ಕಾಂಗ್ರೆಸ್​​ಗೆ ದೊಡ್ಡ ಶಾಕ್; ಅಸ್ಸಾಂನಲ್ಲಿ ಚುನಾವಣೆಗೂ ಕೆಲವೇ ಗಂಟೆ ಮೊದಲು ಪಕ್ಷಕ್ಕೆ ಅಭ್ಯರ್ಥಿ ರಾಜೀನಾಮೆ!

ಕಾಂಗ್ರೆಸ್​​ಗೆ ದೊಡ್ಡ ಶಾಕ್; ಅಸ್ಸಾಂನಲ್ಲಿ ಚುನಾವಣೆಗೂ ಕೆಲವೇ ಗಂಟೆ ಮೊದಲು ಪಕ್ಷಕ್ಕೆ ಅಭ್ಯರ್ಥಿ ರಾಜೀನಾಮೆ!

ಗುವಾಹಟಿ, ಏಪ್ರಿಲ್ 8: ಅಸ್ಸಾಂನಲ್ಲಿ ಮತದಾನಕ್ಕೆ (Assam Assembly Elections) ಕೆಲವೇ ಗಂಟೆಗಳು ಬಾಕಿ ಇರುವಾಗ ಉದಲ್ಗುರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ಡೈಮರಿ ಪಕ್ಷವನ್ನು ತೊರೆಯುವುದಾಗಿ ಘೋಷಿಸಿದ್ದಾರೆ. ಅವರು ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ, ಅವರು ಇನ್ನೂ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷಕ್ಕೆ ಸಲ್ಲಿಸಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ. ಸುರೇನ್ ಅವರ ಈ ನಿರ್ಧಾರದಿಂದ ಕಾಂಗ್ರೆಸ್​ಗೆ ದೊಡ್ಡ ಶಾಕ್ ಉಂಟಾಗಿದೆ.

ಈ ಬಗ್ಗೆ ಚುನಾವಣಾ ಆಯೋಗದ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದು, ಪಕ್ಷಕ್ಕೆ ರಾಜೀನಾಮೆ ನೀಡಿದರೂ ಸುರೇನ್ ಡೈಮರಿ ಅವರ ಹೆಸರು ಇವಿಎಂನಲ್ಲಿ ಇರಲಿದೆ. ನಾಮಪತ್ರ ಹಿಂತೆಗೆದುಕೊಳ್ಳುವ ಗಡುವು ಬಹಳ ಹಿಂದೆಯೇ ಮುಗಿದಿರುವುದರಿಂದ ಜನರು ನಾಳೆ ಅವರಿಗೆ ಮತ ಚಲಾಯಿಸಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಕಾಂಗ್ರೆಸ್ ಪಕ್ಷವು ತನ್ನ ಪರವಾಗಿ ಪ್ರಚಾರವನ್ನು ನಿರ್ಲಕ್ಷಿಸಿದೆ ಎಂದು ಸುರೇನ್ ಡೈಮರಿ ಆರೋಪಿಸಿದ್ದಾರೆ. ಈ ಬಗ್ಗೆ ವರದಿಗಾರರೊಂದಿಗೆ ಮಾತನಾಡಿದ ಸುರೇನ್ ಡೈಮರಿ, ತಮ್ಮ ಉಮೇದುವಾರಿಕೆಯ ಉದ್ದಕ್ಕೂ ಕಾಂಗ್ರೆಸ್ ಪಕ್ಷದ ನಾಯಕರು ಅಗತ್ಯ ಬೆಂಬಲ ಒದಗಿಸಿಲ್ಲ ಎಂದು ಆರೋಪಿಸಿದ್ದಾರೆ.

“ನನಗೆ ಪಕ್ಷ ಅಥವಾ ಅದರ ನಾಯಕರಿಂದ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಆದ್ದರಿಂದ ನಾನು ಪಕ್ಷ ಬಿಟ್ಟು ಹೊರಟಿದ್ದೇನೆ. ನನಗೆ ಯಾವುದೇ ಬೆಂಬಲ ಸಿಗಲಿಲ್ಲ. ಅದಕ್ಕಾಗಿಯೇ ನಾನು ಹಿಂದೆ ಸರಿದಿದ್ದೇನೆ. ಪಕ್ಷದ ನಾಯಕರನ್ನು ಸಂಪರ್ಕಿಸಲು ನಾನು ಪದೇ ಪದೇ ಪ್ರಯತ್ನಗಳನ್ನು ಮಾಡಿದರೂ ಉತ್ತರ ಸಿಗಲಿಲ್ಲ” ಎಂದು ಅವರು ಹೇಳಿದ್ದಾರೆ.

ಅಸ್ಸಾಂನಲ್ಲಿ ನಾಳೆ ಅಂದರೆ ಏಪ್ರಿಲ್ 9ರಂದು ಮತದಾನ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *