ವಿಚ್ಛೇದಿತ ಮಹಿಳೆಗೂ, ಮನೆ ಕಟ್ಟಲು ಬಂದ ಗೌಂಡಿಗೂ ಲವ್​: ಆಸ್ತಿಗಾಗಿ ನಡೆದಿದ್ದು ಭೀಕರ ಕೊಲೆ!

ವಿಚ್ಛೇದಿತ ಮಹಿಳೆಗೂ, ಮನೆ ಕಟ್ಟಲು ಬಂದ ಗೌಂಡಿಗೂ ಲವ್​: ಆಸ್ತಿಗಾಗಿ ನಡೆದಿದ್ದು ಭೀಕರ ಕೊಲೆ!

ಬೆಳಗಾವಿ, ಏಪ್ರಿಲ್​​ 07: ವಿಚ್ಛೇದಿತ ಮಹಿಳೆಯ ನಂಬಿಕೆ ಗಳಿಸಿ ಆಕೆಯ ಜೊತೆ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದ ವ್ಯಕ್ತಿಯೋರ್ವ ಆಕೆಯ ಆಸ್ತಿ ಲಪಟಾಯಿಸುವ ಆಸೆಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಳೆದ ಮಾರ್ಚ್ 12ರಂದು ಅಥಣಿ ಪಟ್ಟಣದ ಹೊರ ವಲಯದ ಕಬ್ಬಿನ ಗದ್ದೆಯೊಂದರಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ ಪ್ರಕರಣ ಬೆನ್ನತ್ತಿದ್ದ ಪೊಲೀಸರು ಮೃತಳನ್ನು ಅಥಣಿ ಪಟ್ಟಣದ ನಿವಾಸಿ ಸುಜಾತಾ ಪವಾರ್ (35) ಎಂದು ಗುರುತಿಸಿದ್ದು, ಈಕೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪಿ ಕುಮಾರ್ ಹವಾಲ್ದಾರ್​​ ಎಂಬಾತನನ್ನು ಬಂಧಿಸಿದ್ದಾರೆ.

ಇನ್ನು ಕೊಲೆಯಾಗಿರುವ ಈ ಸುಜಾತಳನ್ನ 16 ವರ್ಷಗಳ ಹಿಂದೆ ಹಾರೂಗೇರಿ ಯುವಕನೊಬ್ಬನ ಜೊತೆಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಗಂಡು ಮಗುವೂ ಇತ್ತು. ಆದರೆ ಕುಡಿದು ಬಂದು ಗಂಡ ಕಿರುಕುಳ ನೀಡುತ್ತಾನೆ ಎಂಬ ಕಾರಣಕ್ಕೆ 13 ವರ್ಷಗಳ ಬಳಿಕ ಪತಿ ತೊರೆದು ಸುಜಾತಾ  ತವರು ಸೇರಿದ್ದಳು. ಗಂಡನಿಂದ ವಿಚ್ಛೇದನ ಕೂಡ ಪಡೆದು, ಆತನ ಕಡೆಯಿಂದ ಸಿಕ್ಕಿದ್ದ ಮನೆ ಕೂಡ ಮಾರಿ ಅದರಿಂದ ಬಂದ ಹಣದಿಂದ ಅಥಣಿ ಹೊರ ವಲಯದಲ್ಲಿ ಸೈಟ್ ಕೂಡ ಖರೀದಿಸಿದ್ದಳು. ಗಂಡು ದಿಕ್ಕಿಲ್ಲದ ತವರು ಮನೆಗೆ ಆಧಾರವಾಗಿದ್ದ ಈಕೆ ತಾಯಿ ಬಾಡಿಗೆ ಮನೆಯಲ್ಲಿದ್ದ ಕಾರಣ ಸ್ವಂತದ್ದೊಂದು ಮನೆ ಬೇಕು ಎಂದು ಖರೀದಿಸಿದ್ದ ಜಾಗದಲ್ಲಿ ಹೊಸ ಮನೆ ಕಟ್ಟಲು ಮುಂದಾಗಿದ್ದಳು. ಈ ವೇಳೆ ಗೌಂಡಿ ಕುಮಾರ್ ಹವಾಲ್ದಾರನ ಪರಿಚಯ ಸುಜಾತಾಳಿಗಾಗಿತ್ತು. ಮನೆ ಕಟ್ಟಲು ಸಹಾಯ ಮಾಡವ ನೆಪದಲ್ಲಿ ಸುಜಾತಾಳ ವಿಶ್ವಾಸ ಗಳಿಸಿದ್ದ ಈತ, ನಿನ್ನ ಮದುವೆ ಆಗ್ತೀನಿ ಎಂದು ಹೇಳಿ ದೈಹಿಕ ಸಂಬಂಧ ಕೂಡ ಬೆಳೆಸಿದ್ದ. ಆದರೆ ಕಳೆದ 2 ವರ್ಷಗಳಿಂದ ಇವರ ನಡುವಿನ ಸಂಬಂಧ ಹಳಸಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ

ಅಲ್ಲದೆ, ಮದುವೆ ಆಗಬೇಕು ಎಂದರೆ ಕಟ್ಟಿದ ಮನೆಯನ್ನ ತನ್ನ ಹೆಸರಿಗೆ ಮಾಡಬೇಕು ಎಂದು ಕುಮಾರ್ ಸುಜಾತಾಗೆ ಒತ್ತಡ ಹಾಕಲಾರಂಭಿಸಿದ್ದ. ಆದರೆ ಮಗನಿದ್ದಾನೆ, ತಾನು ಮನೆ ಕೊಡಲ್ಲ ಎಂದು ಸುಜಾತಾ ಹೇಳಿದ್ದಳು. ಇದರಿಂದ ಪಿತ್ತ ನೆತ್ತಿಗೇರಸಿಕೊಂಡಿದ್ದ ಈತ ಮಾರ್ಚ್ 5ರಂದು ಮಧ್ಯಾಹ್ನ ಕುಡಿದು ಬಂದು ಸುಜಾತ ಜೊತೆಗೆ ಗಲಾಟೆ ನಡೆಸಿದ್ದಾನೆ. ಮಾತಾಡೋದಿದೆ ಅಂತಾ ಬೈಕ್ ಮೇಲೆ ಕರೆದುಕೊಂಡು ಹೋಗಿ ಕೊಲೆ ಮಾಡಿ ವಾಪಾಸ್ ಆಕೆಯ ಮನೆಗೆ ಬಂದು ಸಾಮಗ್ರಿಗಳ ಸಮೇತ ಹೊರ ನಡೆದಿದ್ದಾನೆ. ಈ ವೇಳೆ ಸುಜಾತಾಳ 15ವರ್ಷದ ಮಗ ಪ್ರಶ್ನೆ ಮಾಡಿದಾಗ ತನ್ನ ಜೊತೆಗೆ ಜಗಳ ಮಾಡಿ ಗೆಳತಿ ಮನೆಗೆ ನಿಮ್ಮಮ್ಮ ಹೋಗಿದ್ದಾಳೆ. ನಾನು ಬೈಯುತ್ತೇನೆಂದು ಪೋನ್ ಸ್ವಿಚ್ಛ್ ಆಫ್ ಮಾಡಿದ್ದಾಳೆ. ತಾನು ಕೂಡ ಜಾತ್ರೆ ಹೋಗುತ್ತೇನೆಂದು ಸುಳ್ಳು ಹೇಳಿ ತೆರಳಿದ್ದ. ಇತ್ತ ಸುಜಾತಾ ತಾಯಿ ಕೂಡ ಏನೋ ಬೇಜಾರಾಗಿ ಮಗಳು ಪ್ರತಿ ವರ್ಷದಂತೆ ಈ ಬಾರಿಯೂ ಗೆಳೆತಿಯರ ಜೊತೆಗೆ ಶ್ರೀಶೈಲಕ್ಕೆ ಹೋಗಿದ್ದಾಳೆ ಎಂದು ಸುಮ್ಮನಾಗಿದ್ದಳು. ಆದರೆ  ಮನೆಗೆ ಪೊಲೀಸರು ಬಂದು ಸುಜಾತಾ ಸಾವಿನ ವಿಷಯ ತಿಳಿಸುತ್ತಿದ್ದಂತೆ ಕುಮಾರನ ಕಳ್ಳಾಟ ಬಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Leave a Reply

Your email address will not be published. Required fields are marked *