಧಿ

ಸಂಬಂಧಿಕರ ಮನೆಗೆ ಬಂದಿದ್ದ ಮುಳುಗುಂದ ಗ್ರಾಮದ ಮುತ್ತಪ್ಪ ಮುರ್ಲಾಪುರ ಈ ವೇಳೆ ಎತ್ತಿನ ಮೈ ತೊಳೆಯಲು ಕೆರೆಗೆ ಹೋದಾಗ ದುರ್ಘಟನೆ ಸಂಭವಿಸಿದೆ. ಆಯಾತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಯುವಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.

ಕೃಷಿಹೊಂಡಕ್ಕೆ ಬಿದ್ದು ಬಾಲಕಿ ಸಾವು

ಆಟವಾಡುವ ವೇಳೆ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿಯಲ್ಲಿ ನಡೆದಿದೆ. ಕೀರ್ತನಾ(10) ಮೃತ ಬಾಲಕಿ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಜಲು ಹೋಗಿದ್ದ SSLC ವಿದ್ಯಾರ್ಥಿ ಸಾವು

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಸ್ನೇಹಿತರ ಜತೆ ಈಜಲು ಹೋಗಿದ್ದ SSLC ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕುಶಾಲ್​(16) ಮೃತ ವಿದ್ಯಾರ್ಥಿ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿಯಿಂದ ಮೃತದೇಹಕ್ಕೆ ಶೋಧ ಕಾರ್ಯ ನಡೆದಿದೆ.

ಇದನ್ನೂ ಓದಿ: ಸ್ನೇಹಿತರನ್ನು ಮೀಟ್ ಮಾಡಲು ಬಂದಿದ್ದ ವಿದ್ಯಾರ್ಥಿ ದುರಂತ ಅಂತ್ಯ: 12ನೇ ಮಹಡಿಯಿಂದ ಬಿದ್ದು ಸಾವು

ನಿನ್ನೆ ಶಾಲೆಯ ವಿಶೇಷ ತರಗತಿ ಮುಗಿಸಿಕೊಂಡು ಮನೆಗೆ ತೆರಳಿದ್ದ ವಿದ್ಯಾರ್ಥಿ ಕುಶಾಲ್, ಬಳಿಕ ಸ್ನೇಹಿತರ ಜೊತೆಗೆ ಕೆರೆಗೆ ತೆರಳಿದ್ದು, ಕೆರೆಯ ಆಳ ಪ್ರದೇಶದಲ್ಲಿ ಮುಳುಗಿದ್ದಾನೆ. ಕೂಡಲೇ ಸ್ಥಳದಲ್ಲಿದ್ದ ಸ್ನೇಹಿತರು ಹಾಗೂ ಕುರಿಗಾಯಿಯಿಂದ ರಕ್ಷಿಸಲು ಯತ್ನಿಸಲಾಗಿದೆ. ಆದರೆ ಕುಶಾಲ್ ದೇಹ ನಾಪತ್ತೆಯಾಗಿದೆ.

ಪೋಷಕರ ಗಮನಕ್ಕೆ

ಸದ್ಯ ಬೇಸಿಗೆ ರಜೆ ಆರಂಭವಾಗಿದೆ. ಹೀಗಾಗಿ ಪೋಷಕರು ತಮ್ಮ ಚಿಕ್ಕ ಮಕ್ಕಳ ಚಲನವಲನಗಳ ಬಗ್ಗೆ ಗಮನಹರಿಸಬೇಕಿದೆ. ಒಮ್ಮೆ ಹೋದ ಜೀವ ಮತ್ತೆ ವಾಪಸ್ ಬರಲ್ಲ. ಹಾಗಾಗಿ ಮಕ್ಕಳನ್ನ ಬಾವಿ, ಕೆರೆ-ಕಟ್ಟೆಗಳು, ಕೃಷಿ ಹೊಂಡಗಳು, ಸ್ವಿಮ್ಮಿಂಗ್ ಪೂಲ್, ನದಿ ಬಳಿ ಬಿಡದಿರುವುದು ಉತ್ತಮ. ಒಂದು ಸಣ್ಣ ನಿರ್ಲಕ್ಷ್ಯದಿಂದ ಮಕ್ಕಳ ಜೀವವೇ ಹೋಗಬಹುದು ಜಾಗರೂಕರಾಗಿರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *