Hanuman Jayanti 2026: ಏಪ್ರಿಲ್ 02 ಹನುಮ ಜಯಂತಿ; ಈ ದಿನ ತಪ್ಪದೇ ಈ ಸರಳ ಪರಿಹಾರ ಅನುಸರಿಸಿ!

Hanuman Jayanti 2026: ಏಪ್ರಿಲ್ 02 ಹನುಮ ಜಯಂತಿ; ಈ ದಿನ ತಪ್ಪದೇ ಈ ಸರಳ ಪರಿಹಾರ ಅನುಸರಿಸಿ!

ಹಿಂದೂ ಧರ್ಮದಲ್ಲಿ ಚೈತ್ರ ಮಾಸದ ಹುಣ್ಣಿಮೆಗೆ ಅಪಾರ ಪ್ರಾಮುಖ್ಯತೆಯಿದೆ. ಪುರಾಣಗಳ ಪ್ರಕಾರ, ಶ್ರೀರಾಮನ ಪರಮ ಭಕ್ತ ಹನುಮಂತನು ಜನಿಸಿದ ಈ ಪವಿತ್ರ ದಿನವನ್ನು ‘ಹನುಮ ಜಯಂತಿ‘ ಅಥವಾ ‘ಹನುಮಾನ್ ಜನ್ಮೋತ್ಸವ’ ಎಂದು ದೇಶಾದ್ಯಂತ ಅತ್ಯಂತ ಭಕ್ತಿ-ಭಾವದಿಂದ ಆಚರಿಸಲಾಗುತ್ತದೆ. ಈ ವರ್ಷ ಏಪ್ರಿಲ್ 2 ರಂದು ಹನುಮಾನ್ ಜಯಂತಿ ಬಂದಿದ್ದು, ಈ ದಿನದಂದು ಬಜರಂಗಬಲಿಯನ್ನು ಆರಾಧಿಸುವುದರಿಂದ ಜೀವನದ ಸಕಲ ಭಯ ಹಾಗೂ ಕಷ್ಟಗಳು ದೂರವಾಗುತ್ತವೆ ಎಂಬ ಬಲವಾದ ನಂಬಿಕೆಯಿದೆ. ವಿಶೇಷವಾಗಿ ಜಾತಕದಲ್ಲಿರುವ ಮಂಗಳ ದೋಷದ ಪ್ರಭಾವವನ್ನು ತಗ್ಗಿಸಲು ಈ ದಿನದ ಪೂಜೆ ಅತ್ಯಂತ ಫಲಪ್ರದವಾಗಿದೆ.

ಹನುಮಾನ್ ಜಯಂತಿಯಂದು ಕೆಲವು ವಿಶೇಷ ಧಾರ್ಮಿಕ ಕ್ರಮಗಳನ್ನು ಕೈಗೊಳ್ಳುವುದರಿಂದ ಗ್ರಹಗತಿಗಳ ಅಶುಭ ಫಲಗಳನ್ನು ದೂರ ಮಾಡಬಹುದು. ಅಂತಹ ಕೆಲವು ಪರಿಣಾಮಕಾರಿ ಪರಿಹಾರಗಳು ಇಲ್ಲಿವೆ:

ಸಿಂಧೂರ ಮತ್ತು ಮಲ್ಲಿಗೆ ಎಣ್ಣೆ ಸಮರ್ಪಣೆ:

ಹನುಮಂತನಿಗೆ ಮಲ್ಲಿಗೆ ಎಣ್ಣೆಯಲ್ಲಿ ಬೆರೆಸಿದ ಸಿಂಧೂರವನ್ನು (ಚೋಳ) ಅರ್ಪಿಸುವುದು ಅತ್ಯಂತ ಶ್ರೇಷ್ಠ. ಇದು ಮಂಗಳ ಗ್ರಹದ ನಕಾರಾತ್ಮಕ ಪ್ರಭಾವವನ್ನು ಕಡಿಮೆ ಮಾಡಿ, ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ವೃದ್ಧಿಸುತ್ತದೆ.

ಸುಂದರಕಾಂಡ ಪಠಣೆ:

ಈ ದಿನ ಸುಂದರಕಾಂಡವನ್ನು ಪಠಿಸುವುದರಿಂದ ಮನಸ್ಸಿನಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಹಾಗೂ ಮಾಡಿದ ಪಾಪಕರ್ಮಗಳು ದೂರವಾಗಿ ಶಾಂತಿ ಲಭಿಸುತ್ತದೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ರಾಮ ನಾಮ ಜಪ:

ಹನುಮಂತನಿಗೆ ರಾಮ ನಾಮವೆಂದರೆ ಅತ್ಯಂತ ಪ್ರಿಯ. ಆದ್ದರಿಂದ “ರಾಮ್-ರಾಮ್” ಎಂದು 108 ಬಾರಿ ಜಪಿಸುವುದರಿಂದ ಹನುಮಂತನ ಕೃಪೆ ಬೇಗನೆ ದೊರೆಯುತ್ತದೆ ಮತ್ತು ಮಂಗಳ ದೋಷ ನಿವಾರಣೆಯಾಗುತ್ತದೆ.

ನೈವೇದ್ಯ ಮತ್ತು ದಾನ:

ಬಜರಂಗಬಲಿಗೆ ಕೆಂಪು ಗುಲಾಬಿ ಹಾಗೂ ಬೂಂದಿ ಅಥವಾ ಕಡಲೆಹಿಟ್ಟಿನ ಲಡ್ಡುಗಳನ್ನು ಅರ್ಪಿಸುವುದು ಮಂಗಳ ಗ್ರಹವನ್ನು ಶಾಂತಗೊಳಿಸಲು ಸಹಕಾರಿ. ಇದರೊಂದಿಗೆ ಅಗತ್ಯವಿರುವವರಿಗೆ ಕೆಂಪು ಬೇಳೆ ಮತ್ತು ಬೆಲ್ಲವನ್ನು ದಾನ ಮಾಡುವುದರಿಂದ ಗ್ರಹಗಳ ಋಣಾತ್ಮಕ ಪರಿಣಾಮಗಳು ದೂರವಾಗುತ್ತವೆ.

ಬಜರಂಗ ಬಾಣ ಮತ್ತು ಹನುಮಾನ್ ಚಾಲೀಸಾ:

ಮದುವೆಯಲ್ಲಿ ಎದುರಾಗುವ ಅಡೆತಡೆಗಳನ್ನು ನಿವಾರಿಸಲು ಭಕ್ತಿಯಿಂದ ಬಜರಂಗ ಬಾಣ ಪಠಿಸಬೇಕು. ಹಾಗೆಯೇ ದೇವಸ್ಥಾನಕ್ಕೆ ಭೇಟಿ ನೀಡಿ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳು ನಾಶವಾಗಿ ಧನಾತ್ಮಕತೆ ನೆಲೆಸುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *