ರಣವೀರ್​​ ತಲೆಗೇರಿತೇ ‘ಧುರಂಧರ್ 2’ ಯಶಸ್ಸು? ನಡೆದುಕೊಂಡ ರೀತಿಗೆ ಶುರುವಾಗಿದೆ ಚರ್ಚೆ

ರಣವೀರ್​​ ತಲೆಗೇರಿತೇ ‘ಧುರಂಧರ್ 2’ ಯಶಸ್ಸು? ನಡೆದುಕೊಂಡ ರೀತಿಗೆ ಶುರುವಾಗಿದೆ ಚರ್ಚೆ

ರಣವೀರ್ ಸಿಂಗ್ ಅವರು ಚಿತ್ರರಂಗದ ಹಿನ್ನೆಲೆ ಹೊಂದಿದ್ದರೂ ಅವರು ಸಾಕಷ್ಟು ಏರಿಳಿತ ಅನುಭವಿಸಬೇಕಾಯಿತು. ಅವರನ್ನು ಅನೇಕರು ನಿರ್ಲಕ್ಷಿಸಿದ್ದರು. ಈಗ ‘ಧುರಂಧರ್’ ಹಾಗೂ ‘ಧುರಂಧರ್ 2’ ಮೂಲಕ ಎಲ್ಲರಿಗೂ ಅವರು ಉತ್ತರ ನೀಡಿದ್ದಾರೆ. ಈ ಸಂದರ್ಭದಲ್ಲಿ ಒಂದು ವಿಡಿಯೋ ವೈರಲ್ ಆಗಿದೆ. ಬಾಲಿವುಡ್​ ಸೂಪರ್​ ಸ್ಟಾರ್ ಶಾರುಖ್ ಖಾನ್ (Shahr Rukh Khan) ಅವರನ್ನು ರಣವೀರ್ ಸಿಂಗ್ ಸಂಪೂರ್ಣವಾಗಿ ನಿರ್ಲಕ್ಷಿಸಿದರೇ ಎನ್ನುವ ಪ್ರಶ್ನೆ ಮೂಡಿದೆ. ರಣವೀರ್​​ಗೆ ಯಶಸ್ಸು ತಲೆಗೇರಿದೆ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಅನಂತ್ ಅಂಬಾನಿ ಗುಜರಾತ್​​ನ ಜಾಮ್​​ನಗರದಲ್ಲಿ ಅದ್ದೂರಿ ಬರ್ತ್​​ಡೇ ಪಾರ್ಟಿ ಆಯೋಜನೆ ಮಾಡಿದ್ದರು. ಇದಕ್ಕೆ ಸಲ್ಮಾನ್ ಖಾನ್, ಶಾರುಖ್ ಖಾನ್, ರಣವೀರ್ ಸಿಂಗ್ ಸೇರಿದಂತೆ ಅನೇಕರು ಆಗಮಿಸಿದ್ದರು. ಎಲ್ಲರೂ ಭರ್ಜರಿಯಾಗಿ ಪಾರ್ಟಿ ಮಾಡಿದ್ದಾರೆ. ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಪಾರ್ಟಿಯ ಹೈಲೈಟ್ ಎಂದರೆ ಅದು ರಣವೀರ್ ಸಿಂಗ್ ಆಗಿದ್ದರು.

‘ಧುರಂಧರ್ 2’ ಸಕ್ಸಸ್ ಬಳಿಕ ಬಾಲಿವುಡ್ ಸೆಲೆಬ್ರಿಟಿಗಳಿಗೆ ರಣವೀರ್ ಸಿಂಗ್ ಅವರು ಕಾಣಿಸಿದ್ದು ಈಗಲೇ. ಅವರನ್ನು ಎಲ್ಲರೂ ಬಂದು ಮಾತನಾಡಿಸುತ್ತಿದ್ದರು. ಈಗ ವೈರಲ್ ಆಗಿರೋ ವಿಡಿಯೋದಲ್ಲೂ ರಣವೀರ್ ಸಿಂಗ್ ಸುತ್ತಲೂ ಅತಿಥಿಗಳು ನಿಂತಿದ್ದರು. ಅನಂತ್ ಅಂಬಾನಿ ಕೂಡ ಇದ್ದರು. ಆಗ ಶಾರುಖ್ ಖಾನ್ ರಣವೀರ್ ಹೆಗಲ ಮೇಲೆ ಕೈ ಹಾಕಿದರು. ಆ ಬಳಿಕ ಕೆನ್ನೆಯನ್ನು ಮುಟ್ಟಿದರು. ಅವರು ಅನಂತ್ ಕಡೆ ಹೋದರು. ಆದರೆ ರಣವೀರ್ ಅದನ್ನು ನಿರ್ಲಕ್ಷಿಸಿದರು ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ‘ಶಾರುಖ್ ಖಾನ್ ಅವರನ್ನು ರಣವೀರ್ ಗಮನಕ್ಕೆ ತೆಗೆದುಕೊಳ್ಳಲಿಲ್ಲ’ ಎಂದು ಅನೇಕರು ಹೇಳಿದರು. ಇನ್ನೂ ಕೆಲವರು ‘ಇದೊಂದು ಕ್ಲಿಪ್ ನೋಡಿ ನೋಡಿ ನೀವು ಎಲ್ಲವನ್ನೂ ಹೇಗೆ ನಿರ್ಧರಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ರಣವೀರ್ ಸಿಂಗ್ ಕೆನ್ನೆ ಮುಟ್ಟಿ ಮಾತಾಡಿಸಿದ ಶಾರುಖ್ ಖಾನ್; ವಿಡಿಯೋ ವೈರಲ್

ಖ್ಯಾತ ಉದ್ಯಮಿ ಮೋಹಿತ್ ಕಾಂಬೋಜ್ ಅವರ ಪುತ್ರಿ ಮಿಷ್ಕಾ ಕಾಂಬೋಜ್ ಅವರ ಅದ್ದೂರಿ ಹುಟ್ಟುಹಬ್ಬದ ಪಾರ್ಟಿ ಮುಂಬೈನಲ್ಲಿ ಇತ್ತೀಚೆಗೆ ನಡೆದಿತ್ತು. ಈ ವೇಳೆ ಶಾರುಖ್ ಹಾಗೂ ರಣವೀರ್ ಒಟ್ಟಾಗಿ ಪಾರ್ಟಿ ಮಾಡಿದ್ದರು. ಹೀಗಾಗಿ, ಸಲ್ಲುನ ನಿರ್ಲಕ್ಷಿಸಿದರು ಎಂಬುದರಲ್ಲಿ ಅರ್ಥವಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *