RCB vs CSK ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂನಿಂದ ಈ ಮಾರ್ಗಗಳಲ್ಲಿ ನಾಳೆ BMTC ವಿಶೇಷ ಬಸ್​​ ಸಂಚಾರ

RCB vs CSK ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂನಿಂದ ಈ ಮಾರ್ಗಗಳಲ್ಲಿ ನಾಳೆ BMTC ವಿಶೇಷ ಬಸ್​​ ಸಂಚಾರ

ಬೆಂಗಳೂರು, ಏಪ್ರಿಲ್​​ 04: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ಮತ್ತು ಚೆನ್ನೈ ಸೂಪರ್​​ ಕಿಂಗ್ಸ್​ ನಡುವೆ ನಾಳೆ ಐಪಿಎಲ್​​ ಮ್ಯಾಚ್​​ ಹಿನ್ನೆಲೆ ಈಗಾಗಲೇ ಅಗತ್ಯ ಕ್ರಮಗಳನ್ನು ಆಯೋಜಕರು ಮತ್ತು ಬೆಂಗಳೂರು ಪೊಲೀಸರು ಕೈಗೊಂಡಿದ್ದಾರೆ. ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್​​ಸಿಎಲ್​​ ಈಗಾಗಲೇ ಮೆಟ್ರೋ ರೈಲುಗಳ ಸಮಯ ವಿಸ್ತರಣೆ ಮಾಡಿರುವ ನಡುವೆ, ಮತ್ತೊಂದು ಗುಡ್​​ ನ್ಯೂಸ್​​ ಸಿಕ್ಕಿದೆ. ಜನಸಂದಣಿ ನಿಯಂತ್ರಣದ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬಿಎಂಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದ್ದು, 8 ಬಸ್​​ಗಳು ಓಡಾಟ ನಡೆಸಲಿವೆ.

ಬಸ್​​ ಸಂಚರಿಸಲಿರುವ ಮಾರ್ಗಗಳು

  • ಚಿನ್ನಸ್ವಾಮಿ ಸ್ಟೇಡಿಯಂ ಟು ಕಾಡುಗೋಡಿ ಬಸ್ ನಿಲ್ದಾಣ, HAL ರಸ್ತೆ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಸರ್ಜಾಪುರ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಎಲೆಕ್ಟ್ರಾನಿಕ್ ಸಿಟಿ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್
  • ಚಿನ್ನಸ್ವಾಮಿ ಸ್ಟೇಡಿಯಂ ಟು ಜನಪ್ರಿಯ ಟೌನ್​ಶಿಪ್, ಮಾಗಡಿ ರಸ್ತೆ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಆರ್.ಕೆ.ಹೆಗಡೆ ನಗರ, ಯಲಹಂಕ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಹೊಸಕೋಟೆ
  • ಚಿನ್ನಸ್ವಾಮಿ ಸ್ಟೇಡಿಯಂ ಟು ಬನಶಂಕರಿ

ಇದನ್ನೂ ಓದಿ: ನಾಳೆ ಬೆಂಗಳೂರಲ್ಲಿ RCB, CSK ಮ್ಯಾಚ್​​; ಅಭಿಮಾನಿಗಳಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಸೂಚನೆ

ಈ ವಿಶೇಷ ಬಿಎಂಟಿಸಿ ಬಸ್​​ಗಳು ಸಿ.ಟಿ.ಒ ಜಂಕ್ಷನ್​​ನಿಂದ ಬಿ.ಆರ್.ವಿ ಜಂಕ್ಷನ್ ವರೆಗೆ ರಸ್ತೆಯ ಎಡ ಭಾಗದಲ್ಲಿ ನಿಲುಗಡೆಯಾಗಲಿದೆ. ಸಾರ್ವಜನಿಕರು ಈ ವ್ಯವಸ್ಥೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

ಸ್ಟೇಡಿಯಂಗೆ ಕೆಲ ವಸ್ತುಗಳನ್ನು ತರುವುದು ನಿಷೇಧ

ಸುರಕ್ಷತೆ ದೃಷ್ಟಿಯಿಂದ ಕ್ರೀಡಾಂಗಣಕ್ಕೆ ಅಭಿಮಾನಿಗಳು ಕೆಲ ವಸ್ತುಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ದಯವಿಟ್ಟು ನಿರ್ಬಂಧಿತ ವಸ್ತುಗಳನ್ನು ತರದೇ, ಸುರಕ್ಷತಾ ತಪಾಸಣೆಯ ಸಿಬ್ಬಂದಿಗಳೊಂದಿಗೆ ಸಹಕರಿಸಿ ಎಂದೂ ಪೊಲೀಸರು ಮನವಿ ಮಾಡಿದ್ದಾರೆ. ಸಂಶಯಾಸ್ಪದ ವಸ್ತುಗಳು ಕಂಡಿಬಂದಲ್ಲಿ ಅವನ್ನು ವಶಕ್ಕೆ ಪಡೆಯುವುದಾಗಿಯೂ ಮುನ್ನೆಚ್ಚರಿಕೆ ನೀಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *