ಟಿಸಿಎಸ್‌ ವಿಶ್ವ 10ಕೆ ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ಸಿಎಂ, ಡಿಸಿಎಂಗೆ ತೇಜಸ್ವಿ ಸೂರ್ಯ ಆಗ್ರಹ

ಟಿಸಿಎಸ್‌ ವಿಶ್ವ 10ಕೆ ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ಸಿಎಂ, ಡಿಸಿಎಂಗೆ ತೇಜಸ್ವಿ ಸೂರ್ಯ ಆಗ್ರಹ

ಬೆಂಗಳೂರು, ಏಪ್ರಿಲ್​ 09: ‘ಎಂದೆಂದಿಗೂ ಬೆಂಗಳೂರು’ ಥೀಮ್‌ ಅಡಿಯಲ್ಲಿ 18 ಆವೃತ್ತಿಯ ಟಿಸಿಎಸ್ ವಿಶ್ವ 10 ಓಟವು ಏಪ್ರಿಲ್​ 26ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಕಳೆದ ವರ್ಷ ರಸ್ತೆಗಳಲ್ಲಿ ಎಲ್ಲೆಡೆ ಗುಂಡಿಗಳೇ ತುಂಬಿದ್ದರಿಂದ ಓಟಗಾರರು ತೊಂದರೆ ಅನುಭವಿಸಿದ್ದರು. ಆದರೆ ಈ ಭಾರಿ ಹಾಗಾಗಬಾರದು. ಈ ನಿಟ್ಟಿನಲ್ಲಿ ರೇಸ್ ನಡೆಯುವ ಮಾರ್ಗದಲ್ಲಿನ ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಿಎಂ, ಡಿಸಿಎಂ ಮತ್ತು ಜಿಬಿಎ ಆಯುಕ್ತರಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಈ ರೇಸ್ ಬೆಂಗಳೂರಿನ ಹೆಮ್ಮೆ. ಭಾರತದಾದ್ಯಂತ ಓಟಗಾರರು ಭಾಗವಹಿಸುತ್ತಾರೆ. ಅವರಿಗೆ ನಿರಾಶೆಯಾಗಬಾರದು. ನಗರದ ಎಲ್ಲಾ ರಸ್ತೆಗಳನ್ನು ಸರಿಪಡಿಸುವುದು ನಿಮ್ಮಿಂದ ತುಂಬಾ ಕಷ್ಟ ಎಂದು ನಮಗೆ ಗೊತ್ತು, ಹಾಗಾಗಿ 10 ಕಿ.ಮೀ ರಸ್ತೆಯನ್ನು ದುರಸ್ತಿ ಮಾಡುವಂತೆ ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *